ವಿಜಯಪುರ : ಕಾಲುವೆ ಜಾಲದಲ್ಲಿ ಪಂಪಸೆಟ್‍ಗಳಿಂದ ನೀರು ಎತ್ತುವುದು ನಿರ್ಬಂಧ…

ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿನ ಅಚ್ಚುಕಟ್ಟು ಪ್ರದೇಶದ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳಿಗೆ ಜುಲೈ 27 ರಿಂದ 120 ದಿನಗಳವರೆಗೆ ನೀರು ಬಿಡುಗಡೆ ಮಾಡಲಾಗುತ್ತಿದ್ದು, ರೈತರು ಲಘು ನೀರಾವರಿ ಬೆಳೆಗಳನ್ನು ಬೆಳೆಯಲು ಮಾತ್ರ ಬಳಸಿಕೊಳ್ಳುವಂತೆ ಕೃಷ್ಣಾ ಭಾಗ್ಯ ಜಲ ನಿಗಮದ ರಾಂಪೂರ ಅಧೀಕ್ಷಕ ಅಭಿಯಂತರ ಜಿ.ವಿ.ವೆಂಕಟೇಶಲು ಮನವಿ ಮಾಡಿಕೊಂಡಿದ್ದಾರೆ.

ಅಲಮಟ್ಟಿ ಜಲಾಶಯಕ್ಕೆ ಒಳಹರಿವು ಸಂಪೂರ್ಣವಾಗಿ ಸ್ಥಗಿತವಾದ ನಂತರ ಮುಂಗಾರು ಹಂಗಾಮಿನ ಉಳಿಕೆ ಅವಧಿಗೆ 14 ದಿನ ಚಾಲೂ ಹಾಗೂ 08 ದಿನ ಬಂದ್ ಪದ್ಧತಿ ಅನುಸಾರ ನೀರು ಬಿಡಲಾಗುವುದು. ಪ್ರಸ್ತುತ ನೀರು ಹರಿಸುವ ಕ್ರಮವನ್ನು ಮುಂಬರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಘಟನೋತ್ತರ ಅನುಮೋದನೆ ಪಡೆಯಲಾಗುವುದು.

ಕಾಲುವೆ ಜಾಲದ ಗೇಟ್‍ಗಳಿಗೆ ಹಾನಿ ಮಾಡುವುದು, ಎಸ್ಕೇಪ್‍ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಪನ್‍ಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರನ್ನು ಎತ್ತುವುದನ್ನು ನಿರ್ಬಂಧಿಸಲಾಗಿದೆ. ಈ ಪರಿಸ್ಥಿತಿ ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೈತರು ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸುವುದರ ಮೂಲಕ ಜಲ ನಿಗಮದ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಡಿ ಶಾಖಾ ಕಾಲುವೆಗಳಿಗೆ ನೀರು ಬಿಡುಗಡೆ

ವಿಜಯಪುರ : ಕಾಲುವೆ ಜಾಲದಲ್ಲಿ ಪಂಪಸೆಟ್‍ಗಳಿಂದ ನೀರು ಎತ್ತುವುದು ನಿರ್ಬಂಧ…

ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿನ ಅಚ್ಚುಕಟ್ಟು ಪ್ರದೇಶದ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳಿಗೆ ಜುಲೈ 27 ರಿಂದ 120 ದಿನಗಳವರೆಗೆ ನೀರು ಬಿಡುಗಡೆ ಮಾಡಲಾಗುತ್ತಿದ್ದು, ರೈತರು ಲಘು ನೀರಾವರಿ ಬೆಳೆಗಳನ್ನು ಬೆಳೆಯಲು ಮಾತ್ರ ಬಳಸಿಕೊಳ್ಳುವಂತೆ ಕೃಷ್ಣಾ ಭಾಗ್ಯ ಜಲ ನಿಗಮದ ರಾಂಪೂರ ಅಧೀಕ್ಷಕ ಅಭಿಯಂತರ ಜಿ.ವಿ.ವೆಂಕಟೇಶಲು ಮನವಿ ಮಾಡಿಕೊಂಡಿದ್ದಾರೆ.

ಅಲಮಟ್ಟಿ ಜಲಾಶಯಕ್ಕೆ ಒಳಹರಿವು ಸಂಪೂರ್ಣವಾಗಿ ಸ್ಥಗಿತವಾದ ನಂತರ ಮುಂಗಾರು ಹಂಗಾಮಿನ ಉಳಿಕೆ ಅವಧಿಗೆ 14 ದಿನ ಚಾಲೂ ಹಾಗೂ 08 ದಿನ ಬಂದ್ ಪದ್ಧತಿ ಅನುಸಾರ ನೀರು ಬಿಡಲಾಗುವುದು. ಪ್ರಸ್ತುತ ನೀರು ಹರಿಸುವ ಕ್ರಮವನ್ನು ಮುಂಬರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಘಟನೋತ್ತರ ಅನುಮೋದನೆ ಪಡೆಯಲಾಗುವುದು.

ಕಾಲುವೆ ಜಾಲದ ಗೇಟ್‍ಗಳಿಗೆ ಹಾನಿ ಮಾಡುವುದು, ಎಸ್ಕೇಪ್‍ಗಳ ಮೂಲಕ ಹಳ್ಳಕ್ಕೆ ನೀರು ಹರಿಸುವುದು, ಸೈಪನ್‍ಗಳ ಮೂಲಕ ಮಣ್ಣಿನ ಏರಿಯಲ್ಲಿ ನೀರನ್ನು ಎತ್ತಿಕೊಳ್ಳುವುದು, ಕಾಲುವೆ ಜಾಲದಲ್ಲಿ ಪಂಪುಗಳ ಮೂಲಕ ನೀರನ್ನು ಎತ್ತುವುದನ್ನು ನಿರ್ಬಂಧಿಸಲಾಗಿದೆ. ಈ ಪರಿಸ್ಥಿತಿ ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ರೈತರು ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸುವುದರ ಮೂಲಕ ಜಲ ನಿಗಮದ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *