ಧಾರವಾಡ:- ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ ಹೇಳಿದರು.
ಧಾರವಾಡ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಸರಕಾರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಲಕಲ್ಲ ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯಪಾನ, ಮಾದಕ ದ್ರವ್ಯ ತಂಬಾಕುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮತೋಲನ ಆಹಾರ ಸೇವನೆ, ವ್ಯಾಯಾಮ ಇತರ ಆರೋಗ್ಯಕರ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಲು ಯುವಕರು ಜಾಗೃತಿ ಮೂಡಿಸಬೇಕು. ಮಾದಕ ವ್ಯಸನವು ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನಗಳನ್ನು ಲಘುವಾಗಿ ಪರಿಗಣಿಸದೇ ಅವುಗಳ ವಿರುದ್ಧ, ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಪ್ರತಿ ವರ್ಷವೂ ಆಗಸ್ಟ್ 1 ರಂದು ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಕರ್ನಾಟಕ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕರ್ನಾಟಕ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಬಿ. ಕರಡೋಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಇಲಾಖೆಯ ಮನೋವೈದ್ಯೆ ಡಾ.ವೈಶಾಲಿ ಎನ್.ಹೆಗಡೆ ಅವರು ವಿಶೇಷ ಉಪನ್ಯಾಸ ನೀಡಿದರು.
ಕೆಸಿಡಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಅಧಿಕಾರಿ ಡಾ.ಸುರೇಶ್ ಉಲ್ಲಣ್ಣನವರು ಕಾರ್ಯಕ್ರಮ ನಿರೂಪಿಸಿದರು, ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಬಿ.ಆರ್.ಪಾತ್ರೋಟ್ ಸ್ವಾಗತಿಸಿದರು. ಕೆ.ಕೆ. ಚವ್ಹಾಣ್ ವಂದಿಸಿದರು.
ಕರ್ನಾಟಕ ಕಾಲೇಜಿನ ಆವರಣದಲ್ಲಿ ವ್ಯಸನ ಮುಕ್ತ ಜಿಲ್ಲೆಯಾಗಿಸುವ ಕುರಿತು ಜಾಗೃತಿ ಜಾಥಾ ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಕವಿವಿ ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಡಾ.ಎಂ.ಬಿ. ದಳಪತಿ, ಕೆಸಿಡಿ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಡಾ.ಎಚ್.ಕೆ. ಕೋಳೂರು ಮತ್ತು ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ ; ಡಾ: ಶಶಿ ಪಾಟೀಲ


ಧಾರವಾಡ:- ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ ಹೇಳಿದರು.
ಧಾರವಾಡ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ಸರಕಾರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಲಕಲ್ಲ ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಮದ್ಯಪಾನ, ಮಾದಕ ದ್ರವ್ಯ ತಂಬಾಕುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮತೋಲನ ಆಹಾರ ಸೇವನೆ, ವ್ಯಾಯಾಮ ಇತರ ಆರೋಗ್ಯಕರ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಲು ಯುವಕರು ಜಾಗೃತಿ ಮೂಡಿಸಬೇಕು. ಮಾದಕ ವ್ಯಸನವು ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನಗಳನ್ನು ಲಘುವಾಗಿ ಪರಿಗಣಿಸದೇ ಅವುಗಳ ವಿರುದ್ಧ, ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಪ್ರತಿ ವರ್ಷವೂ ಆಗಸ್ಟ್ 1 ರಂದು ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಕರ್ನಾಟಕ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕರ್ನಾಟಕ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಬಿ. ಕರಡೋಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಇಲಾಖೆಯ ಮನೋವೈದ್ಯೆ ಡಾ.ವೈಶಾಲಿ ಎನ್.ಹೆಗಡೆ ಅವರು ವಿಶೇಷ ಉಪನ್ಯಾಸ ನೀಡಿದರು.
ಕೆಸಿಡಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಅಧಿಕಾರಿ ಡಾ.ಸುರೇಶ್ ಉಲ್ಲಣ್ಣನವರು ಕಾರ್ಯಕ್ರಮ ನಿರೂಪಿಸಿದರು, ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಬಿ.ಆರ್.ಪಾತ್ರೋಟ್ ಸ್ವಾಗತಿಸಿದರು. ಕೆ.ಕೆ. ಚವ್ಹಾಣ್ ವಂದಿಸಿದರು.
ಕರ್ನಾಟಕ ಕಾಲೇಜಿನ ಆವರಣದಲ್ಲಿ ವ್ಯಸನ ಮುಕ್ತ ಜಿಲ್ಲೆಯಾಗಿಸುವ ಕುರಿತು ಜಾಗೃತಿ ಜಾಥಾ ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಕವಿವಿ ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಡಾ.ಎಂ.ಬಿ. ದಳಪತಿ, ಕೆಸಿಡಿ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಡಾ.ಎಚ್.ಕೆ. ಕೋಳೂರು ಮತ್ತು ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *