ಯಲಹಂಕ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ.ಅಧ್ಯಕ್ಷರು ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ :

ಯಲಹಂಕ : ನಿಮ್ಮನ್ನು ಗೆಲ್ಲಿಸಿ ನಿಮಗೆ ಸೇವೆಯ ಅವಕಾಶ ಕಲ್ಪಿಸಿರುವ ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿ, ಅವರ ಸಮಸ್ಯೆಗಳಿಗೆ ಸ್ಪಂಧಿಸಿ, ಸಹಕರಿಸಿ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ನೂತನ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು.

ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿ ಗ್ರಾಮದ ಸಮೀಪದ ಕೇಸರಿ ವನದಲ್ಲಿ ಆಯೋಜಿಸಿದ್ದ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾ.ಪಂ.ಗಳಿಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಲಹಂಕ ಕ್ಷೇತ್ರದ 20 ಗ್ರಾ.ಪಂ.ಗಳ ಪೈಕಿ 19 ಗ್ರಾಮ ಪಂಚಾಯ್ತಿಗಳಿಗೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಆಯ್ಕೆ ಮಾಡಿಲಾಗಿದ್ದು, ಇದರಲ್ಲಿ 17 ಗ್ರಾ.ಪಂ.ಗಳು ಬಿಜೆಪಿ ಪಾಲಾಗಿದ್ದರೆ, ಉಳಿದ 2 ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರು ಆಯ್ಕೆಯಾಗಿದ್ದಾರೆ, ಇಲ್ಲಿ ಬಿಜೆಪಿ ಬೆಂಬಲಿತ ಬೆಂಬಲಿತ ಅಭ್ಯರ್ಥಿಗಳು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 9 ಗ್ರಾ.ಪಂ.ಗಳಿಗೆ ಮಾತ್ರ ಚುನಾವಣೆ ನಡೆದಿದ್ದು, ಈ ಪೈಕಿ 7 ಗ್ರಾ.ಪಂ.ಗಳು ಬಿಜೆಪಿ ಪಾಲಾಗಿದ್ದು, ಉಳಿದೆರಡು ಮಾತ್ರ ಕಾಂಗ್ರೆಸ್ ಪಾಲಾಗಿವೆ. ಅವಿರೋಧವಾಗಿ ಆಯ್ಕೆಯಾಗಿರುವ ಎಲ್ಲಾ 10 ಗ್ರಾ.ಪಂ.ಗಳು ಬಿಜೆಪಿ ಪಾಲಾಗಿರುವುದು ವಿಶೇಷತೆಯ ಸಂಗತಿ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಅನುದಾನ ಹಂಚಿಕೆಯಲ್ಲಿ ಪಕ್ಷಪಾತ, ತಾರತಮ್ಯ ಎದುರಾಗಲಿದೆ. ಆದರೂ ಶಕ್ತಿಮೀರಿ ಯಲಹಂಕ ಕ್ಷೇತ್ರದ ಗ್ರಾ.ಪಂ.ಗಳಿಗೆ ಅನುದಾನ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಆದರೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಜನರ ಸಮಸ್ಯೆಗಳಿಗೆ ಸೂಕ್ತ ಸಮಯದಲ್ಲಿ ಸ್ಪಂಧಿಸುವ ಬದ್ಧತೆ ತೋರುವ ಮೂಲಕ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಜನಸೇವೆಯ ಅವಕಾಶ ಎಲ್ಲರಿಗೂ ಒಲಿದು ಬರುವುದಿಲ್ಲ. ನಿಮಗೆ ಜನ ಸೇವೆಯ ಸದವಕಾಶ ದೊರೆತಿರುವುದನ್ನು ಸೌಭಾಗ್ಯವೆಂದು ಭಾವಿಸಿ ಸೇವೆ ಸಲ್ಲಿಸಿ ಎಂದು ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಆರ್‌ಎಸ್‌ಎಸ್‌ಎನ್ ಬ್ಯಾಂಕ್ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ದಿಬ್ಬೂರು ಜಯಣ್ಣ, ಅಪ್ಪಯ್ಯಣ್ಣ, ಎಚ್.ಬಿ.ಹನುಮಯ್ಯ, ಎಂ.ಸತೀಶ್, ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ಎಸ್.ಜಿ.ನರಸಿಂಹಮೂರ್ತಿ, ಎಸ್.ಆರ್. ಜನಾರ್ಧನ್, ಆರ್‌ಎಸ್‌ಎಸ್‌ಎನ್ ಬ್ಯಾಂಕ್ ನಿರ್ದೇಶಕ ಎಂ.ಮಂಜುನಾಥ್, ಎಸ್.ಜಿ.ಪ್ರಶಾಂತ್‌ರೆಡ್ಡಿ, ಕೆ.ಆರ್.ತಿಮ್ಮೇಗೌಡ, ಜಿ.ಜಿ.ಮೂರ್ತಿ, ಪಿ.ಕೆ.ರಾಜಣ್ಣ ಸೇರಿದಂತೆ ವಿವಿಧ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿದ್ದರು.

ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿ ಸಮಸ್ಯೆಗಳಿಗೆ ಸ್ಪಂಧಿಸಿ : ಎಸ್.ಆರ್.ವಿಶ್ವನಾಥ್

ಯಲಹಂಕ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ.ಅಧ್ಯಕ್ಷರು ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ :

ಯಲಹಂಕ : ನಿಮ್ಮನ್ನು ಗೆಲ್ಲಿಸಿ ನಿಮಗೆ ಸೇವೆಯ ಅವಕಾಶ ಕಲ್ಪಿಸಿರುವ ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿ, ಅವರ ಸಮಸ್ಯೆಗಳಿಗೆ ಸ್ಪಂಧಿಸಿ, ಸಹಕರಿಸಿ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ನೂತನ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು.

ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿ ಗ್ರಾಮದ ಸಮೀಪದ ಕೇಸರಿ ವನದಲ್ಲಿ ಆಯೋಜಿಸಿದ್ದ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾ.ಪಂ.ಗಳಿಗೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಲಹಂಕ ಕ್ಷೇತ್ರದ 20 ಗ್ರಾ.ಪಂ.ಗಳ ಪೈಕಿ 19 ಗ್ರಾಮ ಪಂಚಾಯ್ತಿಗಳಿಗೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಆಯ್ಕೆ ಮಾಡಿಲಾಗಿದ್ದು, ಇದರಲ್ಲಿ 17 ಗ್ರಾ.ಪಂ.ಗಳು ಬಿಜೆಪಿ ಪಾಲಾಗಿದ್ದರೆ, ಉಳಿದ 2 ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರು ಆಯ್ಕೆಯಾಗಿದ್ದಾರೆ, ಇಲ್ಲಿ ಬಿಜೆಪಿ ಬೆಂಬಲಿತ ಬೆಂಬಲಿತ ಅಭ್ಯರ್ಥಿಗಳು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 9 ಗ್ರಾ.ಪಂ.ಗಳಿಗೆ ಮಾತ್ರ ಚುನಾವಣೆ ನಡೆದಿದ್ದು, ಈ ಪೈಕಿ 7 ಗ್ರಾ.ಪಂ.ಗಳು ಬಿಜೆಪಿ ಪಾಲಾಗಿದ್ದು, ಉಳಿದೆರಡು ಮಾತ್ರ ಕಾಂಗ್ರೆಸ್ ಪಾಲಾಗಿವೆ. ಅವಿರೋಧವಾಗಿ ಆಯ್ಕೆಯಾಗಿರುವ ಎಲ್ಲಾ 10 ಗ್ರಾ.ಪಂ.ಗಳು ಬಿಜೆಪಿ ಪಾಲಾಗಿರುವುದು ವಿಶೇಷತೆಯ ಸಂಗತಿ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಅನುದಾನ ಹಂಚಿಕೆಯಲ್ಲಿ ಪಕ್ಷಪಾತ, ತಾರತಮ್ಯ ಎದುರಾಗಲಿದೆ. ಆದರೂ ಶಕ್ತಿಮೀರಿ ಯಲಹಂಕ ಕ್ಷೇತ್ರದ ಗ್ರಾ.ಪಂ.ಗಳಿಗೆ ಅನುದಾನ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಆದರೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಜನರ ಸಮಸ್ಯೆಗಳಿಗೆ ಸೂಕ್ತ ಸಮಯದಲ್ಲಿ ಸ್ಪಂಧಿಸುವ ಬದ್ಧತೆ ತೋರುವ ಮೂಲಕ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಜನಸೇವೆಯ ಅವಕಾಶ ಎಲ್ಲರಿಗೂ ಒಲಿದು ಬರುವುದಿಲ್ಲ. ನಿಮಗೆ ಜನ ಸೇವೆಯ ಸದವಕಾಶ ದೊರೆತಿರುವುದನ್ನು ಸೌಭಾಗ್ಯವೆಂದು ಭಾವಿಸಿ ಸೇವೆ ಸಲ್ಲಿಸಿ ಎಂದು ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಆರ್‌ಎಸ್‌ಎಸ್‌ಎನ್ ಬ್ಯಾಂಕ್ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ದಿಬ್ಬೂರು ಜಯಣ್ಣ, ಅಪ್ಪಯ್ಯಣ್ಣ, ಎಚ್.ಬಿ.ಹನುಮಯ್ಯ, ಎಂ.ಸತೀಶ್, ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ಎಸ್.ಜಿ.ನರಸಿಂಹಮೂರ್ತಿ, ಎಸ್.ಆರ್. ಜನಾರ್ಧನ್, ಆರ್‌ಎಸ್‌ಎಸ್‌ಎನ್ ಬ್ಯಾಂಕ್ ನಿರ್ದೇಶಕ ಎಂ.ಮಂಜುನಾಥ್, ಎಸ್.ಜಿ.ಪ್ರಶಾಂತ್‌ರೆಡ್ಡಿ, ಕೆ.ಆರ್.ತಿಮ್ಮೇಗೌಡ, ಜಿ.ಜಿ.ಮೂರ್ತಿ, ಪಿ.ಕೆ.ರಾಜಣ್ಣ ಸೇರಿದಂತೆ ವಿವಿಧ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿದ್ದರು.

Leave a Reply

Your email address will not be published. Required fields are marked *