ವಚನ ಸಾಹಿತ್ಯದ ಬಗ್ಗೆ ಅರಿವು ಮೂಡಿಸಲು ವಚನ ಸ್ಪರ್ಧೆ :
ಯಲಹಂಕ : ಬೆಂಗಳೂರು ನಗರ
ಜಿಲ್ಲಾ ವಚನ ಸಾಹಿತ್ಯ ಪರಿಷತ್ತು ವತಿಯಿಂದ ಯಲಹಂಕ ಹಳೇನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ವಚನ ದಿನಾಚರಣೆ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯದ ಬಗ್ಗೆ ಶಾಲಾಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ವಚನ ಗಾಯನ ಸ್ಪರ್ಧೆ, ಶರಣರ ವೇಷಭೂಷಣ ಸ್ಪರ್ಧೆ ಏರ್ಪಡಿಸಿದ್ದರು.
ವಚನ ಸಾಹಿತ್ಯದ ಅರಿವು ಮೂಡಿಸುವ ಈ ಸ್ಪರ್ಧೆಯಲ್ಲಿ ಯಲಹಂಕ ಸರ್ಕಾರಿ ಪ್ರೌಢಶಾಲೆಯ 70 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡು ವಚನಗಳನ್ನು ಹಾಡಿದರು. ಸ್ಪರ್ಧೆಯಲ್ಲಿ ಅತ್ಯುತ್ತಮವಾಗಿ ಹಾಡಿದ ಮಕ್ಕಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಹಾಗೂ 40 ಮಕ್ಕಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅರ್ಹತಾ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಮಕ್ಕಳು ಶರಣರ ವೇಷಭೂಷಣ ದಲ್ಲಿ ಕಂಗೊಳಿಸಿದರು.
ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಯಲಹಂಕ ತಾಲ್ಲೂಕು ಅಧ್ಯಕ್ಷ ಎ.ಪಿ.ಕಾಂತರಾಜು, ನಂದಿ ಶೈಕ್ಷಣಿಕ ಸಾಂಸ್ಕೃತಿಕ ಸಂಘದ ಪದಾಧಿಕಾರಿ, ಖ್ಯಾತ ವಕೀಲರಾದ ರುದ್ರಯ್ಯ, ಸೀಮಾ ಸುಂಕ ಇಲಾಖೆಯ ನಿವೃತ್ತ ಅಧಿಕಾರಿ ಈಶ್ವರಪ್ಪ, ಯಲಹಂಕ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಕನ್ನಮ್ಮ, ಶಾಲೆಯ ಶಿಕ್ಷಕ ವೃಂದ ಸೇರಿದಂತೆ ಇನ್ನಿತರ ಗಣ್ಯರಿದ್ದು, ವಚನ ಸಾಹಿತ್ಯದ ಬಗ್ಗೆ ಪ್ರವಚನ ನೀಡಿದರು.

