ವಿವಿಧ ಸೇವಾ ಕಾರ್ಯಗಳ ಮೂಲಕ ಕನ್ನಡ ರಾಜ್ಯೋತ್ಸವ, ಪುನೀತ್ ರಾಜ್‍ಕುಮಾರ್ ಪುಣ್ಯಸ್ಮರಣೆ ಆಚರಣೆ :
ಬ್ಯಾಟರಾಯನಪುರ : ‘ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗ’ದ ವತಿಯಿಂದ ‌ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಮತ್ತು ಪುನೀತ್ ರಾಜ್‍ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ದಾನಿಗಳ ನೆರವಿನಿಂದ ಆಟೋ ಚಾಲಕರು ಮತ್ತು ಬಸ್ ಚಾಲಕರಿಗೆ ಸಮವಸ್ತ್ರ,ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್, ಅನ್ನಸಂತರ್ಪಣೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ನೆರವೇರಿಸಲಾಯಿತು.
70ನೇ ಕನ್ನಡ ರಾಜ್ಯೋತ್ಸವ ಮತ್ತು ಪುನೀತ್ ರಾಜ್‍ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದ ಪ್ರಯುಕ್ತ ಆಟೋಗಳು ಮತ್ತು ಬಸ್ ನ್ನು ಪುಷ್ಪ ಮಾಲಿಕೆಯಿಂದ ಸಿಂಗರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ದಾನಿಗಳಾದ ಬಿ.ನಾಗರಾಜ್ ಬಾಬು, ಎಸ್.ಎಮ್.ಎಲ್.ಪಿ. ಉಮೇಶ್, ಬಿ.ಎಂ.ನಾಗೇಶ್, ಬಿ.ಎಸ್.ಅನಿಲ್ ಕುಮಾರ್, ಜೋಡಿದಾರ್ ಚಂದು, ಬೈರೇಗೌಡ(ಬಿ.ಆರ್.ಬಿ.), ಎಸ್.ಬಸವರಾಜ್, ಪ್ರವೀಣ್, ಪ್ರಶಾಂತ್, ಹಸಿರೇ ಉಸಿರು ಟ್ರಸ್ಟ್ ನ ಡಾ.ಶ್ರೀನಿವಾಸಮೂರ್ತಿ, ರಘು(ಮೆಡಿಕಲ್), ಬಿ.ಎಸ್.ಚಿತ್ರಶೇಖರ್ ಹಿರಿಯಾಳ್, ವೆಂಕಟೇಶ್, ಶಿವಕುಮಾರ್ ಸೇರಿದಂತೆ ಗ್ರಾ.ಪಂ.ಹಾಲಿ‌ ಮತ್ತು ‌ಮಾಜಿ‌ ಅಧ್ಯಕ್ಷರು, ಸದಸ್ಯರು ಸೇರಿದಂತೆ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರಿದ್ದರು.

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

R Hanumanthau kogilu layout

Yelahanka Bangalore Karnataka

9845085793

7349337989

Leave a Reply

Your email address will not be published. Required fields are marked *