ಚಿಕ್ಕಬಳ್ಳಾಪುರ: ನಗರದ ವಿವಿಧ ಕಡೆಗಳಲ್ಲಿನ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿದ್ದವರ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡರು.
ನಗರದ ವಿವಿಧ ಕಡೆಗಳಲ್ಲಿನ ಅಂಗಡಿ ಮುಂಗಟ್ಟುಗಳಲ್ಲಿ ಯಥೇಚ್ಛವಾಗಿ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡುತ್ತಿದ್ದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ನಗರದ ಸಂತೆ ಮಾರುಕಟ್ಟೆಯಲ್ಲಿನ ಅಂಗಡಿ ಮತ್ತು ಗೋಧಾಮಗಳಿಗೆ ನಗರಸಭೆ ಪೌರಾಯುಕ್ತ ಮಂಜುನಾಥ್ ಅವರ ನೇತೃತ್ವದಲ್ಲಿ ಗೊದಾಮಿಗೆ ತೆರಳಿ ಸುಮಾರು 300ಕ್ಕೂ ಅಧಿಕ ಕೆಜಿಯಷ್ಟು ಪ್ಲಾಸ್ಟಿಕನ್ನ ವಶಪಡಿಸಿಕೊಂಡರಲ್ಲದೆ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ಮಾಡುತ್ತಿದ್ದ ಅಂಗಡಿಗಳಿಗೆ ದಂಡ ವಿಧಿಸಿ ಮತ್ತೊಮ್ಮೆ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಪೌರಯುಕ್ತ ಮಂಜುನಾಥ್ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಹಾಗೂ ಪ್ಲಾಸ್ಟಿಕ್ ಮುಕ್ತ ಚಿಕ್ಕಬಳ್ಳಾಪುರವನ್ನು ಮಾಡುವ ದಿಸೆಯಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಹಾಗೂ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 300 ಕೆಜಿ ಗೋ ಅಧಿಕ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ ಅದೇ ರೀತಿ ಮುಂದೆ ಪ್ಲಾಸ್ಟಿಕ್ ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದರ ಬಗ್ಗೆ ಅಂಗಡಿ ಮಾಲೀಕರುಗಳಿಗೆ ತಿಳಿ ಹೇಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪರಿಸರ ಇಲಾಖೆ ಅಧಿಕಾರಿ ಸುನಿಲ್ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಉಮಾಶಂಕರ್ ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಶಿವಣ್ಣ, ಸಹಾಯಕ ಸಬ್ ಇನ್ಸ್ಪೆಕ್ಟರ್ ಶಾಮಣ್ಣ ಸೇರಿದಂತೆ ಇತರರು ಇದ್ದರು.
