ಚಿಕ್ಕಬಳ್ಳಾಪುರ: ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ವಾಪಸಂದ್ರ ಬಾಲಕಿಯರ ಪ್ರೌಢಶಾಲೆ ಮತ್ತು ಪೋಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವ ರೀತಿಯಲ್ಲಿಯೂ ಅಡ್ಡಿ ಆಗಬಾರದು. ಆದ್ದರಿಂದಲೇ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಉತ್ತಮ ಗುಣಮಟ್ಟದ ಛತ್ರಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸಂದೀಪ್ ರೆಡ್ಡಿಯವರು ತಿಳಿಸಿದರು.
ವಾಪಸಂದ್ರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯನ್ನು ಮತ್ತು ಪೋಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ದತ್ತು ಪಡೆದಿರುವ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್, ಶಾಲೆಗೆ ಎಲ್ಲ ಬಗೆಯ ಮೂಲಭೂತ ಸೌಕರ್ಯಗಳನ್ನೂ ಪೂರೈಸುತ್ತ ಬಂದಿದ್ದು, ವಿದ್ಯಾರ್ಥಿಗಳು ಕೇವಲ ಓದಿನತ್ತ ಗಮನ ಹರಿಸಲು ಇದು ಸಹಕಾರಿಯಾಗಿದೆ ಎಂದರು.

ವಾಪಸಂದ್ರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಪೋಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ

ಚಿಕ್ಕಬಳ್ಳಾಪುರ: ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ವಾಪಸಂದ್ರ ಬಾಲಕಿಯರ ಪ್ರೌಢಶಾಲೆ ಮತ್ತು ಪೋಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವ ರೀತಿಯಲ್ಲಿಯೂ ಅಡ್ಡಿ ಆಗಬಾರದು. ಆದ್ದರಿಂದಲೇ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಉತ್ತಮ ಗುಣಮಟ್ಟದ ಛತ್ರಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸಂದೀಪ್ ರೆಡ್ಡಿಯವರು ತಿಳಿಸಿದರು.
ವಾಪಸಂದ್ರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯನ್ನು ಮತ್ತು ಪೋಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆ ದತ್ತು ಪಡೆದಿರುವ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್, ಶಾಲೆಗೆ ಎಲ್ಲ ಬಗೆಯ ಮೂಲಭೂತ ಸೌಕರ್ಯಗಳನ್ನೂ ಪೂರೈಸುತ್ತ ಬಂದಿದ್ದು, ವಿದ್ಯಾರ್ಥಿಗಳು ಕೇವಲ ಓದಿನತ್ತ ಗಮನ ಹರಿಸಲು ಇದು ಸಹಕಾರಿಯಾಗಿದೆ ಎಂದರು.

Leave a Reply

Your email address will not be published. Required fields are marked *