


ಕುವೆಂಪುನಗರ ವಾರ್ಡ್ ನ ಸಿಂಗಾಪುರದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ :
ಬ್ಯಾಟರಾಯನಪುರ : ಕುವೆಂಪುನಗರ ವಾರ್ಡ್ ವ್ಯಾಪ್ತಿಯ ಸಿಂಗಾಪುರದಲ್ಲಿ ಮುನೇಗೌಡರ ಕುಟುಂಬ ಮತ್ತು ಕುವೆಂಪುನಗರ ವಾರ್ಡ್ ನ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣಬೈರೇಗೌಡ ಅವರು ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಮಾಜಿ ಉಪಮೇಯರ್ ಆನಂದ್, ಮುನೇಗೌಡ, ಬಿಬಿಎಂಪಿ ಮಾಜಿ ಸದಸ್ಯ ಪಾರ್ಥಿಬರಾಜನ್, ಹನುಮಂತೇಗೌಡ, ಆರ್.ಎಂ.ಶ್ರೀನಿವಾಸ್, ರಾಜಣ್ಣ, ವೆಂಕಟೇಶ್(ದೇವೇಗೌಡ), ಮಹಂತೇಶ್ ಸ್ವಾಮಿ, ಎಂ.ವರದರಾಜ್, ಸಿಂಗಾಪುರ ವೆಂಕಟೇಶ್ ಸೇರಿದಂತೆ ಸಿಂಗಾಪುರ ಗ್ರಾಮಸ್ಥರು ಹಾಗೂ ಕುವೆಂಪುನಗರ ವಾರ್ಡ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.