

























ಯಲಹಂಕ ಸುದ್ದಿ. ಸಿಂಗನಾಯಕನಹಳ್ಳಿ ಗ್ರಾಮಪಂಚಾಯತ್ ಇವರ ಸಹಯೋಗದಲ್ಲಿ ಗ್ರಾಮದ ಅರಳಿಕುಂಟೆ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ ಆಗಿದ್ದು ಇಂದು ನಾಮಫಲಕ ಅನಾವರಣ, ಬಾಗಿನ ಅರ್ಪಣೆ, ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು
ಯಲಹಂಕ ತಾಲ್ಲೂಕು ಶಾಸಕರಾದ ವಿಶ್ವನಾಥ್
ಸರ್ ನಾಮಫಲಕ ಅನಾವರಣ ಮಾಡುವ ಮೂಲಕ ಶುಭ ಹಾರೈಸಿದರು
ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಶಾಸಕರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕೆರೆ ಹೂಳೆತ್ತುವ ಕಾರ್ಯಕ್ರಮ ವಿಶೇಷ ಕಾರ್ಯಕ್ರಮ ಆಗಿದ್ದು ಅರಳಿಕುಂಟೆ ಕೆರೆ ಉತ್ತಮವಾಗಿ ಕಾಮಗಾರಿ ಆಗಿರುತ್ತದೆ ಎಂದರು
ಯಲಹಂಕ ತಾಲ್ಲೂಕು ನಗರ ಪ್ರದೇಶವಾಗಿದ್ದು ಕೈಗಾರಿಕಾಭಿವೃದ್ದಿಯಿಂದ ಕೆರೆಗಳ ಒತ್ತುವರಿ ಯಿಂದ ಅಂತರ್ಜಲ ಕುಸಿತ ವಾಗುತ್ತಿದೆ, ಶುದ್ಧ ಕುಡಿಯುವ ನೀರಿಗೆ ಅಭಾವವಾಗುತ್ತಿದೆ
ತಾಲೂಕಿನಲ್ಲಿ ರಾಗಿ , ತರಕಾರಿ, ದ್ರಾಕ್ಷಿ ಬೆಳೆಯುತ್ತಿದ್ದು ನೀರಿಗೆ ಸಮಸ್ಯೆ ಆಗುವ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೂಲಕ ಹೆಚ್ಚಿನ ಕೆರೆ ಹೂಳೆತ್ತುವ ಕಾರ್ಯಕ್ರಮ ಹಮ್ಮಿಕೊಂಡು ಕೆರೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ತಿಳಿಸಿದರು
ಜಿಲ್ಲಾ ನಿರ್ದೇಶಕರಾದ ಉಮರಬ್ಬ ಸರ್ ಮಾತನಾಡಿ ತಾಲೂಕಿನಲ್ಲಿ ವಾರ್ಷಿಕ 1ರಿಂದ 2 ಕೆರೆ ಹೂಳೆತ್ತುವ ಕಾರ್ಯಕ್ರಮ ಮಾಡಲಾಗುವುದು
ಅರಳಿಕುಂಟೆ ಕೆರೆಗೆ ಯಾವುದೇ ಗಲೀಜು ನೀರು ಬರದಂತೆ ತಡೆಯಬೇಕು,ಕಸ ಇತ್ಯಾದಿ ಗಳನ್ನು ಕೆರೆಗೆ ಹಾಕುವುದನ್ನು ನಿಷೇಧಿಸಬೇಕೆಂದು ಗ್ರಾಮಪಂಚಾಯತ್ ಗೆ ಮನವಿ ಮಾಡಿದರು
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ಸವಿತಾ ಶೆಟ್ಟಿ
ಕೆರೆ ಸಮಿತಿ ಅಧ್ಯಕ್ಷರಾದ ಶ್ರೀ ಕೆಂಪೆಗೌಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮರವತಮ್ಮ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಾಮೋದರ್ ರಾವ್ ಪಂಚಾಯತ್ ಸಧಸ್ಯರಾದ ಜ್ಯೋತಿಕೆಂಪೆಗೌಡ, ಮಂಜುನಾಥ್, ಕುಮಾರಸ್ವಾಮಿ, ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ತಾಲೂಕಿನ ಕೃಷಿ ಮೇಲ್ವಿಚಾರಕರಾದ ರಾಜೇಶ್,ವಲಯ ಮೇಲ್ವಿಚಾರಕರಾದ ಶ್ರೀಮತಿ ಜಮುನಾ ,ವಲಯದ ಸೇವಾಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು