ಧಾರವಾಡ :- ಜಿಲ್ಲೆಯಾದ್ಯಂತ ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.
ಧಾರವಾಡ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಪರಿಸರ ಸ್ನೇಹಿ ಗಣಪತಿ ಮೂರ್ತಿ ಬಳಕೆ ಕುರಿತು ಮತ್ತು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಅಭಿಯಾನದ ಕುರಿತು ಚರ್ಚಿಸಿ ನಂತರ ಈ ಆದೇಶ ಹೊರಡಿಸಿದ್ದು, ಪಿಓಪಿ ಮುಕ್ತ ನಮ್ಮ ಅಭಿಯಾನಕ್ಕೆ ದೊರೆತ ಮೊದಲ ಗೆಲುವಾಗಿದೆ. ಉಪವಿಭಾಗಾಧಿಕಾರಿ ಅಶೋಕ ತೇಲಿ ಅವರ ನೇತೃತ್ವದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಪಿಒಪಿ ಗಣಪತಿ ಮಾಡುವ ಸ್ಥಳದ ಮೇಲೆ ದಾಳಿ ಮಾಡಿ, ವಿಗ್ರಹಗಳನ್ನು ವಶಪಡಿಸಿಕೊಂಡಿದ್ದು, ದಂಡ ವಿಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ನಾವೆಲ್ಲರೂ ಈ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಅಭಿಯಾನಕ್ಕೆ ಭಾಗಿಯಾಗಿ ಪರಿಸರ ರಕ್ಷಣೆಗೆ ಮುಂದಾಗೋಣ ಎಂದು ಹೇಳಿದರು.
ಪಿಓಪಿ ಮುಕ್ತ ಗಣೇಶ ಡಿಸಿಗೆ ಅಭಿನಂದನೆ ತಿಳಿಸಿದ:ರಜತ್ ಉಳಾಗಡ್ಡಿಮಠ
ಧಾರವಾಡ :- ಜಿಲ್ಲೆಯಾದ್ಯಂತ ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.
ಧಾರವಾಡ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ಪರಿಸರ ಸ್ನೇಹಿ ಗಣಪತಿ ಮೂರ್ತಿ ಬಳಕೆ ಕುರಿತು ಮತ್ತು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಅಭಿಯಾನದ ಕುರಿತು ಚರ್ಚಿಸಿ ನಂತರ ಈ ಆದೇಶ ಹೊರಡಿಸಿದ್ದು, ಪಿಓಪಿ ಮುಕ್ತ ನಮ್ಮ ಅಭಿಯಾನಕ್ಕೆ ದೊರೆತ ಮೊದಲ ಗೆಲುವಾಗಿದೆ. ಉಪವಿಭಾಗಾಧಿಕಾರಿ ಅಶೋಕ ತೇಲಿ ಅವರ ನೇತೃತ್ವದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಪಿಒಪಿ ಗಣಪತಿ ಮಾಡುವ ಸ್ಥಳದ ಮೇಲೆ ದಾಳಿ ಮಾಡಿ, ವಿಗ್ರಹಗಳನ್ನು ವಶಪಡಿಸಿಕೊಂಡಿದ್ದು, ದಂಡ ವಿಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ನಾವೆಲ್ಲರೂ ಈ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಅಭಿಯಾನಕ್ಕೆ ಭಾಗಿಯಾಗಿ ಪರಿಸರ ರಕ್ಷಣೆಗೆ ಮುಂದಾಗೋಣ ಎಂದು ಹೇಳಿದರು.