ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ನೂತನ ಅಧ್ಯಕ್ಷೆ ವರಲಕ್ಷ್ಮೀ ಹೇಳಿದ್ದಾರೆ.

ತಾಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನಂತರ ನೂತನ ಅಧ್ಯಕ್ಷೆ ವರಲಕ್ಷ್ಮೀ ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತೇನೆ, ಬಡವರಿಗೆ ನಿವೇಶನ ಸೇರಿದಂತೆ ಅಗತ್ಯ ಕೆಲಸಗಳನ್ನು ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಎಂದು ಅವರು ಭರವಸೆ ನೀಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ರಿಝ್ವಾನಾ ನಜೀರ್ ಅಹಮದ್, ಶಂಶಾದ್ ಮತ್ತು ರೂಪಾ ಅವರುಗಳು ನಾಮಪತ್ರ ಸಲ್ಲಿಸಿದ್ದು ಶಂಶಾದ್ ಮತ್ತು ರೂಪಾ ಅವರುಗಳ ನಾಮಪತ್ರ ತಿರಸ್ಕೃತಗೊಂಡಿದ್ದರ ಹಿನ್ನೆಲೆಯಲ್ಲಿ ರಿಝ್ವಾನಾ ನಜೀರ್ ಅಹಮದ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಭರತ್ ಅವರು ತಿಳಿಸಿದ್ದಾರೆ.

ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಗೌಡ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವುದರ ಜೊತೆಗೆ ಎಲ್ಲ ಜಾತಿ ಮತ್ತು ವರ್ಗದವರ ಬಗ್ಗೆ ಯಾವುದೇ ತಾರತಮ್ಯ ಇಲ್ಲದೇ ಸಾಮಾಜಿಕ ನ್ಯಾಯ ಒದಗಿಸಿಕೊಂಡು ಮುಂದುವರಿಯುತ್ತಿರುವುದು ನಮ್ಮ ಬೂದಿಗೆರೆ ಗ್ರಾಮ ಪಂಚಾಯಿತಿಯ ಹೆಗ್ಗಳಿಕೆಯಾಗಿದೆ ಎಂದರು.

ಜೆಡಿಎಸ್ ಮುಖಂಡ ಶ್ರೀನಾಥ್ ಗೌಡ ಮಾತನಾಡಿ, ಗ್ರಾಮಗಳ ಅಭಿವೃದ್ಧಿ ಕೆಲಸಗಳಿಗೆ ಎಲ್ಲರು ಕೈಜೋಡಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುನ್ನಡೆಯಬೇಕು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವರಲಕ್ಷ್ಮೀ ಹಾಗೂ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರಿಝ್ವಾನಾ ನಜೀರ್ ಅಹಮದ್ ಅವರುಗಳು ಗ್ರಾಮಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣ್ ಗೌಡ ಮುಖಂಡರಾದ ಶಂಕರಪ್ಪ, ಬೈರೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಆನಂದ್, ಟಿಎಪಿಎಂಸಿ ನಿರ್ದೇಶಕ ಮುನಿರಾಜು ಜೆಡಿಎಸ್ ಯುವ ಮುಖಂಡರಾದ ಶ್ರೀನಾಥ್ ಗೌಡ, ರಾಮಾಂಜನೇಯ ದಾಸ್, ಕೋಟಿ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಗಜೇಂದ್ರ, ಚೌಡಪ್ಪ, ಬಿಕೆ ನಾರಾಯಣಸ್ವಾಮಿ, ಶಂಶಾದ್, ಮಂಜುಳಾ, ಶ್ರೀನಿವಾಸ್, ವೆಂಕಟೇಶ್ ,ರೂಪ, ಲಕ್ಷ್ಮಣ್ ಮೂರ್ತಿ, ಪ್ರಮೀಳ, ಆರತಿ, ಮಂಜುನಾಥ್, ಸಂಜಯ್ ಕುಮಾರ್, ಪದ್ಮಾ, ಮೋಹನ್, ರಾಜಶೇಖರ್, ಮಂದಾರ ಮುನಿರಾಜು ಮಂಜುನಾಥ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ:

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಬೆಂಬಲಿತ ನೂತನ ಅಧ್ಯಕ್ಷೆ ವರಲಕ್ಷ್ಮೀ ಹೇಳಿದ್ದಾರೆ.

ತಾಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನಂತರ ನೂತನ ಅಧ್ಯಕ್ಷೆ ವರಲಕ್ಷ್ಮೀ ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತೇನೆ, ಬಡವರಿಗೆ ನಿವೇಶನ ಸೇರಿದಂತೆ ಅಗತ್ಯ ಕೆಲಸಗಳನ್ನು ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಎಂದು ಅವರು ಭರವಸೆ ನೀಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ರಿಝ್ವಾನಾ ನಜೀರ್ ಅಹಮದ್, ಶಂಶಾದ್ ಮತ್ತು ರೂಪಾ ಅವರುಗಳು ನಾಮಪತ್ರ ಸಲ್ಲಿಸಿದ್ದು ಶಂಶಾದ್ ಮತ್ತು ರೂಪಾ ಅವರುಗಳ ನಾಮಪತ್ರ ತಿರಸ್ಕೃತಗೊಂಡಿದ್ದರ ಹಿನ್ನೆಲೆಯಲ್ಲಿ ರಿಝ್ವಾನಾ ನಜೀರ್ ಅಹಮದ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಭರತ್ ಅವರು ತಿಳಿಸಿದ್ದಾರೆ.

ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಗೌಡ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವುದರ ಜೊತೆಗೆ ಎಲ್ಲ ಜಾತಿ ಮತ್ತು ವರ್ಗದವರ ಬಗ್ಗೆ ಯಾವುದೇ ತಾರತಮ್ಯ ಇಲ್ಲದೇ ಸಾಮಾಜಿಕ ನ್ಯಾಯ ಒದಗಿಸಿಕೊಂಡು ಮುಂದುವರಿಯುತ್ತಿರುವುದು ನಮ್ಮ ಬೂದಿಗೆರೆ ಗ್ರಾಮ ಪಂಚಾಯಿತಿಯ ಹೆಗ್ಗಳಿಕೆಯಾಗಿದೆ ಎಂದರು.

ಜೆಡಿಎಸ್ ಮುಖಂಡ ಶ್ರೀನಾಥ್ ಗೌಡ ಮಾತನಾಡಿ, ಗ್ರಾಮಗಳ ಅಭಿವೃದ್ಧಿ ಕೆಲಸಗಳಿಗೆ ಎಲ್ಲರು ಕೈಜೋಡಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುನ್ನಡೆಯಬೇಕು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವರಲಕ್ಷ್ಮೀ ಹಾಗೂ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರಿಝ್ವಾನಾ ನಜೀರ್ ಅಹಮದ್ ಅವರುಗಳು ಗ್ರಾಮಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣ್ ಗೌಡ ಮುಖಂಡರಾದ ಶಂಕರಪ್ಪ, ಬೈರೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಆನಂದ್, ಟಿಎಪಿಎಂಸಿ ನಿರ್ದೇಶಕ ಮುನಿರಾಜು ಜೆಡಿಎಸ್ ಯುವ ಮುಖಂಡರಾದ ಶ್ರೀನಾಥ್ ಗೌಡ, ರಾಮಾಂಜನೇಯ ದಾಸ್, ಕೋಟಿ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಗಜೇಂದ್ರ, ಚೌಡಪ್ಪ, ಬಿಕೆ ನಾರಾಯಣಸ್ವಾಮಿ, ಶಂಶಾದ್, ಮಂಜುಳಾ, ಶ್ರೀನಿವಾಸ್, ವೆಂಕಟೇಶ್ ,ರೂಪ, ಲಕ್ಷ್ಮಣ್ ಮೂರ್ತಿ, ಪ್ರಮೀಳ, ಆರತಿ, ಮಂಜುನಾಥ್, ಸಂಜಯ್ ಕುಮಾರ್, ಪದ್ಮಾ, ಮೋಹನ್, ರಾಜಶೇಖರ್, ಮಂದಾರ ಮುನಿರಾಜು ಮಂಜುನಾಥ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

Leave a Reply

Your email address will not be published. Required fields are marked *