ದೇವನಹಳ್ಳಿ : ಈ ಹಿಂದಿನ ಕಾಂಗ್ರೆಸ್ ಬೆಂಬಲಿತ ಅಧಿಕಾರದ ಅವಧಿಯಲ್ಲಿ ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ಕೆಲಸಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಮಾರು 35ಕ್ಕೂ ಹೆಚ್ಚು ದೇಶಗಳಿಂದ ನಿಯೋಗಗಳು ಬಂದು ಭೇಟಿ ನೀಡಿ ನೋಡುವ ಮಟ್ಟದಲ್ಲಿ ಮಾದರಿಯಾಗಿ ಅಭಿವೃದ್ಧಿ ನಡೆದಿತ್ತು ಆದರೆ ನಂತರ ಬಂದ ಜೆಡಿಎಸ್ ಬೆಂಬಲಿತರ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಕುಂಠಿತಗೊಂಡು ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಯಿತು. ರಾಜ್ಯದ ಶ್ರೀಮಂತ ಪಂಚಾಯಿತಿ ಎಂದು ಕರೆಯಲ್ಪಡುವ ಅಣ್ಣೇಶ್ವರ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಎಂಬುದೇನು ಇಲ್ಲ ಆದರೆ ಆಡಳಿತ ನಡೆಸಿದವರ ಇಚ್ಛಾಶಕ್ತಿಯ ಕೊರತೆಯಿಂದ ಅಭಿವೃದ್ಧಿ ಕಾಣಲಿಲ್ಲ ಆದರೆ ಈಗ ಮತ್ತೆ ಕಾಂಗ್ರೆಸ್ ಬೆಂಬಲಿತರಿಗೆ ಆಡಳಿತ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಹೆಚ್ಚಿನ ಅಭಿವೃದ್ಧಿ ಕಾಣಲಿದೆ ನೂತನವಾಗಿ ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಉಮಾ ಮುನಿರಾಜು ಮತ್ತು ಉಪಾಧ್ಯಕ್ಷರಾದ ಮುನಿರಾಜಪ್ಪ ಅವರುಗಳು ಎಲ್ಲ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂಬ ಬರವಸೆ ಇದೆ, ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ್ ತಿಳಿಸಿದ್ದಾರೆ.

ತಾಲೂಕಿನ ಕಸಬಾ ಹೋಬಳಿಯ ಅಣ್ಣೆಶ್ವರ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.

ಪಂಚಾಯಿತಿ ವ್ಯಾಪ್ತಿಯ ದೊಡ್ಡಸಣ್ಣೆ, ಅಣ್ಣೇಶ್ವರ ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿಗೆ ಕಾರ್ಯಾದೇಶ ವಾಗಿತ್ತು ಜೆಡಿಎಸ್ ಅಭಿವೃದ್ಧಿ ಕೆಲಸಗಳನ್ನು ನಿರ್ಲಕ್ಷಿಸಿ ಅಭಿವೃದ್ಧಿ ಮರೆತು ದುರಾಡಳಿತದ ರಾಜಕಾರಣದಲ್ಲಿ ತೊಡಗಿದ್ದರಿಂದ ಅದನ್ನು ಅರ್ಧಕ್ಕೆ ಕೈಬಿಟ್ಟರು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಿದರೆ ಮುಂದಿನ ಅವದಿಯಲ್ಲಿಯು ಜನ ನಮ್ಮ ಕೈ ಹಿಡಿಯುತ್ತಾರೆ. ಅಧಿಕಾರ ಶಾಶ್ವತವಲ್ಲ ಸಿಕ್ಕ ಅವಕಾಶವನ್ನು ಬಳಸಿಕೊಂಡು ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶ್ರಮಿಸಬೇಕು ಬಡವರಿಗೆ ನಿವೇಶನಗಳನ್ನು ನೀಡಬೇಕೆಂಬ ಹಲವು ದಿನಗಳ ಬೇಡಿಕೆ ಕೂಡ ಈಡೇರಬೇಕಿದೆ ಎಂದು ನೂತನ ಆಡಳಿತ ಮಂಡಳಿಗೆ ಚಂದ್ರಶೇಖರ್ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮುನಿರಾಜಪ್ಪ, ಎಂ.ನಾರಾಯಣಸ್ವಾಮಿ, ಚನ್ನಹಳ್ಳಿ ನಾರಾಯಣಸ್ವಾಮಿ, ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ ಉಮಾ ಮುನಿರಾಜು, ಉಪಾಧ್ಯಕ್ಷ ಅಣ್ಣೇಶ್ವರ ಮುನಿರಾಜಪ್ಪ, ಸದಸ್ಯರಾದ ರಾಜಣ್ಣ, ಪ್ರಭಾವತಿ ವೇಣುಗೋಪಾಲ್, ಮಂಜುಳ, ರುಕ್ಮಿಣಿ ಯರ್ತಿಗಾನಹಳ್ಳಿ ಗೋಪಾಲ್, ರಾಜಣ್ಣ, ಗೋಪಾಲ, ಮಂಜುಳ, ವೆಂಕಟೇಶ್, ರುಕ್ಮಣಿಯಮ್ಮ, ಶಿಲ್ಪಾವೆಂಕಟೇಶ್, ಮುಕುಂದ ಯುವ ಮುಖಂಡರಾದ ಚಿಕ್ಕಸಣ್ಣೆ ಮುನಿಯಪ್ಪ, ನಂದಕುಮಾರ್, ಚೇತನ್ ಪಿಡಿಓ ಗಂಗರಾಜು ಮುಂತಾದವರು ಇದ್ದರು.

ಅಧಿಕಾರ ಶಾಶ್ವತವಲ್ಲ ಸಿಕ್ಕ ಅವಕಾಶವನ್ನು ಬಳಸಿಕೊಂಡು ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸಬೇಕು. ಮಾಜಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಅಭಿಮತ.

ದೇವನಹಳ್ಳಿ : ಈ ಹಿಂದಿನ ಕಾಂಗ್ರೆಸ್ ಬೆಂಬಲಿತ ಅಧಿಕಾರದ ಅವಧಿಯಲ್ಲಿ ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ಕೆಲಸಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಮಾರು 35ಕ್ಕೂ ಹೆಚ್ಚು ದೇಶಗಳಿಂದ ನಿಯೋಗಗಳು ಬಂದು ಭೇಟಿ ನೀಡಿ ನೋಡುವ ಮಟ್ಟದಲ್ಲಿ ಮಾದರಿಯಾಗಿ ಅಭಿವೃದ್ಧಿ ನಡೆದಿತ್ತು ಆದರೆ ನಂತರ ಬಂದ ಜೆಡಿಎಸ್ ಬೆಂಬಲಿತರ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಕುಂಠಿತಗೊಂಡು ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಯಿತು. ರಾಜ್ಯದ ಶ್ರೀಮಂತ ಪಂಚಾಯಿತಿ ಎಂದು ಕರೆಯಲ್ಪಡುವ ಅಣ್ಣೇಶ್ವರ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಎಂಬುದೇನು ಇಲ್ಲ ಆದರೆ ಆಡಳಿತ ನಡೆಸಿದವರ ಇಚ್ಛಾಶಕ್ತಿಯ ಕೊರತೆಯಿಂದ ಅಭಿವೃದ್ಧಿ ಕಾಣಲಿಲ್ಲ ಆದರೆ ಈಗ ಮತ್ತೆ ಕಾಂಗ್ರೆಸ್ ಬೆಂಬಲಿತರಿಗೆ ಆಡಳಿತ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಹೆಚ್ಚಿನ ಅಭಿವೃದ್ಧಿ ಕಾಣಲಿದೆ ನೂತನವಾಗಿ ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಉಮಾ ಮುನಿರಾಜು ಮತ್ತು ಉಪಾಧ್ಯಕ್ಷರಾದ ಮುನಿರಾಜಪ್ಪ ಅವರುಗಳು ಎಲ್ಲ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂಬ ಬರವಸೆ ಇದೆ, ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ್ ತಿಳಿಸಿದ್ದಾರೆ.

ತಾಲೂಕಿನ ಕಸಬಾ ಹೋಬಳಿಯ ಅಣ್ಣೆಶ್ವರ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.

ಪಂಚಾಯಿತಿ ವ್ಯಾಪ್ತಿಯ ದೊಡ್ಡಸಣ್ಣೆ, ಅಣ್ಣೇಶ್ವರ ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿಗೆ ಕಾರ್ಯಾದೇಶ ವಾಗಿತ್ತು ಜೆಡಿಎಸ್ ಅಭಿವೃದ್ಧಿ ಕೆಲಸಗಳನ್ನು ನಿರ್ಲಕ್ಷಿಸಿ ಅಭಿವೃದ್ಧಿ ಮರೆತು ದುರಾಡಳಿತದ ರಾಜಕಾರಣದಲ್ಲಿ ತೊಡಗಿದ್ದರಿಂದ ಅದನ್ನು ಅರ್ಧಕ್ಕೆ ಕೈಬಿಟ್ಟರು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಿದರೆ ಮುಂದಿನ ಅವದಿಯಲ್ಲಿಯು ಜನ ನಮ್ಮ ಕೈ ಹಿಡಿಯುತ್ತಾರೆ. ಅಧಿಕಾರ ಶಾಶ್ವತವಲ್ಲ ಸಿಕ್ಕ ಅವಕಾಶವನ್ನು ಬಳಸಿಕೊಂಡು ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶ್ರಮಿಸಬೇಕು ಬಡವರಿಗೆ ನಿವೇಶನಗಳನ್ನು ನೀಡಬೇಕೆಂಬ ಹಲವು ದಿನಗಳ ಬೇಡಿಕೆ ಕೂಡ ಈಡೇರಬೇಕಿದೆ ಎಂದು ನೂತನ ಆಡಳಿತ ಮಂಡಳಿಗೆ ಚಂದ್ರಶೇಖರ್ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮುನಿರಾಜಪ್ಪ, ಎಂ.ನಾರಾಯಣಸ್ವಾಮಿ, ಚನ್ನಹಳ್ಳಿ ನಾರಾಯಣಸ್ವಾಮಿ, ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ ಉಮಾ ಮುನಿರಾಜು, ಉಪಾಧ್ಯಕ್ಷ ಅಣ್ಣೇಶ್ವರ ಮುನಿರಾಜಪ್ಪ, ಸದಸ್ಯರಾದ ರಾಜಣ್ಣ, ಪ್ರಭಾವತಿ ವೇಣುಗೋಪಾಲ್, ಮಂಜುಳ, ರುಕ್ಮಿಣಿ ಯರ್ತಿಗಾನಹಳ್ಳಿ ಗೋಪಾಲ್, ರಾಜಣ್ಣ, ಗೋಪಾಲ, ಮಂಜುಳ, ವೆಂಕಟೇಶ್, ರುಕ್ಮಣಿಯಮ್ಮ, ಶಿಲ್ಪಾವೆಂಕಟೇಶ್, ಮುಕುಂದ ಯುವ ಮುಖಂಡರಾದ ಚಿಕ್ಕಸಣ್ಣೆ ಮುನಿಯಪ್ಪ, ನಂದಕುಮಾರ್, ಚೇತನ್ ಪಿಡಿಓ ಗಂಗರಾಜು ಮುಂತಾದವರು ಇದ್ದರು.

Leave a Reply

Your email address will not be published. Required fields are marked *