ದಕ್ಷಿಣ ಭಾರತದ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕರ್ನಾಟಕದಲ್ಲಿ ಬಿಜೆಪಿ ಈಗಾಗಲೇ ಆಡಳಿತ ನೀಡಿದೆ ಕಾರಣಾಂತರಗಳಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದೆ. ಚುನಾವಣೆಗಳು ಮುಗಿದು,ಸರ್ಕಾರ ರಚನೆಯಾಗಿ, ಬಜೆಟ್ ಮಂಡನೆಯಾಗಿ,ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕರ ಆಯ್ಕೆ ಆಗದಿರುವುದು ಮುಜುಗರ ತಂದಿದೆ.ನಿಷ್ಠಾವಂತ ಕಾರ್ಯಕರ್ತರು ಮತ್ತು ಪಕ್ಷದಿಂದ ಆರಿಸಿ ಬಂದಿರುವ ಜನಪ್ರತಿನಿಧಿಗಳಿಗೆ ಈ ವಿಚಾರ ಪ್ರತಿ ಕ್ಷಣ ಕೊರೆಯುತ್ತಲೇ ಇದೆ.ಹಾಗಾಗಿ ವರಿಷ್ಠರು ಕೂಡಲೇ ಇತ್ತ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ.
ಪ್ರಸ್ತುತ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಪರಾಭವಿ ಗೊಂಡಿರುವ
ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಸಂಘಟನಾ ಚಾತುರ್ಯವಿದೆಅಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಾಮರ್ಥ್ಯವಿದೆ ಜೊತೆಗೆ ರಾಜ್ಯದಲ್ಲಿ ಪ್ರಬಲ ಸಮುದಾಯವಾಗಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಇವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆದು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಜೊತೆಗೆ ಬಿಬಿಎಂಪಿ,ತಾಪಂ, ಜಿಪಂ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸುವುದರಲ್ಲಿ ಅನುಮಾನವಿಲ್ಲ.ಪಕ್ಷ ಸಂಘಟನೆ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ.ಹಾಗಾಗಿ ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರನ್ನು ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಕೋರುತ್ತೇವೆ.ಇನ್ನು ವಿರೋಧ ಪಕ್ಷದ ನಾಯಕರ ಆಯ್ಕೆಯಲ್ಲಿಯೂ ವರಿಷ್ಠರು ಈಗಾಗಲೇ ತಡ ಮಾಡಿ,ಪಕ್ಷಕ್ಕೆ ಮುಜುಗರ ತಂದಿರುವುದು ಕಾರ್ಯಕರ್ತರು ಮತ್ತು ನಾಯಕರಲ್ಲಿ ನೋವು ತಂದಿದೆ.ಹಾಗಾಗಿ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬರುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಮರ್ಥ ಉತ್ತರ ನೀಡಬೇಕಿದೆ.ಇದಕ್ಕೆ ಸಮರ್ಥ ನಾಯಕರಾಗಿ ಬಸವನ ಗೌಡ ಪಾಟೀಲ್ ಯತ್ನಾಳ್ ಹೊರಹೊಮ್ಮುವುದರಲ್ಲಿ ಅನುಮಾನವಿಲ್ಲ.ಈಗಾಗಲೇ ಕಾಂಗ್ರೆಸ್ ವಿರುದ್ಧ ಹಲವು ಹೋರಾಟಗಳ ಮೂಲಕ ಫೈರ್ ಬ್ರ್ಯಾಂಡ್ ಎಂದೇ ಹೆಸರು ಪಡೆದಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ಪಕ್ಷದ ನಾಯಕರಾದರೆ ಬಿಜೆಪಿ ಶಕ್ತಿ ತುಂಬುವುದರಲ್ಲಿ ಸಂಶಯವಿಲ್ಲ.
ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿರೋಧಪಕ್ಷದ ನಾಯಕನ ಸ್ಥಾನಕ್ಕೆ ನೇಮಕ ಮಾಡಬೇಕೆಂದು ಈ ಮೂಲಕ ಕೋರುತ್ತೇವೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕವಾದಲ್ಲಿ ಉಭಯರೂ ಪಕ್ಷವನ್ನು ಯಶಸ್ಸಿನ ದಡ ಸೇರಿಸಲು ಶ್ರಮಿಸಲಿದ್ದಾರೆ.ಇವರಿಬ್ಬರ ನಾಯಕತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ.ಮುಖ್ಯವಾಗಿ ಮಾನ್ಯ ನರೇಂದ್ರ ಮೋದಿ ಜೀ ಅವರು ಮತ್ತೆ ಪ್ರಧಾನಿಯಾಗಲು ಲೋಕಸಭಾ ಚುನಾವಣೆಗೆ ಇವರಿಬ್ಬರ ಶ್ರಮ ಸಹಕಾರಿಯಾಗಲಿದೆ.ಹಾಗಾಗಿ ವರಿಷ್ಠರು ಈ ಕುರಿತು ಗಮನ ಹರಿಸಿ ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ರವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ,
ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕರ್ನಾಟಕ ವಿಧಾನ ಸಭೆ ವಿರೋಧ ಪಕ್ಷದ ನಾಯಕರಾಗಿ ನೇಮಕ ಮಾಡುವ ಮೂಲಕ ದಕ್ಷಿಣ ಭಾರತದ ಹೆಬ್ಬಾಗಿಲು ಕರ್ನಾಟಕದಲ್ಲಿ ಬಿಜೆಪಿ ಬಲಿಷ್ಠವಾಗಿ ಸಂಘಟನೆಯಾಗಲು ಸಹಕರಿಸಬೇಕೆಂದು ಮನವಿ ಮಾಡುತ್ತೇವೆ.
ಚಿಕ್ಕಬಳ್ಳಾಪುರ: 5ನೇ ವಾರ್ಡಿನ ನಗರಸಭೆ ಸದಸ್ಯ ಜೆ.ನಾಗರಾಜು ರವರು ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲು ಕೋರಿ ಜೆ.ಪಿ.ನಡ್ಡಾ ಜೀ ರಾಷ್ಟ್ರೀಯ ಅಧ್ಯಕ್ಷರು ಭಾರತೀಯ ಜನತಾ ಪಕ್ಷ ರವರಿಗೆ ಈ ಮೇಲ್ ಮುಖಾಂತರ ಮನವಿ ಸಲ್ಲಿಸಿದ್ದಾರೆ.
ದಕ್ಷಿಣ ಭಾರತದ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕರ್ನಾಟಕದಲ್ಲಿ ಬಿಜೆಪಿ ಈಗಾಗಲೇ ಆಡಳಿತ ನೀಡಿದೆ ಕಾರಣಾಂತರಗಳಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದೆ. ಚುನಾವಣೆಗಳು ಮುಗಿದು,ಸರ್ಕಾರ ರಚನೆಯಾಗಿ, ಬಜೆಟ್ ಮಂಡನೆಯಾಗಿ,ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕರ ಆಯ್ಕೆ ಆಗದಿರುವುದು ಮುಜುಗರ ತಂದಿದೆ.ನಿಷ್ಠಾವಂತ ಕಾರ್ಯಕರ್ತರು ಮತ್ತು ಪಕ್ಷದಿಂದ ಆರಿಸಿ ಬಂದಿರುವ ಜನಪ್ರತಿನಿಧಿಗಳಿಗೆ ಈ ವಿಚಾರ ಪ್ರತಿ ಕ್ಷಣ ಕೊರೆಯುತ್ತಲೇ ಇದೆ.ಹಾಗಾಗಿ ವರಿಷ್ಠರು ಕೂಡಲೇ ಇತ್ತ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ.
ಪ್ರಸ್ತುತ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಪರಾಭವಿ ಗೊಂಡಿರುವ
ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಸಂಘಟನಾ ಚಾತುರ್ಯವಿದೆಅಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಾಮರ್ಥ್ಯವಿದೆ ಜೊತೆಗೆ ರಾಜ್ಯದಲ್ಲಿ ಪ್ರಬಲ ಸಮುದಾಯವಾಗಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಇವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆದು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಜೊತೆಗೆ ಬಿಬಿಎಂಪಿ,ತಾಪಂ, ಜಿಪಂ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸುವುದರಲ್ಲಿ ಅನುಮಾನವಿಲ್ಲ.ಪಕ್ಷ ಸಂಘಟನೆ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ.ಹಾಗಾಗಿ ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರನ್ನು ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಕೋರುತ್ತೇವೆ.ಇನ್ನು ವಿರೋಧ ಪಕ್ಷದ ನಾಯಕರ ಆಯ್ಕೆಯಲ್ಲಿಯೂ ವರಿಷ್ಠರು ಈಗಾಗಲೇ ತಡ ಮಾಡಿ,ಪಕ್ಷಕ್ಕೆ ಮುಜುಗರ ತಂದಿರುವುದು ಕಾರ್ಯಕರ್ತರು ಮತ್ತು ನಾಯಕರಲ್ಲಿ ನೋವು ತಂದಿದೆ.ಹಾಗಾಗಿ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬರುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಮರ್ಥ ಉತ್ತರ ನೀಡಬೇಕಿದೆ.ಇದಕ್ಕೆ ಸಮರ್ಥ ನಾಯಕರಾಗಿ ಬಸವನ ಗೌಡ ಪಾಟೀಲ್ ಯತ್ನಾಳ್ ಹೊರಹೊಮ್ಮುವುದರಲ್ಲಿ ಅನುಮಾನವಿಲ್ಲ.ಈಗಾಗಲೇ ಕಾಂಗ್ರೆಸ್ ವಿರುದ್ಧ ಹಲವು ಹೋರಾಟಗಳ ಮೂಲಕ ಫೈರ್ ಬ್ರ್ಯಾಂಡ್ ಎಂದೇ ಹೆಸರು ಪಡೆದಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ಪಕ್ಷದ ನಾಯಕರಾದರೆ ಬಿಜೆಪಿ ಶಕ್ತಿ ತುಂಬುವುದರಲ್ಲಿ ಸಂಶಯವಿಲ್ಲ.
ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ವಿರೋಧಪಕ್ಷದ ನಾಯಕನ ಸ್ಥಾನಕ್ಕೆ ನೇಮಕ ಮಾಡಬೇಕೆಂದು ಈ ಮೂಲಕ ಕೋರುತ್ತೇವೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕವಾದಲ್ಲಿ ಉಭಯರೂ ಪಕ್ಷವನ್ನು ಯಶಸ್ಸಿನ ದಡ ಸೇರಿಸಲು ಶ್ರಮಿಸಲಿದ್ದಾರೆ.ಇವರಿಬ್ಬರ ನಾಯಕತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ.ಮುಖ್ಯವಾಗಿ ಮಾನ್ಯ ನರೇಂದ್ರ ಮೋದಿ ಜೀ ಅವರು ಮತ್ತೆ ಪ್ರಧಾನಿಯಾಗಲು ಲೋಕಸಭಾ ಚುನಾವಣೆಗೆ ಇವರಿಬ್ಬರ ಶ್ರಮ ಸಹಕಾರಿಯಾಗಲಿದೆ.ಹಾಗಾಗಿ ವರಿಷ್ಠರು ಈ ಕುರಿತು ಗಮನ ಹರಿಸಿ ಮಾಜಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ರವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ,
ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕರ್ನಾಟಕ ವಿಧಾನ ಸಭೆ ವಿರೋಧ ಪಕ್ಷದ ನಾಯಕರಾಗಿ ನೇಮಕ ಮಾಡುವ ಮೂಲಕ ದಕ್ಷಿಣ ಭಾರತದ ಹೆಬ್ಬಾಗಿಲು ಕರ್ನಾಟಕದಲ್ಲಿ ಬಿಜೆಪಿ ಬಲಿಷ್ಠವಾಗಿ ಸಂಘಟನೆಯಾಗಲು ಸಹಕರಿಸಬೇಕೆಂದು ಮನವಿ ಮಾಡುತ್ತೇವೆ.