ದೇವನಹಳ್ಳಿ : ತಾಲೂಕಿನ ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜಯಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯ ನಂತರ ಜಾಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಬಾಬು ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಸ್ಥೆಗೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಪ್ರತಿದಿನ ಬೆಳಿಗ್ಗೆ 5 ಕ್ಯಾನ್ ಸಂಜೆ 6 ಕ್ಯಾನ್ ಹಾಲು ಶೇಕರಣೆಯಾಗಿ ಬೆಂಗಳೂರು ಡೈರಿಗೆ ಸರಬರಾಜು ಮಾಡಲಾಗುತ್ತಿದೆ ನಮ್ಮ ಡೈರಿ ಲಾಭದಾಯಕವಾಗಿದೆ ಎಂದರು.
ಡೈರಿಯ ನೂತನ ಅಧ್ಯಕ್ಷ ಜಯಂತ್ ಮಾತನಾಡಿ, ಡೈರಿಯು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಡೈರಿಯ ಸರ್ವತೋಮುಖ ಬೆಳೆವಣಿಗೆಗೆ ಶ್ರಮವಹಿಸುವುದಾಗಿ ತಿಳಿಸಿದರು.
ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 12 ನಿರ್ದೇಶಕ ಸ್ಥಾನವಿದ್ದು ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಜಯಂತ್ ಮತ್ತು ಉಪಾಧ್ಯಕ್ಷ ಸ್ಥಾನದ ಆಂಜಿನಪ್ಪ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆ ಯಾಗದ ಹಿನ್ನೆಲೆಯಲ್ಲಿ ಜಯಂತ್ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ವೀಣಾ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಜಯಂತ್ ಹಾಗೂ ಉಪಾದ್ಯಕ್ಷ ಆಂಜಿನಪ್ಪ ಅವರನ್ನು ಮುಖಂಡರುಗಳು ಅಭಿನಂದಿಸಿದರು.
ಸಂದರ್ಭದಲ್ಲಿ ನಿರ್ದೇಶಕರಾದ ರುತೀಶ್, ಶಿವಕುಮಾರ್ ಜಯರಾಮ್, ಅರುಣ್ ಕುಮಾರ್, ಅಜಯ್, ಬಿ ಎಂ. ಆಂಜಿನಪ್ಪ ನೀಲಮ್ಮ, ಲಕ್ಷ್ಮೀದೇವಮ್ಮ, ಮಾರಪ್ಪ, ಜಾಲಿಗೆ ಪಂಚಾಯಿತಿ ಅಧ್ಯಕ್ಷ ಎಸ್.ಎಂ.ಆನಂದ್ ಕುಮಾರ್, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಬಾಲಸುಬ್ರಹ್ಮಣ್ಯಂ, ಗ್ರಾಮದ ಮುಖಂಡರಾದ ಮುನೇಗೌಡ, ಬೀರಪ್ಪ, ದೊಡ್ಡ ಕೆಂಪಣ್ಣ, ಕರುಲಪ್ಪ, ಮುನಿಯಪ್ಪ, ಮುನಿರಾಜು ಮುಂತಾದವರು ಇದ್ದರು.
ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜಯಂತ್ ಉಪಾದ್ಯಕ್ಷರಾಗಿ ಆಂಜಿನಪ್ಪ ಅವಿರೋಧ ಆಯ್ಕೆ
ದೇವನಹಳ್ಳಿ : ತಾಲೂಕಿನ ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜಯಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯ ನಂತರ ಜಾಲಿಗೆ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಬಾಬು ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಸ್ಥೆಗೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಪ್ರತಿದಿನ ಬೆಳಿಗ್ಗೆ 5 ಕ್ಯಾನ್ ಸಂಜೆ 6 ಕ್ಯಾನ್ ಹಾಲು ಶೇಕರಣೆಯಾಗಿ ಬೆಂಗಳೂರು ಡೈರಿಗೆ ಸರಬರಾಜು ಮಾಡಲಾಗುತ್ತಿದೆ ನಮ್ಮ ಡೈರಿ ಲಾಭದಾಯಕವಾಗಿದೆ ಎಂದರು.
ಡೈರಿಯ ನೂತನ ಅಧ್ಯಕ್ಷ ಜಯಂತ್ ಮಾತನಾಡಿ, ಡೈರಿಯು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಡೈರಿಯ ಸರ್ವತೋಮುಖ ಬೆಳೆವಣಿಗೆಗೆ ಶ್ರಮವಹಿಸುವುದಾಗಿ ತಿಳಿಸಿದರು.
ಬೆಟ್ಟೇನಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 12 ನಿರ್ದೇಶಕ ಸ್ಥಾನವಿದ್ದು ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಜಯಂತ್ ಮತ್ತು ಉಪಾಧ್ಯಕ್ಷ ಸ್ಥಾನದ ಆಂಜಿನಪ್ಪ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆ ಯಾಗದ ಹಿನ್ನೆಲೆಯಲ್ಲಿ ಜಯಂತ್ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ವೀಣಾ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಜಯಂತ್ ಹಾಗೂ ಉಪಾದ್ಯಕ್ಷ ಆಂಜಿನಪ್ಪ ಅವರನ್ನು ಮುಖಂಡರುಗಳು ಅಭಿನಂದಿಸಿದರು.
ಸಂದರ್ಭದಲ್ಲಿ ನಿರ್ದೇಶಕರಾದ ರುತೀಶ್, ಶಿವಕುಮಾರ್ ಜಯರಾಮ್, ಅರುಣ್ ಕುಮಾರ್, ಅಜಯ್, ಬಿ ಎಂ. ಆಂಜಿನಪ್ಪ ನೀಲಮ್ಮ, ಲಕ್ಷ್ಮೀದೇವಮ್ಮ, ಮಾರಪ್ಪ, ಜಾಲಿಗೆ ಪಂಚಾಯಿತಿ ಅಧ್ಯಕ್ಷ ಎಸ್.ಎಂ.ಆನಂದ್ ಕುಮಾರ್, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಬಾಲಸುಬ್ರಹ್ಮಣ್ಯಂ, ಗ್ರಾಮದ ಮುಖಂಡರಾದ ಮುನೇಗೌಡ, ಬೀರಪ್ಪ, ದೊಡ್ಡ ಕೆಂಪಣ್ಣ, ಕರುಲಪ್ಪ, ಮುನಿಯಪ್ಪ, ಮುನಿರಾಜು ಮುಂತಾದವರು ಇದ್ದರು.