ಯಲಹಂಕ :’ಸ್ವಾತಂತ್ರ್ಯ ದಿನ ಅದೊಂದು ಅಪೂರ್ವ ದಿನ, ಅದನ್ನು ಸಂತೋಷ-ಸಂಭ್ರಮದಿಂದ ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು.

ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ ‘ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಸ್ವಾತಂತ್ರ್ಯ ದಿನಾಚರಣೆಯಂದು ಹೊಯ್ಸಳ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಪೌರ ಕಾರ್ಮಿಕರಿಂದ ಪಥಸಂಚಲನ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆಯಾಗಿದೆ ಎಂದರು.

ಯಲಹಂಕ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಮಾತನಾಡಿ ‘ಸರ್ಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರು ಸ್ವಾತಂತ್ರ್ಯ ದಿನಾಚರಣೆಯಂದು ಕಡ್ಡಾಯವಾಗಿ ಹಾಜರಿರಬೇಕು. ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸತತ ಮೂರು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಆಕ್ಷೇಪ ವ್ಯಕ್ತವಾದ ಹಿನ್ನೆಲೆಂiಲ್ಲಿ ಈ ಪೂರ್ವಭಾವಿ ಸಭೆಗೆ ಕೆಲವು ಪ್ರಮುಖರನ್ನು ಆಹ್ವಾನಿಸಿಲ್ಲ, ಕನ್ನಡಪರ, ದಲಿತ, ರೈತ ಸಂಘಟನೆಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಕಂದಾಯ ಇಲಾಖೆ, ಶಿಕ್ಷಣ, ತಾಲ್ಲೂಕು ಪಂಚಾಯ್ತಿ,ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ಸ್ವಾತಂತ್ರ್ಯ ದಿನವನ್ನು ಸಂತೋಷದಿಂದ ಸಂಭ್ರಮಿಸಿ : ಎಸ್.ಆರ್.ವಿಶ್ವನಾಥ್

ಯಲಹಂಕ :’ಸ್ವಾತಂತ್ರ್ಯ ದಿನ ಅದೊಂದು ಅಪೂರ್ವ ದಿನ, ಅದನ್ನು ಸಂತೋಷ-ಸಂಭ್ರಮದಿಂದ ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು.

ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ ‘ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು, ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ಬೀದಿಗಳು, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ಸೃಷ್ಟಿಸಬೇಕು. ಸ್ವಾತಂತ್ರ್ಯ ದಿನಾಚರಣೆಯಂದು ಹೊಯ್ಸಳ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. ಪೌರ ಕಾರ್ಮಿಕರಿಂದ ಪಥಸಂಚಲನ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವಿಶೇಷತೆಯಾಗಿದೆ ಎಂದರು.

ಯಲಹಂಕ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಮಾತನಾಡಿ ‘ಸರ್ಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರು ಸ್ವಾತಂತ್ರ್ಯ ದಿನಾಚರಣೆಯಂದು ಕಡ್ಡಾಯವಾಗಿ ಹಾಜರಿರಬೇಕು. ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸತತ ಮೂರು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಆಕ್ಷೇಪ ವ್ಯಕ್ತವಾದ ಹಿನ್ನೆಲೆಂiಲ್ಲಿ ಈ ಪೂರ್ವಭಾವಿ ಸಭೆಗೆ ಕೆಲವು ಪ್ರಮುಖರನ್ನು ಆಹ್ವಾನಿಸಿಲ್ಲ, ಕನ್ನಡಪರ, ದಲಿತ, ರೈತ ಸಂಘಟನೆಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಕಂದಾಯ ಇಲಾಖೆ, ಶಿಕ್ಷಣ, ತಾಲ್ಲೂಕು ಪಂಚಾಯ್ತಿ,ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

Leave a Reply

Your email address will not be published. Required fields are marked *