ಧಾರವಾಡ:- ಕಾಯಕ ನಿಷ್ಠೆ, ದಾಸೋಹ ಹಾಗೂ ಪ್ರಾಮಾಣಿಕತೆಗೆ ಹೆಸರಾದ ಶಿವಶರಣ ಶ್ರೀ ನುಲಿಯ ಚಂದಯ್ಯನವರು ಸಮಾಜಕ್ಕೆ ಸನ್ಮಾರ್ಗ ತೋರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಹೇಳಿದರು

ಗುರುವಾರ ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ನುಲಿಯ ಚಂದಯ್ಯನವರು ಬಸವಣ್ಣನವರ ವಿಚಾರಧಾರೆಯಿಂದ ಪ್ರಬಾವಿತರಾಗಿ ಶಿವನುಭವ ಮಂಟಪಕ್ಕೆ ಸೇರಿದ್ದರು. 12ನೇ ಶತಮಾನದ ಸಕಲ ಶರಣರ ಪ್ರೀತಿಗೆ ಪಾತ್ರರಾಗಿದ್ದರು.
ಹುಲ್ಲಿನ ಹಗ್ಗ ಹೊಸೆಯುವ ಕಾಯಕ ಮಾಡಿ ಅದರ ಮಾರಾಟದಿಂದ ಬಂದ ಆದಾಯವನ್ನು ದಾಸೋಹ ಸೇವೆಗೆ ದಾನ ಮಾಡುತ್ತಿದ್ದರು. ಸಮಾಜದ ಅಂಕುಡೊಂಕು ತಿದ್ದುವಲ್ಲಿ ನುಲಿಯ ಚಂದಯ್ಯ ಅವರ ಪಾತ್ರ ಕೂಡ ಬಹು ದೊಡ್ಡದಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಎಂ.ಭಜಂತ್ರಿ ಅವರು ಶ್ರೀ ನುಲಿಯ ಚಂದಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಉಪ್ಪಿನಬೆಟಗೇರಿಯ ಮೂರುಸಾವಿರವಿರಕ್ತಮಠದ ಮ.ನಿ.ಪ್ರ. ಶ್ರೀ ಗುರುಕುಮಾರ ವಿರುಪಾಕ್ಷೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದರು.
ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಾ.ಉಮಾದೇವಿ ಭಜಂತ್ರಿ ಕಾರ್ಯಕ್ರಮ ನಿರೂಪಿಸಿದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿದ ಜಿಲ್ಲೆಯ ಕೊರಮ , ಕೊರಚ ಮತ್ತು ಕುಂಚಿ ಕೊರವರ ಸಮುದಾಯದ ಮಕ್ಕಳಿಗೆ ಪ್ರಮಾಣ ಪತ್ರ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖಂಡರಾದ ಹನುಮಂತಪ್ಪ ಕೊರವರ, ಜಿಲ್ಲಾ ಕೊರಮ ಸಂಘದ ಅಧ್ಯಕ್ಷ ನಾರಾಯಣ ಭಜಂತ್ರಿ,ಜಿಲ್ಲಾ ಕೊರವ ಮಹಿಳಾ ಸಂಘದ ಅಧ್ಯಕ್ಷೆ
ಸುನಂದಾ ಭಜಂತ್ರಿ, ಸಮುದಾಯದ ಮುಖಂಡರಾದ ಮಾರುತಿ ಮಾಕಡವಾಲೆ, ಮಂಜುನಾಥ ಭಜಂತ್ರಿ ಅವರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಸಮಾಜದ ಹಿರಿಯರು ಉಪಸ್ಥಿತರಿದ್ದರು.

ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಸನ್ಮಾರ್ಗ ತೋರಿದ ಶಿವಶರಣ ಶ್ರೀ ನುಲಿಯ ಚಂದಯ್ಯ- ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ


ಧಾರವಾಡ:- ಕಾಯಕ ನಿಷ್ಠೆ, ದಾಸೋಹ ಹಾಗೂ ಪ್ರಾಮಾಣಿಕತೆಗೆ ಹೆಸರಾದ ಶಿವಶರಣ ಶ್ರೀ ನುಲಿಯ ಚಂದಯ್ಯನವರು ಸಮಾಜಕ್ಕೆ ಸನ್ಮಾರ್ಗ ತೋರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಹೇಳಿದರು

ಗುರುವಾರ ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಶಿವಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ನುಲಿಯ ಚಂದಯ್ಯನವರು ಬಸವಣ್ಣನವರ ವಿಚಾರಧಾರೆಯಿಂದ ಪ್ರಬಾವಿತರಾಗಿ ಶಿವನುಭವ ಮಂಟಪಕ್ಕೆ ಸೇರಿದ್ದರು. 12ನೇ ಶತಮಾನದ ಸಕಲ ಶರಣರ ಪ್ರೀತಿಗೆ ಪಾತ್ರರಾಗಿದ್ದರು.
ಹುಲ್ಲಿನ ಹಗ್ಗ ಹೊಸೆಯುವ ಕಾಯಕ ಮಾಡಿ ಅದರ ಮಾರಾಟದಿಂದ ಬಂದ ಆದಾಯವನ್ನು ದಾಸೋಹ ಸೇವೆಗೆ ದಾನ ಮಾಡುತ್ತಿದ್ದರು. ಸಮಾಜದ ಅಂಕುಡೊಂಕು ತಿದ್ದುವಲ್ಲಿ ನುಲಿಯ ಚಂದಯ್ಯ ಅವರ ಪಾತ್ರ ಕೂಡ ಬಹು ದೊಡ್ಡದಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಎಂ.ಭಜಂತ್ರಿ ಅವರು ಶ್ರೀ ನುಲಿಯ ಚಂದಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಉಪ್ಪಿನಬೆಟಗೇರಿಯ ಮೂರುಸಾವಿರವಿರಕ್ತಮಠದ ಮ.ನಿ.ಪ್ರ. ಶ್ರೀ ಗುರುಕುಮಾರ ವಿರುಪಾಕ್ಷೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದರು.
ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಾ.ಉಮಾದೇವಿ ಭಜಂತ್ರಿ ಕಾರ್ಯಕ್ರಮ ನಿರೂಪಿಸಿದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿದ ಜಿಲ್ಲೆಯ ಕೊರಮ , ಕೊರಚ ಮತ್ತು ಕುಂಚಿ ಕೊರವರ ಸಮುದಾಯದ ಮಕ್ಕಳಿಗೆ ಪ್ರಮಾಣ ಪತ್ರ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖಂಡರಾದ ಹನುಮಂತಪ್ಪ ಕೊರವರ, ಜಿಲ್ಲಾ ಕೊರಮ ಸಂಘದ ಅಧ್ಯಕ್ಷ ನಾರಾಯಣ ಭಜಂತ್ರಿ,ಜಿಲ್ಲಾ ಕೊರವ ಮಹಿಳಾ ಸಂಘದ ಅಧ್ಯಕ್ಷೆ
ಸುನಂದಾ ಭಜಂತ್ರಿ, ಸಮುದಾಯದ ಮುಖಂಡರಾದ ಮಾರುತಿ ಮಾಕಡವಾಲೆ, ಮಂಜುನಾಥ ಭಜಂತ್ರಿ ಅವರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಸಮಾಜದ ಹಿರಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *