ಯಲಹಂಕ : ರಾಜಾನುಕುಂಟೆ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಅಂಬಿಕಾ ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ.

ರಾಜಾನುಕುಂಟೆ ಗ್ರಾ.ಪಂ‌.ಯಲ್ಲಿ ಒಟ್ಟು 27 ಸದಸ್ಯ ಬಲವಿದ್ದು, ಬುಧವಾರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದ ರಾಜಾನುಕುಂಟೆ ಗ್ರಾಮದ ಅಂಬಿಕಾ ರಾಜೇಂದ್ರಕುಮಾರ್ 16 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು, ಇವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹೇಮಲತಾ 11 ಮತಗಳನ್ನು ಪಡೆದು ಪರಾಭವ ಗೊಂಡರು.

ನೂತನ ಅಧ್ಯಕ್ಷೆ ಅಂಬಿಕಾ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವೆಂಕಟೇಶ್ ರವರನ್ನು ಗೌರವ ಸನ್ಮಾನ ನೀಡಿ ಅಭಿನಂದಿಸಿದ ನಂತರ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ ‘ರಾಜಾನುಕುಂಟೆ ಗ್ರಾ.ಪಂ. ಕಳೆದ ಬಾರಿಯ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ 19 ಜನ ಬಿಜೆಪಿ ಬೆಂಬಲಿತ ಸದಸ್ಯರಿದ್ದೂ ಸಹ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗುವ ಮೂಲಕ ಮುಜುಗರ ಉಂಟಾಗುವಂತಾಗಿತ್ತು, ಆದರೆ ಈ ಬಾರಿ ನಮ್ಮದೇ ಪಕ್ಷದ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆ ಯಾಗಿರುವುದು ಸಂತೋಷ ಉಂಟು ಮಾಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸದಾ ನಮ್ಮ ಸಹಕಾರವಿರುತ್ತದೆ. ಸದಸ್ಯರೆಲ್ಲರೂ ಒಗ್ಗಟ್ಟಾಗಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಗತ್ಯ ಸಹಕಾರ, ಸಲಹೆ ನೀಡುವ ಮೂಲಕ ಗ್ರಾ.ಪಂ.ಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವಂತಾಗಲೆಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ರಾಜಾನುಕುಂಟೆ ಗ್ರಾ.ಪಂ‌.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ಡಿ.ಜಿ.ಅಪ್ಪಯ್ಯಣ್ಣ, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಬಿಜೆಪಿ ಯಲಹಂಕ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಜನಾರ್ಧನ್, ಅರಕೆರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮನಗೌಡ, ಎಸ್ ಜಿ ಪ್ರಶಾಂತ್ ರೆಡ್ಡಿ, ಇಟಗಲ್ ಪುರ ಮೋಹನ್, ಚೊಕ್ಕನಹಳ್ಳಿ ನಾಗೇಶ್, ರಮೇಶ್ ಸೇರಿದಂತೆ ಗ್ರಾ.ಪಂ.ಸದಸ್ಯರಿದ್ದರು.

ರಾಜಾನುಕುಂಟೆ ಗ್ರಾ.ಪಂ‌.ನೂತನ ಅಧ್ಯಕ್ಷರಾಗಿ ಅಂಬಿಕಾ ರಾಜೇಂದ್ರಕುಮಾರ್ ಆಯ್ಕೆ :

ಯಲಹಂಕ : ರಾಜಾನುಕುಂಟೆ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಅಂಬಿಕಾ ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ.

ರಾಜಾನುಕುಂಟೆ ಗ್ರಾ.ಪಂ‌.ಯಲ್ಲಿ ಒಟ್ಟು 27 ಸದಸ್ಯ ಬಲವಿದ್ದು, ಬುಧವಾರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಾಗಿ ಸ್ಪರ್ಧಿಸಿದ್ದ ರಾಜಾನುಕುಂಟೆ ಗ್ರಾಮದ ಅಂಬಿಕಾ ರಾಜೇಂದ್ರಕುಮಾರ್ 16 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು, ಇವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹೇಮಲತಾ 11 ಮತಗಳನ್ನು ಪಡೆದು ಪರಾಭವ ಗೊಂಡರು.

ನೂತನ ಅಧ್ಯಕ್ಷೆ ಅಂಬಿಕಾ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವೆಂಕಟೇಶ್ ರವರನ್ನು ಗೌರವ ಸನ್ಮಾನ ನೀಡಿ ಅಭಿನಂದಿಸಿದ ನಂತರ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ ‘ರಾಜಾನುಕುಂಟೆ ಗ್ರಾ.ಪಂ. ಕಳೆದ ಬಾರಿಯ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ 19 ಜನ ಬಿಜೆಪಿ ಬೆಂಬಲಿತ ಸದಸ್ಯರಿದ್ದೂ ಸಹ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗುವ ಮೂಲಕ ಮುಜುಗರ ಉಂಟಾಗುವಂತಾಗಿತ್ತು, ಆದರೆ ಈ ಬಾರಿ ನಮ್ಮದೇ ಪಕ್ಷದ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆ ಯಾಗಿರುವುದು ಸಂತೋಷ ಉಂಟು ಮಾಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸದಾ ನಮ್ಮ ಸಹಕಾರವಿರುತ್ತದೆ. ಸದಸ್ಯರೆಲ್ಲರೂ ಒಗ್ಗಟ್ಟಾಗಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಗತ್ಯ ಸಹಕಾರ, ಸಲಹೆ ನೀಡುವ ಮೂಲಕ ಗ್ರಾ.ಪಂ.ಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವಂತಾಗಲೆಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ರಾಜಾನುಕುಂಟೆ ಗ್ರಾ.ಪಂ‌.ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ಡಿ.ಜಿ.ಅಪ್ಪಯ್ಯಣ್ಣ, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಬಿಜೆಪಿ ಯಲಹಂಕ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಜನಾರ್ಧನ್, ಅರಕೆರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮನಗೌಡ, ಎಸ್ ಜಿ ಪ್ರಶಾಂತ್ ರೆಡ್ಡಿ, ಇಟಗಲ್ ಪುರ ಮೋಹನ್, ಚೊಕ್ಕನಹಳ್ಳಿ ನಾಗೇಶ್, ರಮೇಶ್ ಸೇರಿದಂತೆ ಗ್ರಾ.ಪಂ.ಸದಸ್ಯರಿದ್ದರು.

Leave a Reply

Your email address will not be published. Required fields are marked *