ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಮಹತ್ವಪೂರ್ಣದಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಆರ್ಥಿಕ ಉನ್ನತಿಯ ದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು ಇದನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ 30-8-2023 ರಂದು ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಕಂದಾಯ ಇಲಾಖೆ ಒಳಗೊಂಡಂತೆ ಇತರ ಸರ್ಕಾರಿ ಸ್ವಾಮ್ಯದ ಎಲ್ಲಾ ಇಲಾಖೆಯ ಅಧಿಕಾರಿಗಳಾಗಿ ಜವಾಬ್ದಾರಿಗಳನ್ನು ವಿಕೇಂದ್ರೀಕರಣ ಮಾಡಿಕೊಳ್ಳುವ ಮುಖಾಂತರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಸ್. ಎನ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಬಂಗಾರಪೇಟೆ: ಪಟ್ಟಣದ ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯ ಸಂಕೀರ್ಣದ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಗಾಗಿ ಸರ್ಕಾರ 5 ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆಗಳ ಮೂಲಕ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರರೂಗಳನ್ನು ನೀಡಲಾಗುವುದು. ಇದಕ್ಕೆ ಸಂಬಂಧಪಟ್ಟಂತೆ ಜುಲೈ 19-8-2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಪ್ರಸ್ತುತ ರಾಜ್ಯದ್ಯಂತ ಲಕ್ಷಾಂತರ ಜನರು ಅರ್ಜಿಗಳನ್ನು ನೋಂದಣಿ ಮಾಡಿದ್ದಾರೆ ಎಂದರು.
31-8-2023 ರಂದು ಗೃಹಲಕ್ಷ್ಮಿ ಯೋಜನೆ ಅನುಷ್ಠಾನ:
ರಾಜ್ಯಾದ್ಯಂತ ಅರ್ಜಿ ಸಲ್ಲಿಸುವ ಎಲ್ಲಾ ಮಹಿಳೆಯರಿಗೆ ಬೃಹತ್ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ಹಣ ಸಂದಾಯ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಅನುಗುಣವಾಗಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಂತೆ ಕಾರ್ಯಕ್ರಮಗಳನ್ನು ಏರ್ಪಡಿಸಿ ಹಣ ಸಂದಾಯ ಮಾಡಲಾಗುವುದು. ನಗರ ಪ್ರದೇಶದಲ್ಲಿ ಎಸ್. ವಿ. ಆರ್. ಕಲ್ಯಾಣ ಮಂಟಪ, ಮುಬಾರಕ್ ಶಾದಿ ಮಹಲ್,ವಿವೇಕಾನಂದ ನಗರದ ಉದ್ಯಾನವನ, ಮತ್ತು ಪುರಸಭೆ ಕಚೇರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ಕಾರ್ಯಕ್ರಮದ ರೂಪರೇಷಗಳು:
ಈ ಕಾರ್ಯಕ್ರಮವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ತಾಲ್ಲೂಕು ಆಡಳಿತ ಎಲ್.ಇ.ಡಿ. ಸ್ಕ್ರೀನ್ ಬೃಹತ್ಕಾರದ ಟಿವಿ. ಆಟೋ ವಾಹನಗಳಲ್ಲಿ ಪ್ರಚಾರ ಭಿತ್ತಿ ಪತ್ರ, ಪತ್ರಿಕೆ, ಸಾಮಾಜಿಕ ಜಾಲತಾಣ, ಪ್ಲೆಕ್ಸ್ ಗಳ ಮೂಲಕ ಹೆಚ್ಚು ಪ್ರಚಾರ ಮಾಡುವಂತೆ ತೀರ್ಮಾನಿಸಲಾಗಿದೆ. ನಿಯಮದಂತೆ 200 ಪಲಾನುಭವಿಗಳನ್ನು ಗುರುತಿಸಿದ್ದು ಮೊದಲ ಹಂತದಲ್ಲಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ. ತದನಂತರ 30-8-2023 ರ ಒಳಗೆ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಪಲಾನಿಭಾವಿ ಯಜಮಾನಿ ಬ್ಯಾಂಕ್ ಖಾತೆಗೆ ಹಣಸಂದಾಯವಾಗಲಿದೆ ಮತ್ತು ಸಾರ್ವಜನಿಕರಿಗೆ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಲಘು ಉಪಹಾರ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಕೋಟ್-1: ತಹಸೀಲ್ದಾರ್ ರಶ್ಮಿ ರವರು ಮಾತನಾಡಿ ಕಾರ್ಯಕ್ರಮಗಳನ್ನು ನಿಯೋಜಿಸಿರುವ ಸ್ಥಳಗಳಲ್ಲಿ ಇದುವರೆಗೂ ಅರ್ಜಿ ಸಲ್ಲಿಸದೆ ಇರುವ ಮಹಿಳೆಯರಿಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿ ಶ್ರೀನಿವಾಸ್. ಸಿ ಡಿ ಪಿ ಓ. ಮುನಿರಾಜ್. ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ. ಇ ಓ ರವಿಕುಮಾರ್. ಪುರಸಭೆ ಮುಖ್ಯ ಅಧಿಕಾರಿ ಮೀನಾಕ್ಷಿ. ರಾಜಸ್ವ ನಿರೀಕ್ಷಕ ಅಜಯ್. ಸತ್ಪಾಲ್, ಪಿಡಿಓ ನಾರಾಯಣಪ್ಪ. ಶಂಕರ್. ಚಿತ್ರ. ವಾಣಿ. ಸರಸ್ವತಿ. ಚಂದ್ರು. ಶಂಕರ್. ಮಧುಚಂದ್ರ. ಇತರರು ಉಪಸ್ಥಿತರಿದ್ದರು