ಚಿಕ್ಕಬಳ್ಳಾಪುರ ಸರ್ಕಾರಿ ಮೆಡಿಕಲ್ ಕಾಲೇಜು ಸೆ.15ಕ್ಕೆ ನೂತನ ಕಟ್ಟಡದಲ್ಲಿ ಆರಂಭಸಚಿವರಿಂದ ವಿವಿಧ ಕಾಮಗಾರಿಗಳ ಸರಣಿ ಪರಿಶೀಲನೆ*
ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಹಾಗು ಕೌಶಲ್ಯಾಭಿವೃದ್ಧಿ,
ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ರಣಪ್ರಕಾಶ ಆರ್ ಪಾಟೀಲ ಅವರೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ. ಸಿ. ಸುಧಾಕರ್ ಅವರು ಚಿಕ್ಕಬಳ್ಳಾಪುರ ತಾಲ್ಲೂಕಿನ ವಿವಿಧ ಕಾಮಗಾರಿಗಳನ್ನು ಶುಕ್ರವಾರ ಪರಿಶೀಲಿಸಿದರು.ಸಚಿವದ್ವಯರು ಇಂದು ಮೊದಲಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಅಂಗಟ್ಟ ಗ್ರಾಮದ ಬಳಿ14.9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವಸರ್.ಎಂ.ವಿಶ್ವೇಶ್ವರಯ್ಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಪಾರ್ ಸೂಪರ್ ಟ್ರೈನರ್ಸ್ ಸಂಸ್ಥೆಯ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.ಚಿಕ್ಕಬಳ್ಳಾಪುರ ತಾಲ್ಲೂಕಿನ ಅರೂರು ಬಳಿ ನಿರ್ಮಾಣವಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಟ್ಟಡಗಳ ಬಗ್ಗೆ ಪರಿಶೀಲಿಸಿ ನೂತನ ಕಟ್ಟಡದಲ್ಲಿ ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಪೂರ್ಣಕಾಲಿಕವಾಗಿ ಆರಂಭಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ವೇಳೆ ಸುದ್ದಿಗಾರರೊಂದಿಗೆ ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ ಆರ್ ಪಾಟೀಲ ಅವರು
ಮಾತನಾಡಿ,ಮುದ್ದೇನಹಳ್ಳಿಯ VTU ಕ್ಯಾಂಪಸ್ ನಲ್ಲಿ ತಾತ್ಕಾಲಿಕವಾಗಿ ನಡೆಯುತ್ತಿರುವುದರಿಂದ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಲಿಕಾ ಪ್ರಕ್ರಿಯೆಗಳನ್ನು ಸೆಪ್ಟೆಂಬರ್ 15ಕ್ಕೆ ಭಾರತ ರತ್ನಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದಂದು ಅರೂರ್ ಬಳಿ ನಿರ್ಮಾಣವಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ನೂತನ ಕಟ್ಟಡಕ್ಕೆ ವರ್ಗಾಯಿಸಲಾಗುತ್ತದೆ.ಕಳೆದ ಎರಡು ಶೈಕ್ಷಣಿಕ ಸಾಲಿನಲ್ಲಿ
ದಾಖಲಾಗಿರುವ200ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಈ ಸಾಲಿನ100 ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆಗೆ ಬೇಕಾದ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸುಸಜ್ಜಿತವಾಗಿ ನೂತನ ಕಟ್ಟಡದಲ್ಲಿ ಒದಗಿಸಲಾಗುವುದು.ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಾತನಾಡಿ,
ವಿಶ್ವೇಶ್ವರಯ್ಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಪಾರ್ ಸೂಪರ್ ಟ್ರೈನರ್ಸ್ ಸಂಸ್ಥೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.ಈ ವರ್ಷಾಂತ್ಯದಲ್ಲಿ ಆರಂಭಿಸಲು ಚಿಂತಿಸಲಾಗಿದೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಪೂರ್ಣಕಾಲಿಕವಾಗಿ ಆರಂಭಿಸಲಾಗುವುದು.ಈ ಸಂಸ್ಥೆಯು ಖಾಸಗಿ ಸಹಭಾಗಿತ್ವದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ10ಎಕರೆ ಜಾಗದಲ್ಲಿ ನಿರ್ಮಾಣವಾಗುತ್ತಿದೆ.ಸರ್ಕಾರ ಮಂಜೂರು ಮಾಡಿರುವ 14.9 ಕೋಟಿ ಅನುದಾನದ ಜೋತೆಗೆ 4.35 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ.ವಿವಿಧ ಕೌಶಲ್ಯಗಳಲ್ಲಿ ನೈಪುಣ್ಯತೆ ಹೊಂದಿರುವ ತಜ್ಞರಿಗೆ ನೂತನ ನಾವಿನ್ಯತೆಯ ಕೌಶಲ್ಯಗಳ ಬಗ್ಗೆ ತರಬೇತಿ ನೀಡುವ ಕೇಂದ್ರವಾಗಲಿದೆ. ಬ್ಯಾಚುಲರ್ ಆಫ್ ಇಂಜಿನಿಯರಿಂಗ್,ಡಿಪ್ಲೋಮ ಸೇರಿದಂತೆ ಇನ್ನಿತರ ವೃತ್ತಿಪರ ಪದವಿ ಹೊಂದಿರುವವರಿಗೆ ತರಬೇತಿ ನೀಡಲು ಕೂಡ ಚಿಂತಿಸಲಾಗಿದೆ.ಉದ್ಯೋಗದಾತ ಕಂಪನಿಗಳು ಇತ್ತೀಚಿಗೆ ಅನುಭವ ಹೊಂದಿರುವವರಿಗೆ ಮಾತ್ರ ಅವಕಾಶ ನೀಡುತ್ತಿರುವುದರಿಂದ ನೂತನವಾಗಿ ಪದವಿ ಪಡೆದವರಿಗೆ ಉದ್ಯೋಗ ಪಡೆಯುವುದು ಸವಾಲಾಗಿದೆ.ಆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಈ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು. ಒಟ್ಟಾರೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.ಶಾಸಕರಾದ ಪ್ರದೀಪ್ ಈಶ್ವರ್ ಹಾಗೂ ಇದ್ದರು.