ಯಲಹಂಕ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರ ಗ್ರಾಮದಲ್ಲಿ ಸುಮಾರು 20 ರಿಂದ 25 ಲಕ್ಷ ರು.ಗಳ ಅಂದಾಜು ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ್ದ ಅಂಗನವಾಡಿ ಕೇಂದ್ರ ಮತ್ತು ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎಸ್ ಆರ್ ವಿಶ್ವನಾಥ್ ಮಂಗಳವಾರ ಲೋಕಾರ್ಪಣೆ ಮಾಡಿದರು. ಇದರಿಂದ ಅಲ್ಲಿನ ಸ್ಥಳೀಯ ಜನರಿಗೆ ಬಹಳ ಅನುಕೂಲವಾಗಿದೆ. ಗ್ರಾಮಸ್ಥರಿಗೆ ಬಹಳ ಖುಷಿಯಾಯಿತು ಇದೇ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಪುಟ್ಟರಾಜು, ವಕೀಲರು ಬಿಜೆಪಿ ನಾಯಕರಾದ ಸುಬ್ರಮಣಿ, ಚಿಕ್ಕರಾಜು, ಮುನಿಯಪ್ಪ, ಬಿ.ಎಂ.ಮೂರ್ತಿ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *