ಚಿಕ್ಕಬಳ್ಳಾಪುರ: ನಗರದ ಎಂಜಿ ರಸ್ತೆಯಲ್ಲಿರುವ ಮೊಹಮದಿಯ
ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು,
ಧ್ವಜಾರೋಹಣ ನೆರವೇರಿಸಿದ ನಂತರ ಶಾಲೆಯ ಶಿಕ್ಷಕ ಶಿಕ್ಷಕಿಯರು ಹಾಗೂ ಅಡಳಿತ ಮಂಡಳಿಯ ರಫೀಕ್ ಅಹಮದ್,ಬಿ.ಎಸ್. ರಫೀಉಲ್ಲಾ ಮಕ್ಕಳನ್ನು ಉದ್ದೇಶಿಸಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಅವರು ನೀಡಿದಂತಹ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ನಮ್ಮ ದೇಶವನ್ನು ಉನ್ನತ ಮಟ್ಟಕ್ಕೆ ಬೆಳೆಯಲು ಕೈಜೋಡಿಸಬೇಕು ಎಂದರು ಇದೇ ವೇಳೆ ಶಾಲೆಯ ವತಿಯಿಂದ ಸಿಹಿ ಹಂಚಿ ಪರಸ್ಪರನೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಭಾಶಯಗಳು ಕೋರಿದರು. 
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಮಮ್ತಾಜ್ ಬೇಗಂ ಟ್ರಸ್ಟ್ನ ದಸ್ತಗಿರ್ ವತಿಯಿಂದ ಸನ್ಮಾನಿಸಲಾಯಿತು. ವಿಧ್ಯಾರ್ಥಿಗಳಿಗೆ ಸರ್ಟಿಫಿಕೇಟ್ ನೀಡಿ ಉಜ್ವಲ ಭವಿಷ್ಯಕ್ಕೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಗಣ್ಯರಿಗೆ ಶುಭ 
ಕೋರಿದಲ್ಲದೆ ಈ ವರ್ಷವೂ ಕೂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ಶಾಲೆಗೆ ಮತ್ತು ಪೋಷಕರಿಗೆ ಒಳ್ಳೆಯ ಹೆಸರು ತಂದು ಕೂಡಬೇಕು ಎಂದರು.
ಇನ್ನು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೋಹಮದಿಯ ಶಾಲೆಯ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಶ ಧರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಶಾಲಾ ವರ್ಗದವರು ಶಾಲೆಯ ವಿದ್ಯಾರ್ಥಿಗಳ ಪ್ರತಿಭೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ,ಅಧ್ಯಕ್ಷ ರಫೀಕ್ ಅಹಮದ್,ಉಪಾಧ್ಯಕ್ಷ ಬಿ.ಎಸ್. ರಫೀಉಲ್ಲಾ,ಕಾರ್ಯದರ್ಶಿ ಮಹಮ್ಮದ್ ಜುಹೇಬ್,ಖಜಾಂಚಿ ಸೈಯದ್ ಅಸ್ಗರ್,ಜಂಟಿ ಕಾರ್ಯದರ್ಶಿ ಜಾಫರ್,ತನ್ವೀರ್,
ಸುಹೇಲ್ ಶಾಲೆಯ ಮುಖ್ಯ ಶಿಕ್ಷಕಿ
ಸಯಿದ ತಬಸ್ಸುಮ್ ಹಾಗೂ ಸಿಬಂದಿ ವರ್ಗ ಮತ್ತು ಇತರರು ಇದ್ದರು.

ಮೊಹಮದಿಯ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ,ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ.

ಚಿಕ್ಕಬಳ್ಳಾಪುರ: ನಗರದ ಎಂಜಿ ರಸ್ತೆಯಲ್ಲಿರುವ ಮೊಹಮದಿಯ
ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು,
ಧ್ವಜಾರೋಹಣ ನೆರವೇರಿಸಿದ ನಂತರ ಶಾಲೆಯ ಶಿಕ್ಷಕ ಶಿಕ್ಷಕಿಯರು ಹಾಗೂ ಅಡಳಿತ ಮಂಡಳಿಯ ರಫೀಕ್ ಅಹಮದ್,ಬಿ.ಎಸ್. ರಫೀಉಲ್ಲಾ ಮಕ್ಕಳನ್ನು ಉದ್ದೇಶಿಸಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಅವರು ನೀಡಿದಂತಹ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ನಮ್ಮ ದೇಶವನ್ನು ಉನ್ನತ ಮಟ್ಟಕ್ಕೆ ಬೆಳೆಯಲು ಕೈಜೋಡಿಸಬೇಕು ಎಂದರು ಇದೇ ವೇಳೆ ಶಾಲೆಯ ವತಿಯಿಂದ ಸಿಹಿ ಹಂಚಿ ಪರಸ್ಪರನೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಭಾಶಯಗಳು ಕೋರಿದರು. 
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಮಮ್ತಾಜ್ ಬೇಗಂ ಟ್ರಸ್ಟ್ನ ದಸ್ತಗಿರ್ ವತಿಯಿಂದ ಸನ್ಮಾನಿಸಲಾಯಿತು. ವಿಧ್ಯಾರ್ಥಿಗಳಿಗೆ ಸರ್ಟಿಫಿಕೇಟ್ ನೀಡಿ ಉಜ್ವಲ ಭವಿಷ್ಯಕ್ಕೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಗಣ್ಯರಿಗೆ ಶುಭ 
ಕೋರಿದಲ್ಲದೆ ಈ ವರ್ಷವೂ ಕೂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ಶಾಲೆಗೆ ಮತ್ತು ಪೋಷಕರಿಗೆ ಒಳ್ಳೆಯ ಹೆಸರು ತಂದು ಕೂಡಬೇಕು ಎಂದರು.
ಇನ್ನು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೋಹಮದಿಯ ಶಾಲೆಯ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಶ ಧರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಶಾಲಾ ವರ್ಗದವರು ಶಾಲೆಯ ವಿದ್ಯಾರ್ಥಿಗಳ ಪ್ರತಿಭೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ,ಅಧ್ಯಕ್ಷ ರಫೀಕ್ ಅಹಮದ್,ಉಪಾಧ್ಯಕ್ಷ ಬಿ.ಎಸ್. ರಫೀಉಲ್ಲಾ,ಕಾರ್ಯದರ್ಶಿ ಮಹಮ್ಮದ್ ಜುಹೇಬ್,ಖಜಾಂಚಿ ಸೈಯದ್ ಅಸ್ಗರ್,ಜಂಟಿ ಕಾರ್ಯದರ್ಶಿ ಜಾಫರ್,ತನ್ವೀರ್,
ಸುಹೇಲ್ ಶಾಲೆಯ ಮುಖ್ಯ ಶಿಕ್ಷಕಿ
ಸಯಿದ ತಬಸ್ಸುಮ್ ಹಾಗೂ ಸಿಬಂದಿ ವರ್ಗ ಮತ್ತು ಇತರರು ಇದ್ದರು.

Leave a Reply

Your email address will not be published. Required fields are marked *