ಮಾಲೂರು:- ತಾಲ್ಲೂಕಿನ ಹುಂಗೇನಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾರಾಯಣ ರೆಡ್ಡಿ, ಉಪಾಧ್ಯಕ್ಷರಾಗಿ ಅಪ್ಪಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿಗಧಿತ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಾಮಾನ್ಯ ಮೀಸಲು ಅಧ್ಯಕ್ಷ ಸ್ಥಾನಕ್ಕೆ ನಾರಾಯಣರೆಡ್ಡಿ, ಅನುಸೂಚಿತ ಜಾತಿ ಮೀಸಲು ಸ್ಥಾನಕ್ಕೆ ಅಪ್ಪಯ್ಯ ಅವರ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹುಂಗೇನಹಳ್ಳಿ ಗ್ರಾಪಂ ಚುನಾವಣೆಯೊಂದಿಗೆ ಮುಕ್ತಾಯಗೊಂಡಿದ್ದು 22 ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರನ್ನು ಗೆಲ್ಲಿಸಿಕೊಳ್ಳುವಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಯಶಸ್ವಿಯಾಗಿದ್ದು, ಕಾಂಗ್ರೆಸ್ ಪಕ್ಷ ಎಷ್ಟು ಬಲಿಷ್ಠವಾಗಿದೆ ಎಂಬುದನ್ನು ಈ ಮೂಲಕ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತೋರಿಸಿದ್ದಾರೆ. ಮುಂಬರುವ ಜಿ.ಪಂ. ತಾ.ಪಂ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಇದು ಮುನ್ನುಡಿಯಾಗಿದೆ. ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷಪಾತವಿಲ್ಲದೆ ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳನ್ನು ಅಭಿವೃದ್ಧಿಪಡಿಸಲು ಶ್ರಮ ವಹಿಸಬೇಕು ಅವರಿಗೆ ನಮ್ಮ ಸಹಕಾರ ಇರುತ್ತದೆ. ಸರ್ಕಾರದಲ್ಲಿ ವಿಶೇಷ ಅನುದಾನಗಳನ್ನು ತರುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡಲು ಸರ್ಕಾರದಲ್ಲಿ ಒತ್ತಾಯಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಭಾಗ್ಯಮ್ಮಪುಟ್ಟಣ್ಣ, ಲಿಂಗಾಪುರಕಿಟ್ಟಿ, ಸಂಪತ್ ಕುಮಾರ್ ಗೌಡ, ಕೆಪಿಸಿಸಿ ಸದಸ್ಯ ಅಂಜನಿಸೋಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಜಿ.ಮಧುಸೂದನ್,ಗ್ರಾ.ಪಂ.ಸದಸ್ಯರಾದ ಪಿ.ಶ್ರೀನಾಥ್, ಮಂಜುನಾಥ್, ಗೌರಮ್ಮ, ಸಂಪತ್, ಅನಿತಾ, ಅಶ್ವಥಮ್ಮ, ಲಕ್ಷ್ಮಮ್ಮ, ರೇಶ್ಮಾ, ಲೀಲಾ, ಚಿಕ್ಕವೀರೆಗೌಡ, ಶಹೀನಾಬೇಗಂ, ರೂಪ ಮುಖಂಡರಾದ ಚಾನ್ ಪಾಷ, ಮಂಜುನಾಥ್ ರೆಡ್ಡಿ, ಕೆ.ಸಿ.ನಾರಾಯಣಸ್ವಾಮಿ, ದಶರಥ, ಬಾಬು, ಮಲ್ಲಿ, ಹುಂಗೇನಹಳ್ಳಿ ಜೆಸಿಬಿ ಶ್ರೀನಿವಾಸ್, ಆಂಜನೇಯ ರೆಡ್ಡಿ, ಚಿರಂಜೀವಿ ರಾಜಣ್ಣ, ಶ್ರೀನಾಥ್, ಶ್ರೀನಿವಾಸ್, ಚಂದ್ರು ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಕೆ.ವೈ.ನಂಜೇಗೌಡ
ಮಾಲೂರು:- ತಾಲ್ಲೂಕಿನ ಹುಂಗೇನಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾರಾಯಣ ರೆಡ್ಡಿ, ಉಪಾಧ್ಯಕ್ಷರಾಗಿ ಅಪ್ಪಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿಗಧಿತ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಾಮಾನ್ಯ ಮೀಸಲು ಅಧ್ಯಕ್ಷ ಸ್ಥಾನಕ್ಕೆ ನಾರಾಯಣರೆಡ್ಡಿ, ಅನುಸೂಚಿತ ಜಾತಿ ಮೀಸಲು ಸ್ಥಾನಕ್ಕೆ ಅಪ್ಪಯ್ಯ ಅವರ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹುಂಗೇನಹಳ್ಳಿ ಗ್ರಾಪಂ ಚುನಾವಣೆಯೊಂದಿಗೆ ಮುಕ್ತಾಯಗೊಂಡಿದ್ದು 22 ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರನ್ನು ಗೆಲ್ಲಿಸಿಕೊಳ್ಳುವಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಯಶಸ್ವಿಯಾಗಿದ್ದು, ಕಾಂಗ್ರೆಸ್ ಪಕ್ಷ ಎಷ್ಟು ಬಲಿಷ್ಠವಾಗಿದೆ ಎಂಬುದನ್ನು ಈ ಮೂಲಕ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತೋರಿಸಿದ್ದಾರೆ. ಮುಂಬರುವ ಜಿ.ಪಂ. ತಾ.ಪಂ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಇದು ಮುನ್ನುಡಿಯಾಗಿದೆ. ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷಪಾತವಿಲ್ಲದೆ ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳನ್ನು ಅಭಿವೃದ್ಧಿಪಡಿಸಲು ಶ್ರಮ ವಹಿಸಬೇಕು ಅವರಿಗೆ ನಮ್ಮ ಸಹಕಾರ ಇರುತ್ತದೆ. ಸರ್ಕಾರದಲ್ಲಿ ವಿಶೇಷ ಅನುದಾನಗಳನ್ನು ತರುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡಲು ಸರ್ಕಾರದಲ್ಲಿ ಒತ್ತಾಯಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಭಾಗ್ಯಮ್ಮಪುಟ್ಟಣ್ಣ, ಲಿಂಗಾಪುರಕಿಟ್ಟಿ, ಸಂಪತ್ ಕುಮಾರ್ ಗೌಡ, ಕೆಪಿಸಿಸಿ ಸದಸ್ಯ ಅಂಜನಿಸೋಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಜಿ.ಮಧುಸೂದನ್,ಗ್ರಾ.ಪಂ.ಸದಸ್ಯರಾದ ಪಿ.ಶ್ರೀನಾಥ್, ಮಂಜುನಾಥ್, ಗೌರಮ್ಮ, ಸಂಪತ್, ಅನಿತಾ, ಅಶ್ವಥಮ್ಮ, ಲಕ್ಷ್ಮಮ್ಮ, ರೇಶ್ಮಾ, ಲೀಲಾ, ಚಿಕ್ಕವೀರೆಗೌಡ, ಶಹೀನಾಬೇಗಂ, ರೂಪ ಮುಖಂಡರಾದ ಚಾನ್ ಪಾಷ, ಮಂಜುನಾಥ್ ರೆಡ್ಡಿ, ಕೆ.ಸಿ.ನಾರಾಯಣಸ್ವಾಮಿ, ದಶರಥ, ಬಾಬು, ಮಲ್ಲಿ, ಹುಂಗೇನಹಳ್ಳಿ ಜೆಸಿಬಿ ಶ್ರೀನಿವಾಸ್, ಆಂಜನೇಯ ರೆಡ್ಡಿ, ಚಿರಂಜೀವಿ ರಾಜಣ್ಣ, ಶ್ರೀನಾಥ್, ಶ್ರೀನಿವಾಸ್, ಚಂದ್ರು ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.