ಹುಬ್ಬಳ್ಳಿ :- ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಎರುಪೇರಾಗಿದ್ದು ಶೀಘ್ರ ಗುಣಮುಖರಾಗಲೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಜನತಾದಳ ಜಾತ್ಯತೀತ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹುಬ್ಬಳ್ಳಿ ನಗರದ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಅ. 31 ಗುರುವಾರ ರಂದು 11 ಗಂಟೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಸಿದ್ಧಲಿಂಗೇಶ್ವರಗೌಡ ಮಹಾಂತಒಡೆಯರ, ನವೀನಕುಮಾರ.ಮ, ಬಾಷಾಸಾಬ ಮುದಗಲ್ಲ, ಪರ್ವೆಜಅಹ್ಮದ ಕಟ್ಟಿಮನಿ ಹಾಗೂ ಜೆಡಿಎಸ್ ಪಕ್ಷದ ಇತರೆ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.

