


ಕೆ.ಎಂ.ಮುರಳಿ ಅವರ ಜನ್ಮದಿನಾಚರಣೆ :
ಶಾಸಕ ಎಸ್ ಆರ್ ವಿಶ್ವನಾಥ್ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ :
ಯಲಹಂಕ : ಯಲಹಂಕ ನಗರ ಮಂಡಲ ಬಿಜೆಪಿ ಎಸ್. ಸಿ. ಮೋರ್ಚಾ ಅಧ್ಯಕ್ಷರು, ದಲಿತ ಪರ ಹೋರಾಟಗಾರ ಕೆ.ಎಂ.ಮುರಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಎಸ್ ಆರ್ ವಿಶ್ವನಾಥ್ ಅವರು ತಮ್ಮ ಗೃಹಕಚೇರಿಯಲ್ಲಿ ಮುರಳಿ ಅವರನ್ನು ಸನ್ಮಾನಿಸಿ ಜನ್ಮದಿನದ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಯಲಹಂಕ ನಗರ ಮಂಡಲ ಬಿಜೆಪಿ ಅಧ್ಯಕ್ಷ ಎಂ.ಮುನಿರಾಜು,ಪ್ರಧಾನ ಕಾರ್ಯದರ್ಶಿಗಳಾದ ವಿ.ಎಂ.ಈಶ್ವರ್, ವಿ.ಪವನ್ ಕುಮಾರ್, ವಿಶ್ವನಾಥಪುರ ಮಂಜುನಾಥ್, ಚೊಕ್ಕನಹಳ್ಳಿ ವೆಂಕಟೇಶ್, ನಾರಾಯಣಸ್ವಾಮಿ, ಬಿಜೆಪಿ ಎಸ್.ಸಿ.ಮೋರ್ಚಾ ಪದಾಧಿಕಾರಿಗಳಾದ ಅಟ್ಟೂರು ವಿಶ್ವ, ಮುನಿರಾಜು, ಸೀತಕೆಂಪನಹಳ್ಳಿ ಚಂದ್ರಶೇಖರ್, ಶ್ರೀರಾಮನಹಳ್ಳಿ ಜಗದೀಶ್, ಸುನಿಲ್ ಕುಮಾರ್ ಸೇರಿದಂತೆ ಇನ್ನಿತರರಿದ್ದರು.
