ಹಿಂದುಳಿದ, ದಲಿತ ಮಠಾಧೀಶ್ವರರ ಒಕ್ಕೂಟದಿಂದ ಶಾಸಕ ಎಸ್ ಆರ್ ವಿಶ್ವನಾಥ್ ಕುಟುಂಬಕ್ಕೆ ಆಶೀರ್ವಾದ :

ಯಲಹಂಕ : ನಗರದ ವಿಜಯನಗರದಲ್ಲಿ ಇರುವ ‘ಹಿಂದುಳಿದ, ದಲಿತ ಮಠಾಧೀಶ್ವರರ ಒಕ್ಕೂಟ(ರಿ)’ದ ಸ್ವಾಮೀಜಿಗಳ ನಿಯೋಗವು ಗುರುವಾರ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ಅವರ ಕುಟುಂಬಕ್ಕೆ ಆಶೀರ್ವದಿಸಿ ಹರಸಿದರು.

ಇದೇ ಸಂದರ್ಭದಲ್ಲಿ ‘ಹಿಂದುಳಿದ, ದಲಿತ ಮಠಾಧೀಶ್ವರರ ಒಕ್ಕೂಟ’ದ ಅಧ್ಯಕ್ಷರಾದ ಜಗದ್ಗುರು ಶ್ರೀ. ನಿರಂಜನಾನಂದಪುರಿ ಮಹಾಸ್ವಾಮಿಗಳು , ಕನಕಗುರುಪೀಠ ಕಾಗಿನೆಲೆ, ಪ್ರಧಾನ ಕಾರ್ಯದರ್ಶಿಗಳಾದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಕುಂಚಿಟಿಗ ಮಹಾಸಂಸ್ಥಾನ ಮಠ, ಹೊಸದುರ್ಗ, ಉಪಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಶಿವಯೋಗಿ ಸಿದ್ದರಾಮೇಶ್ವರ ಗುರುಪೀಠ ಚಿತ್ರದುರ್ಗ, ಗೌರವ ಮಾರ್ಗದರ್ಶಕರಾದ ಜಗದ್ಗುರು ಶ್ರೀ ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು , ಮಹರ್ಷಿ ಭಗೀರಥ ಗುರುಪೀಠ, ಬ್ರಹ್ಮವಿದ್ಯಾನಗರ ಸುಕ್ಷೇತ್ರ, ಕಾರ್ಯಾಧ್ಯಕ್ಷರಾದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠ, ರಾಜನಹಳ್ಳಿ, ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಶಿವಶರಣ ಮಾದರಚನ್ನಯ್ಯ ಗುರುಪೀಠ ಚಿತ್ರದುರ್ಗ, ಒಕ್ಕೂಟದ ನಿರ್ದೇಶಕರಾದ ಜಗದ್ಗುರು ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮಿಗಳು, ಶ್ರೀ ಕೃಷ್ಣ ಯಾದವ ಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ವೀರ ಮಡಿವಾಳ ಮಾಚಿದೇವ ಗುರುಪೀಠ ಚಿತ್ರದುರ್ಗ, ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಗಳು, ಈಡಿಗ ಮಹಾಸಂಸ್ಥಾನ ಮಠ, ತೀರ್ಥಹಳ್ಳಿ, ಜಗದ್ಗುರು ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ, ಮುದ್ದೇಬಿಹಾಳ, ಜಗದ್ಗುರು ಶ್ರೀ ಕುಂಬಾರ ಗುಂಡಯ್ಯ ಮಹಾಸ್ವಾಮಿಗಳು,
ಕುಂಬಾರ ಗುಂಡಯ್ಯ ಗುರುಪೀಠ ತೆಲಸಂಗ, ಅಥಣಿ ಹಾಗೂ ತಿಂಗಳ ಗುರುಪೀಠದ ಪರಮಪೂಜ್ಯರು, ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷೆ ಡಾ.ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಬೆಂ.ಉತ್ತರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ಗ್ರಾಮಾಂತರ ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಮಾಜಿ ಜಿ.ಪಂ.ಸದಸ್ಯರಾದ ಚೊಕ್ಕನಹಳ್ಳಿ ವೆಂಕಟೇಶ್, ಕೊಳ್ಳಿಗಾನಹಳ್ಳಿ ವೆಂಕಟೇಶ್, ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅನಿಲ್ ಬೈರಾಪುರ, ಬಿಜೆಪಿ ಯುವ ಮುಖಂಡರಾದ ಸಾದೇನಹಳ್ಳಿ ಪ್ರಕಾಶ್ ಗೌಡ, ನವೀನ್(ತಂಬಿ) ಸೇರಿದಂತೆ ಹಲವು ಮುಖಂಡರಿದ್ದರು.

Leave a Reply

Your email address will not be published. Required fields are marked *