



ನಾಯಕತ್ವಕ್ಕೆ ಉತ್ತಮ ಗುಣಗಳು ಅತ್ಯಗತ್ಯ
ನಾಯಕರಾದವರು ಶಿಸ್ತು, ಧೈರ್ಯ, ಸಮಾನತೆ ಜೊತೆಗೆ ಉತ್ತಮ ನಾಯಕತ್ವದ ಗುಣಗಳನ್ನು ರೂಡಿಸಿಕೊಳ್ಳುವುದು ಅತ್ಯಗತ್ಯ ಎಂದು ನಿವೃತ್ತ ಸೇನಾಧಿಕಾರಿ ದೊಡ್ಡ ಕೆಂಪಯ್ಯ ಅವರು ಹೇಳಿದರು.
ಅವರು ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜು
ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬ್ಯಾಡ್ಜ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ದಿನಾಂಕ 21.6.25 ಶನಿವಾರದಂದು ಶಾಲೆಯ ಚುನಾವಣಾ ಸಮಿತಿಗಾಗಿ ಚುನಾವಣೆಯನ್ನು ನಡೆಸಲಾಗಿತ್ತು. ಈ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಂದು 28.6.25.(ಶುಕ್ರವಾರ) ಸಂಸ್ಥೆಯ ಆವರಣದಲ್ಲಿ ಬ್ಯಾಡ್ಜ್ ವಿತರಿಸುವ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಸೇನಾಧಿಕಾರಿ ದೊಡ್ಡ ಕೆಂಪಯ್ಯ, ಪ್ರಾಂಶುಪಾಲರಾದ ಶ್ರೀಮತಿ ಪ್ರಮೀಳಾ ರಾಜೇಶ್, ಹಾಗೂ ಶ್ರೀಮತಿ ಶೋಭಾ
ಚುನಾಯಿತ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಗಳನ್ನು ವಿಸ್ತರಿಸಿದರು.
ಈ ಕಾರ್ಯಕ್ರಮದಲ್ಲಿ ದೊಡ್ಡ ಕೆಂಪಯ್ಯ ಅವರನ್ನು ಶ್ರೀಮತಿ ಪ್ರಮೀಳ ರಾಜೇಶ್ ಅವರು ಸನ್ಮಾನಿಸಿದರು.
ಈ ಕಾರ್ಯಕ್ರಮ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅವರ ಬ್ಲೆಸ್ಸಾನ್ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಶ್ರೀಮತಿ ಮಾನಸ ಕಾರ್ಯಕ್ರಮ ನಿರೂಪಣೆ ಮಾಡಿದರೆ, ಶ್ರೀಮತಿ ಉಮೇರ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು. ವಂದನಾರ್ಪಣೆಯನ್ನು ಶ್ರೀಮತಿ ಇಶ್ರತ್ ಉನ್ನಿಸ ಅವರು ಮಾಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳು ಶಿಕ್ಷಕ ವೃಂದದವರು ಉತ್ಸುಕತೆಯಿಂದ ಭಾಗವಹಿಸಿದ್ದರು.
ಸಂದರ್ಭದಲ್ಲಿ ವಿಜೇರಾದ ವಿದ್ಯಾರ್ಥಿಗಳ ಪೋಷಕರು ಸಹ ಭಾಗವಹಿಸಿದ್ದು ವಿಶೇಷವಾಗಿತ್ತು.