ಚಿಕ್ಕಬಳ್ಳಾಪುರ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ಮಂಜುಳಾ ದೇವಿ ತಿಳಿಸಿದರು.ಅವರು ನಗರದ ಜಿಲ್ಲಾಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ನಂದಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಭಾರತೀಯ ವೈದ್ಯಕೀಯ ಸಂಘ ಮತ್ತು ಭಾರತೀಯ ಸಂಸ್ಥೆ ಚಿಕ್ಕಬಳ್ಳಾಪುರ ಇವರ ಸಹಯೋಗದಲ್ಲಿ ಪ್ರತಿವರ್ಷ ವಿಶ್ವರಕ್ತದಾನಿಗಳ ದಿನಾಚರಣೆ ಹಾಗೂ ರಾಷ್ಟ್ರೀಯ ಶಸ್ತ್ರ ಚಿಕಿತ್ಸಕರ ಸಪ್ತಾಹಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೇ ಅದರಂತೆ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದೆ ಸದರಿ ರಕ್ತದಾನ ಶಿಬಿರಕ್ಕೆ ಯುವಕ ಯುವತಿಯರು ಸ್ವಯಂ ಪ್ರೇರಿತವಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಮನವಿ ಮಾಡಿದರು.
ರಾಷ್ಟ್ರೀಯ ಶಸ್ತ್ರ ಚಿಕಿತ್ಸಕರ ಚಿಕ್ಕಬಳ್ಳಾಪುರ ಸಿಟಿ ಬ್ರಾಂಚ್ ಅಧ್ಯಕ್ಷರಾದ ಪ್ರೊಫೆಸರ್ ಸುನಿಲ್ ಶುಭಾಷ್ ಜೋಷಿ ಮಾತನಾಡಿ,ರಕ್ತದಾನ ಮಾಡುವುದ ರಿಂದ ಆರೋಗ್ಯಕ್ಕೂ ಒಳಿತಾಗಲಿದೆ ಅಲ್ಲದೆ ರಕ್ತದಾನದ ಅತ್ಯುತ್ತಮ ಆರೋಗ್ಯ ಪ್ರಯೋಜನಗಳಲ್ಲಿ ಹೃದಯ ರಕ್ತನಾಳದ ಆರೋಗ್ಯವೂ ಒಂದಾಗಿದೆ.
ಆಗಾಗ್ಗೆ ರಕ್ತದಾನ ಮಾಡುವುದರಿಂದ ದೇಹದ ಸೂಕ್ತ ಕಬ್ಬಿಣದ ಮಟ್ಟಗಳು ಒಳ್ಳೆ ರೀತಿಯಲ್ಲಿ ಸಹಕಾರಿಯಾಗಲು ಸಾಧ್ಯವಾಗಲಿದೆ ಎಂದರು.
ಕಾರ್ಯದರ್ಶಿ ಡಾ.ಪ್ರಶಾಂತ್. ಎಸ್ ಮೂರ್ತಿ ಮಾತನಾಡಿ ರಕ್ತದಾನ ಮಾಡುವುದರಿಂದ ಒಂದು ಜೀವದಾನ ಮಾಡಿದಂತಾಗಲಿದೆ,ಇದರಿಂದ ರಕ್ತದಾನ ಮಾಡುವವರಿಗೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ರಕ್ತದಾನಿಗಳು ಆಗಾಗ್ಗೆ ರಕ್ತದಾನ ಮಾಡುವ ಮೂಲಕ ತಮ್ಮ ಕಬ್ಬಿಣದ ಮಟ್ಟವನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಗಂಭೀರ ಹೃದಯ ಸಂಬಂಧಿ ಸಮಸ್ಯೆಗಳ ಸಾಧ್ಯತೆಯನ್ನು ಕಡಿಮೆ ಮಾಡಬಹುದಾಗಿದೆ ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಸ್ವಯಂ ಪ್ರೇರಿತವಾಗಿ ಮಾಡುವುದರ ಜೊತೆಗೆ ಇತರರಲ್ಲೂ ಜಾಗೃತಿ ಮೂಡಿಸಬೇಕು ಎಂದರು.
ಭಾರತೀಯ ವೈದ್ಯಕೀಯ ಸಂಘ ಚಿಕ್ಕಳ್ಳಾಪುರ ಜಿಲ್ಲಾ ಶಾಖೆ ಅಧ್ಯಕ್ಷ ಡಾ.ಕೆ.ಆರ್. ಅನಂತು ಮಾತನಾಡಿ, ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ರೆಡ್ ಕ್ರಾಸ್ ಚಿಕ್ಕಬಳ್ಳಾಪುರ ಶಾಖೆ,ರಾಷ್ಟ್ರೀಯ ಶಸ್ತ್ರ
ಚಿಕಿತ್ಸಕರ ಚಿಕ್ಕಬಳ್ಳಾಪುರ ಸಿಟಿ ಬ್ರಾಂಚ್ ಸಂಯುಕ್ತ ಆಶ್ರಯದಲ್ಲಿ ಈ ಒಂದು ರಕ್ತದಾನ ಶಿಬಿರವನ್ನ ಹಮ್ಮಿಕೊಂಡಿದ್ದು ಇದೊಂದು ಸಾಮಾಜಿಕ ಬದ್ಧತೆಯಿಂದ ರೂಪಿಸಿದ ಕಾರ್ಯಕ್ರಮವಾಗಿದೆ. ಸಂಘ ಸಂಸ್ಥೆಗಳವರು ಅರ್ಹ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಒಂದು ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ನೀಡಬಹುದಾಗಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಖಜಾಂಚಿ ಡಾ.ಅರುಣ್ ಕುಮಾರ್ ಇದ್ದರು.

Leave a Reply

Your email address will not be published. Required fields are marked *