ದೇವನಹಳ್ಳಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಾರೆಗೌಡ ಹೇಳಿದ್ದಾರೆ.

ತಾಲೂಕಿನ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾರೆಗೌಡ ಅವರು ಅವಿರೋಧವಾಗಿ ಆಯ್ಕೆಯಾದ ನಂತರ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತೇನೆ, ಬಡವರಿಗೆ ನಿವೇಶನ ಸೇರಿದಂತೆ ಅಗತ್ಯ ಕೆಲಸಗಳನ್ನು ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಎಂದು ಅವರು ಭರವಸೆ ನೀಡಿದ್ದಾರೆ.

ಜೆಡಿಎಸ್ ಮುಖಂಡರುಗಳು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು ಈ ಸಂದರ್ಭದಲ್ಲಿ ಮುಖಂಡರಾದ ಕಾರಹಳ್ಳಿ ಶ್ರೀನಿವಾಸ್, ನಂಜೆಗೌಡ, ಗುರ್ರಪ್ಪ, ಮಂಜುನಾಥ್, ರಾಜಾನಂದಗೌಡ, ಗಿರೀಶ್, ಸನತ್ ಗೌಡ, ಕೇಶವ, ಮೋಹನ್, ಸಚಿನ್, ವೆಂಕಟೇಗೌಡ, ಪಿಡಿಒ ಮುನಿರಾಜು ಮುಂತಾದವರು ಹಾಜರಿದ್ದರು.

ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಾರೆಗೌಡ ಅವಿರೋಧ ಆಯ್ಕೆ.

ದೇವನಹಳ್ಳಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಾರೆಗೌಡ ಹೇಳಿದ್ದಾರೆ.

ತಾಲೂಕಿನ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾರೆಗೌಡ ಅವರು ಅವಿರೋಧವಾಗಿ ಆಯ್ಕೆಯಾದ ನಂತರ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತೇನೆ, ಬಡವರಿಗೆ ನಿವೇಶನ ಸೇರಿದಂತೆ ಅಗತ್ಯ ಕೆಲಸಗಳನ್ನು ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಎಂದು ಅವರು ಭರವಸೆ ನೀಡಿದ್ದಾರೆ.

ಜೆಡಿಎಸ್ ಮುಖಂಡರುಗಳು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು ಈ ಸಂದರ್ಭದಲ್ಲಿ ಮುಖಂಡರಾದ ಕಾರಹಳ್ಳಿ ಶ್ರೀನಿವಾಸ್, ನಂಜೆಗೌಡ, ಗುರ್ರಪ್ಪ, ಮಂಜುನಾಥ್, ರಾಜಾನಂದಗೌಡ, ಗಿರೀಶ್, ಸನತ್ ಗೌಡ, ಕೇಶವ, ಮೋಹನ್, ಸಚಿನ್, ವೆಂಕಟೇಗೌಡ, ಪಿಡಿಒ ಮುನಿರಾಜು ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *