ಪದ್ಮಿನಿಯವರು ಬಿಜೆಪಿ ಪಕ್ಷ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಸಕೋಟೆ : ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ‌ ದೇವನಗೊಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಡಿ.ಹೊಸಹಳ್ಳಿ ಗ್ರಾಮದ ಹಾಲಿ ಸದಸ್ಯರಾದ ಶ್ರೀಮತಿ ಪದ್ಮಿನಿಯವರು ಗುರುವಾರ ಬಿಜೆಪಿ ಪಕ್ಷವನ್ನು ತೊರೆದು ಶಾಸಕರಾದ ಶರತ್ ಬಚ್ಚೇಗೌಡ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಕೊಡಿಹಳ್ಳಿ ಸುರೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಅನುಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ ಸಂತೋಷ್, ಮುಖಂಡರುಗಳಾದ ದೇವರಾಜ್, ಲಕ್ಷ್ಮಣ್ ಸಿಂಗ್ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *