ದೇವನಹಳ್ಳಿ : ಕ್ರೀಡೆ ಮನುಷ್ಯ ಜೀವನದ ಒಂದು ಪ್ರಮುಖ ಭಾಗವಾಗಿದೆ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಕಸನ ಹೊಂದಬಹುದಾದ ಪ್ರಮುಖ ಅಂಶಗಳಾಗಿದೆ ಅದರಲ್ಲೂ ಹೆಣ್ಣು ಮಕ್ಕಳು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಉತ್ತಮ ಸಾಧನೆ ಮಾಡಿ ಉನ್ನತ ಮಟ್ಟಕ್ಕೆ ತಲುಪಬಹುದು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಜುಳಾದೇವಿ ಅಭಿಪ್ರಾಯ ಪಟ್ಟರು.
ದೇವನಹಳ್ಳಿ ತಾಲೂಕಿನ ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ನಡೆದ ಚನ್ನರಾಯಪಟ್ಟಣ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳೆಸಿ ಕೊಳ್ಳಬೇಕು, ಆಟದಲ್ಲಿ ಶಿಸ್ತು ಸಂಯಮ ಏಕಾಗ್ರತೆಯನ್ನು ಕಾಯ್ದುಕೊಂಡಾಗ ಕ್ರೀಡೆಯಲ್ಲಿ ಗುರಿ ಮುಟ್ಟಲು ಸಾಧ್ಯ ಗ್ರಾಮೀಣ ಭಾಗದ ಪ್ರತಿಭೆಗಳು ಬೆಳಕಿಗೆ ಬರಲು ಶಾಲಾ ಮಟ್ಟದಲ್ಲಿ ಹಮ್ಮಿಕೊಳ್ಳುವ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಾಲೂಕು ಜಿಲ್ಲೆ, ರಾಜ್ಯ ಮಟ್ಟದಲ್ಲಿ ಸ್ಪರ್ಧೆ ಮಾಡಿ ಉನ್ನತ ಮಟ್ಟದ ಸಾಧನೆ ಮಾಡಬಹುದು, ಎಂದರು.
ಚನ್ನಹಳ್ಳಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹರಳೂರು ನರಸಿಂಹಯ್ಯ ಮಾತನಾಡಿ, ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಈ ಹಿಂದೆಯು ಹಾಕಿ, ಕಬ್ಬಡಿ, ಖೋಖೋ ಮುಂತಾದ ಆಟಗಳು ಸಾಕಷ್ಟು ನಡೆದಿದ್ದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಸ್ಪರ್ಧೆ ಮಾಡಿರುವುದು ಹೆಮ್ಮೆಯ ವಿಚಾರ, ಚನ್ನರಾಯಪಟ್ಟಣ ಹೋಬಳಿಯ 15 ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢಶಾಲೆ 10 ಸೇರಿದಂತೆ 2000 ವಿದ್ಯಾರ್ಥಿಗಳು ಆಟದಲ್ಲಿ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ ಎಂದರು.
ಚನ್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಮಾತನಾಡಿ, ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಯಲು ಇಂತಹಾ ಕ್ರೀಡಾ ಕೂಟಗಳು ನಡೆಯಬೇಕು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ರಹದಾರಿ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ ಆಟದಲ್ಲಿ ಭಾಗವಹಿಸುವುದು ಎಂದರೆ ಕೇವಲ ಬಹುಮಾನಗಳನ್ನು ಪಡೆಯಲು ಮಾತ್ರವಲ್ಲದೆ ಸದಾ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ಉತ್ತಮವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಚೌಡಪ್ಪನಹಳ್ಳಿ ಲೋಕೇಶ್, ಚನ್ನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ನರಸಿಂಹಪ್ಪ, ಶೋಭಾ ಶಿವಕುಮಾರ್, ದೇವರಾಜು, ಗೋಪಿನಾಥ್, ಮುಖಂಡರಾದ ದೇವರಾಜು, ದೈಹಿಕ ಶಿಕ್ಷಕರಾದ ವೆಂಕಟೇಶ್, ಪುಟ್ಟರಾಜ್, ಶಾಲಾ ಮುಖ್ಯ ಶಿಕ್ಷಕರಾದ ಮುನಿರಾಜು, ಎಸ್ಡಿಎಂಸಿ ಸದಸ್ಯರು ಕ್ರೀಡಾಪಟುಗಳು, ಗ್ರಾಮಸ್ಥರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕ್ರೀಡಾ ಆಸಕ್ತರು ಇದ್ದರು.
ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಬಹುದು: ಜಿ. ಪಂ. ಮಾಜಿ ಸದಸ್ಯೆ ಮಂಜುಳಾದೇವಿ ಅಭಿಮತ.
ದೇವನಹಳ್ಳಿ : ಕ್ರೀಡೆ ಮನುಷ್ಯ ಜೀವನದ ಒಂದು ಪ್ರಮುಖ ಭಾಗವಾಗಿದೆ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ವಿಕಸನ ಹೊಂದಬಹುದಾದ ಪ್ರಮುಖ ಅಂಶಗಳಾಗಿದೆ ಅದರಲ್ಲೂ ಹೆಣ್ಣು ಮಕ್ಕಳು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಉತ್ತಮ ಸಾಧನೆ ಮಾಡಿ ಉನ್ನತ ಮಟ್ಟಕ್ಕೆ ತಲುಪಬಹುದು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿ ಕೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಜುಳಾದೇವಿ ಅಭಿಪ್ರಾಯ ಪಟ್ಟರು.
ದೇವನಹಳ್ಳಿ ತಾಲೂಕಿನ ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ನಡೆದ ಚನ್ನರಾಯಪಟ್ಟಣ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳೆಸಿ ಕೊಳ್ಳಬೇಕು, ಆಟದಲ್ಲಿ ಶಿಸ್ತು ಸಂಯಮ ಏಕಾಗ್ರತೆಯನ್ನು ಕಾಯ್ದುಕೊಂಡಾಗ ಕ್ರೀಡೆಯಲ್ಲಿ ಗುರಿ ಮುಟ್ಟಲು ಸಾಧ್ಯ ಗ್ರಾಮೀಣ ಭಾಗದ ಪ್ರತಿಭೆಗಳು ಬೆಳಕಿಗೆ ಬರಲು ಶಾಲಾ ಮಟ್ಟದಲ್ಲಿ ಹಮ್ಮಿಕೊಳ್ಳುವ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಾಲೂಕು ಜಿಲ್ಲೆ, ರಾಜ್ಯ ಮಟ್ಟದಲ್ಲಿ ಸ್ಪರ್ಧೆ ಮಾಡಿ ಉನ್ನತ ಮಟ್ಟದ ಸಾಧನೆ ಮಾಡಬಹುದು, ಎಂದರು.
ಚನ್ನಹಳ್ಳಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹರಳೂರು ನರಸಿಂಹಯ್ಯ ಮಾತನಾಡಿ, ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಈ ಹಿಂದೆಯು ಹಾಕಿ, ಕಬ್ಬಡಿ, ಖೋಖೋ ಮುಂತಾದ ಆಟಗಳು ಸಾಕಷ್ಟು ನಡೆದಿದ್ದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಸ್ಪರ್ಧೆ ಮಾಡಿರುವುದು ಹೆಮ್ಮೆಯ ವಿಚಾರ, ಚನ್ನರಾಯಪಟ್ಟಣ ಹೋಬಳಿಯ 15 ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢಶಾಲೆ 10 ಸೇರಿದಂತೆ 2000 ವಿದ್ಯಾರ್ಥಿಗಳು ಆಟದಲ್ಲಿ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ ಎಂದರು.
ಚನ್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಮಾತನಾಡಿ, ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಯಲು ಇಂತಹಾ ಕ್ರೀಡಾ ಕೂಟಗಳು ನಡೆಯಬೇಕು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ರಹದಾರಿ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ ಆಟದಲ್ಲಿ ಭಾಗವಹಿಸುವುದು ಎಂದರೆ ಕೇವಲ ಬಹುಮಾನಗಳನ್ನು ಪಡೆಯಲು ಮಾತ್ರವಲ್ಲದೆ ಸದಾ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ಉತ್ತಮವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಚೌಡಪ್ಪನಹಳ್ಳಿ ಲೋಕೇಶ್, ಚನ್ನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ನರಸಿಂಹಪ್ಪ, ಶೋಭಾ ಶಿವಕುಮಾರ್, ದೇವರಾಜು, ಗೋಪಿನಾಥ್, ಮುಖಂಡರಾದ ದೇವರಾಜು, ದೈಹಿಕ ಶಿಕ್ಷಕರಾದ ವೆಂಕಟೇಶ್, ಪುಟ್ಟರಾಜ್, ಶಾಲಾ ಮುಖ್ಯ ಶಿಕ್ಷಕರಾದ ಮುನಿರಾಜು, ಎಸ್ಡಿಎಂಸಿ ಸದಸ್ಯರು ಕ್ರೀಡಾಪಟುಗಳು, ಗ್ರಾಮಸ್ಥರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕ್ರೀಡಾ ಆಸಕ್ತರು ಇದ್ದರು.