ಹುಬ್ಬಳ್ಳಿ :- ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಕ್ರಿಯ ಕಾರ್ಯಕರ್ತರಾಗಿ ಮೋಹನ ಹಿರೇಮನಿ ಅವರು ಪ್ರಾರಂಭದಲ್ಲಿ ಕಾರ್ಮಿಕ ವಿಭಾಗ ಜಿಲ್ಲಾ ಅಧ್ಯಕ್ಷ ,ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಏಳು ವರ್ಷ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಏಳು ವರ್ಷ 14 ವರ್ಷಗಳು ಬ್ಲಾಕ್ ಅಧ್ಯಕ್ಷರಾಗಿ, ಕರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಮತ್ತು ಇನ್ನು ವಿವಿಧ ಪ್ರಮುಖ ಹುದ್ದೆಗಳಲ್ಲಿ ಪಕ್ಷಕ್ಕಾಗಿ ಪ್ರಾಮಾಣಿಕ ಸೇವೆಸಲ್ಲಿಸಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯರಾಗಿ ಉತ್ತರ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಪ್ರಬಲ ನಾಯಕರಾಗಿ ಪಕ್ಷ ಸಂಘಟನೆ ಸಮುದಾಯದ ಸಂಘಟನೆ ಮಾಡುತ್ತಾ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತಾ ಮೋಹನ್ ಹಿರೇಮನಿ ಹಗಲಿರುಳೆನ್ನದೆ ಶ್ರಮಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಪೂರ್ವ ಮೀಸಲು ಕ್ಷೇತ್ರದಿಂದ ಮಾದಿಗ ಸಮುದಾಯದ ಜನರು ಬಹು ಸಂಖ್ಯಾತರಾಗಿದ್ದು ಸಮಾಜಕ್ಕೆ ಪ್ರಾಮುಖ್ಯತೆ ನೀಡುವ ಸಲುವಾಗಿ ಸಮಾಜದ ಪ್ರತಿನಿಧಿಯಾಗಿ ವಿಧಾನಸಭೆಯಲ್ಲಿ ಗಟ್ಟಿ ನಿಲುವು ತಾಳಲು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಹಲವು ಬಾರಿ ವಿನಂತಿಸಿಕೊಂಡರು ಟಿಕೆಟ್ ಸಿಗದಿದ್ದಾಗ ಯಾವುದೇ ಬೇಸರ, ಆಕ್ರೋಶ ತೋರದೆ ಅನ್ಯ ಪಕ್ಷಗಳತ್ತ ಮುಖ ಮಾಡದೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದವರಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ತಮ್ಮ ಪಕ್ಷ ನಿಷ್ಠೆ ಮೆರೆದಿದ್ದಾರೆ. ಮಾದಿಗ ಸಮುದಾಯ ಈ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಪರವಾಗಿ ಬೆಂಬಲಿಸುತ್ತಾ ಬಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸೀಟು ಪಡೆಯುವಲ್ಲಿ ಮಾತಿಗೆ ಸಮುದಾಯದ ಪಾತ್ರ ಅಪಾರವಾಗಿದೆ.ಆದರೆ ಕಾಂಗ್ರೆಸ್ ಪಕ್ಷದಿಂದ ಮಾದಿಗ ಸಮುದಾಯದವರಿಗೆ ಟಿಕೆಟ್ ನೀಡುವಲ್ಲಿ ಅನ್ಯಾಯವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಿಕ ಬಂದಾಗಲೆಲ್ಲ ಉತ್ತರ ಕರ್ನಾಟಕವನ್ನು ಕಡೆಗಣಿಸಿ ಸಮುದಾಯಕ್ಕೆ ರಾಜಕೀಯ ಪ್ರತಿನಿತ್ಯವನ್ನು ನಿರಾಕರಿಸಿ ಅನ್ಯಾಯ ಮಾಡುತ್ತಿದೆ ಎಂದು ಭಾವನೆ ಸಮಾಜ ಪ್ರಮುಖರಲ್ಲಿ ಬೇರೂರುತ್ತಿದೆ ಈಗಾಗಲೇ ರಾಜ್ಯದ ದಕ್ಷಿಣ ಭಾಗದ ಮಾದಿಗ ಸಮುದಾಯದ ಟಿ ಎಸ್ ನರಸಿಂಹಮೂರ್ತಿ, ಎನ್ ಮಂಜುನಾಥ ,ಆರ್ ಧರ್ಮಸೇನಾ, ಸಿ ರಮೇಶ್ ,ತಮ್ಮಯ್ಯ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ ಅಲ್ಲದೆ ಎಲ್ ಹನುಮಂತಯ್ಯ ಅವರನ್ನು ರಾಜ್ಯಸಭೆಗೆ ಕಳಿಸಲಾಗಿದೆ. ಆದರೆ ಉತ್ತರ ಕರ್ನಾಟಕದಿಂದ ಮಾದಿಗ ಸಮುದಾಯದ ಆರ್ ಬಿ ತಿಮ್ಮಾಪುರ ಅವರನ್ನು ಹೊರತುಪಡಿಸಿದರೆ ಯಾರೊಬ್ಬರಿಗೂ ಈವರೆಗೂ ವಿಧಾನ ಪರಿಷತ್ ಅವಕಾಶವನ್ನು ಕಲ್ಪಿಸಿಲ್ಲ.ಈ ಮೂಲಕ ಉತ್ತರ ಕರ್ನಾಟಕ ಭಾಗದವರಿಗೆ ರಾಜಕೀಯ ಪ್ರಾತಿನಿತ್ಯ ನೀಡದೆ ತಾರತಮ್ಯ ಮಾಡಲಾಗುತ್ತಿದೆ. ಈ ಪ್ರಾದೇಶಿಕ ಅಸುಮತೋಲನವನ್ನು ಹೋಗಲಾಡಿಸಲು ಹಾಗೂ ಲೋಕಸಭಾ ಚುನಾವಣೆಯಲ್ಲಿ ಈ ಬಗ್ಗೆ ವ್ಯತಿರಿಕ್ತ ಪರಿಣಾಮವಾಗುವುದನ್ನು ತಡೆಗಟ್ಟಲು ಉತ್ತರ ಕರ್ನಾಟಕ ಭಾಗಕ್ಕೆ ರಾಜಕೀಯ ಪ್ರತಿನಿತ್ಯ ನೀಡಿ ಮಾದಿಗ ಸಮುದಾಯದ ನಾಯಕರು ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿ ಧಾರವಾಡ ಪಾಲಿಕೆಯ ಮಾಜಿ ಸದಸ್ಯ ಮೋಹನ್ ಹಿರೇಮನಿ ಅವರನ್ನು ವಿಧಾನಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಈ ಮೂಲಕ ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಿ ಮಾದಿಗ ಸಮುದಾಯಕ್ಕೆ ಸೂಕ್ತ ನ್ಯಾಯ ಹಾಗೂ ನಿಷ್ಠಾವಂತ ಕಾರ್ಯಕರ್ತನಿಗೆ ಸೂಕ್ತ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಸಮಸ್ತ ಮಾದಿಗ ಸಮುದಾಯದ
ಉತ್ತರ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ಕ್ರಿಯಾ ಸಮಿತಿ ಈ ಮೂಲಕ ಒತ್ತಾಯಿಸುತ್ತೇವೆ
ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸುರೇಶ್ ಕನಮಕ್ಕಲ್, ಲೋಕಮಾನ್ಯ ರಾಮದತ್ತ ,ಮಂಜುನಾಥ ಕೋಡಂಪಲ್ಲಿ ,ಬಸವರಾಜ್ ಹೊಸಮನಿ, ಶಂಕರ್ ಭಂಡಾರಿ ,ಹನುಮಂತ ಯಮುನಾಳ್ ಹಾಗೂ ಇತರೆ ಮುಖಂಡರು ಇದ್ದರು.

Leave a Reply

Your email address will not be published. Required fields are marked *