ದೇವನಹಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಮತ್ತು ರೈತ ವಿರೋಧಿಯಾಗಿ ವರ್ತಿಸುತ್ತಿದೆ ದಲಿತರ ಅಭಿವೃದ್ಧಿಗೆ 30 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ಬಜೆಟ್ ನಲ್ಲಿ ಹೇಳಿ 11.5 ಸಾವಿರ ಕೋಟಿ ಅದರಿಂದ ಬೇರೆ ಕಡೆಗೆ ಬಳಕೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಮಂತ್ರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಬರೆದ ಪತ್ರದಲ್ಲಿ 33 ಕಾಂಗ್ರೆಸ್ ಶಾಸಕರು ಸಹಿ ಹಾಕಿದ್ದಾರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಮೂರನೇ ವ್ಯಕ್ತಿಗಳ ಮೂಲಕ ಮಂತ್ರಿಗಳನ್ನು ಸಂಪರ್ಕಿಸಬೇಕಾಗಿದೆ ಎಂದು ಕಾಂಗ್ರೆಸ್ ಶಾಸಕರೆ ಹೇಳುತ್ತಿದ್ದಾರೆ, ಬಿಜೆಪಿಯ ರೈತ ಸನ್ಮಾನ್ ಯೋಜನೆಯನ್ನು ರದ್ದು ಪಡಿಸಿದ್ದಾರೆ ಇದು ಭ್ರಷ್ಟ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರು ಕಿಡಿ ಕಾರಿದ್ದಾರೆ.

ದೇಶದ 76ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಪ್ರಕೋಷ್ಟ, ಬಿಜೆಪಿ ಜಿಲ್ಲಾ ರೈತ ಮೋರ್ಚಾ, ಬಿಜೆಪಿ ಯುವ ಮೋರ್ಚಾ, ಮತ್ತು ರಾಷ್ಟ್ರೋತ್ಥಾನ ಪರಿಷತ್ತಿನ ವತಿಯಿಂದ ತಾಲೂಕಿನ ಕೊಡುಗುರ್ಕಿ ಬಳಿ ಇರುವ ಕತ್ತಿ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಭಾನುವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣವಾಗಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಒಮ್ಮೆಯಾದರೂ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿಲ್ಲ ಆದರೆ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು 50 ಬಾರಿ ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ಬೇಟಿ ನೀಡಿದ್ದಾರೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರು ಬಾರಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು ಕಾಂಗ್ರೆಸ್ ನವರಿಂದಾಗಿ ಮಣಿಪುರದಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ ಎಂದು ಎನ್ ರವಿಕುಮಾರ್ ಕಾಂಗ್ರೆಸ್ ವಿರುದ್ಧ ಆರೋಪದ ಸುರಿಮಳೆಗೈದರು.

ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಟಕದ ಜಿಲ್ಲಾ ಅಧ್ಯಕ್ಷ ಅಂಬರೀಷ್ ಗೌಡ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಪ್ರಾಣತ್ಯಾಗ ಮಾಡಿದವರ ಗೌರವಾರ್ಥ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಗ್ರಾಮೀಣ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿದ್ದಾರೆ ರಕ್ತದಾನ ಎಂಬುದು ಜೀವದಾನವಾಗಿದೆ ರಕ್ತದಾನ ಮಾಡಿದರೆ ನಮ್ಮಿಂದ ಇತರರಿಗೆ ಒಳಿತನ್ನು ಮಾಡಿದ ಸಾರ್ಥಕ ಭಾವ ಮೂಡುತ್ತದೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಾಗ ಉತ್ತಮ ಸಮಾಜದ ನಿರ್ಮಿಸಲು ಸಾಧ್ಯ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭಗಳಲ್ಲಿ ಮಾಜಿ ಶಾಸಕ ಜಿ ಚಂದ್ರಣ್ಣ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್ ಎಂ ರವಿಕುಮಾರ್, ಬಿಜೆಪಿ ತಾಲೂಕು ಅಧ್ಯಕ್ಷ ಸುಂದರೇಶ್, ಮುಖಂಡರುಗಳಾದ ಬೂದಿಗೆರೆ ನಾರಾಯಣ ಸ್ವಾಮಿ, ವಿಜಯಪುರ ಕನಕರಾಜು, ರವಿಕುಮಾರ್, ಸುರೇಶ್ ಆಚಾರ್ರು, ಗಾಯತ್ರಿ, ಪುನಿತ, ನಯನ ಮುಂತಾದವರು ಇದ್ದರು.

ಕಾಂಗ್ರೆಸ್ ನವರಿಂದಾಗಿ ಮಣಿಪುರದಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಆರೋಪ.

ದೇವನಹಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಮತ್ತು ರೈತ ವಿರೋಧಿಯಾಗಿ ವರ್ತಿಸುತ್ತಿದೆ ದಲಿತರ ಅಭಿವೃದ್ಧಿಗೆ 30 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ಬಜೆಟ್ ನಲ್ಲಿ ಹೇಳಿ 11.5 ಸಾವಿರ ಕೋಟಿ ಅದರಿಂದ ಬೇರೆ ಕಡೆಗೆ ಬಳಕೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಮಂತ್ರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಬರೆದ ಪತ್ರದಲ್ಲಿ 33 ಕಾಂಗ್ರೆಸ್ ಶಾಸಕರು ಸಹಿ ಹಾಕಿದ್ದಾರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಮೂರನೇ ವ್ಯಕ್ತಿಗಳ ಮೂಲಕ ಮಂತ್ರಿಗಳನ್ನು ಸಂಪರ್ಕಿಸಬೇಕಾಗಿದೆ ಎಂದು ಕಾಂಗ್ರೆಸ್ ಶಾಸಕರೆ ಹೇಳುತ್ತಿದ್ದಾರೆ, ಬಿಜೆಪಿಯ ರೈತ ಸನ್ಮಾನ್ ಯೋಜನೆಯನ್ನು ರದ್ದು ಪಡಿಸಿದ್ದಾರೆ ಇದು ಭ್ರಷ್ಟ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರು ಕಿಡಿ ಕಾರಿದ್ದಾರೆ.

ದೇಶದ 76ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಪ್ರಕೋಷ್ಟ, ಬಿಜೆಪಿ ಜಿಲ್ಲಾ ರೈತ ಮೋರ್ಚಾ, ಬಿಜೆಪಿ ಯುವ ಮೋರ್ಚಾ, ಮತ್ತು ರಾಷ್ಟ್ರೋತ್ಥಾನ ಪರಿಷತ್ತಿನ ವತಿಯಿಂದ ತಾಲೂಕಿನ ಕೊಡುಗುರ್ಕಿ ಬಳಿ ಇರುವ ಕತ್ತಿ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಭಾನುವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣವಾಗಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಒಮ್ಮೆಯಾದರೂ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿಲ್ಲ ಆದರೆ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು 50 ಬಾರಿ ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ಬೇಟಿ ನೀಡಿದ್ದಾರೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರು ಬಾರಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರು ಕಾಂಗ್ರೆಸ್ ನವರಿಂದಾಗಿ ಮಣಿಪುರದಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ ಎಂದು ಎನ್ ರವಿಕುಮಾರ್ ಕಾಂಗ್ರೆಸ್ ವಿರುದ್ಧ ಆರೋಪದ ಸುರಿಮಳೆಗೈದರು.

ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಟಕದ ಜಿಲ್ಲಾ ಅಧ್ಯಕ್ಷ ಅಂಬರೀಷ್ ಗೌಡ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಪ್ರಾಣತ್ಯಾಗ ಮಾಡಿದವರ ಗೌರವಾರ್ಥ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಗ್ರಾಮೀಣ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿದ್ದಾರೆ ರಕ್ತದಾನ ಎಂಬುದು ಜೀವದಾನವಾಗಿದೆ ರಕ್ತದಾನ ಮಾಡಿದರೆ ನಮ್ಮಿಂದ ಇತರರಿಗೆ ಒಳಿತನ್ನು ಮಾಡಿದ ಸಾರ್ಥಕ ಭಾವ ಮೂಡುತ್ತದೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಾಗ ಉತ್ತಮ ಸಮಾಜದ ನಿರ್ಮಿಸಲು ಸಾಧ್ಯ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭಗಳಲ್ಲಿ ಮಾಜಿ ಶಾಸಕ ಜಿ ಚಂದ್ರಣ್ಣ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್ ಎಂ ರವಿಕುಮಾರ್, ಬಿಜೆಪಿ ತಾಲೂಕು ಅಧ್ಯಕ್ಷ ಸುಂದರೇಶ್, ಮುಖಂಡರುಗಳಾದ ಬೂದಿಗೆರೆ ನಾರಾಯಣ ಸ್ವಾಮಿ, ವಿಜಯಪುರ ಕನಕರಾಜು, ರವಿಕುಮಾರ್, ಸುರೇಶ್ ಆಚಾರ್ರು, ಗಾಯತ್ರಿ, ಪುನಿತ, ನಯನ ಮುಂತಾದವರು ಇದ್ದರು.

Leave a Reply

Your email address will not be published. Required fields are marked *