“ಕುಡಿಯುವ ನೀರಿನ ಅಭಾವದ ಬಗ್ಗೆ ಜಲಮಂಡಳಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಶಾಸಕ ಮುನಿರಾಜು”
(ನರಸಿಂಹಮೂರ್ತಿ ವೈ ಜಿ ವರದಿಗಾರರು ಬಯಲು ಸಿಂಹ ಪೀಣ್ಯ ದಾಸರಹಳ್ಳಿ)
ಪೀಣ್ಯ ದಾಸರಹಳ್ಳಿ : ಕ್ಷೇತ್ರವು ಕೈಗಾರಿಕಾ ಪ್ರದೇಶವಾದ್ದರಿಂದ ಕುಡಿಯುವ ನೀರಿನ ಅಭಾವ ಹೆಚ್ಚಿದ್ದು ಕುಡಿಯುವ ನೀರಿನ ಅಭಾವವನ್ನು ನೀಗಿಸಲು ದಾಸರಹಳ್ಳಿ ಪ್ರದೇಶದ ಜಲ ಮಂಡಳಿ ಕಚೇರಿಗೆ ದಿಡೀರ್ ಶಾಸಕ ಎಸ್ ಮುನಿರಾಜು ಭೇಟಿ ನೀಡಿ ಜಲಮಂಡಳಿಯ ಮುಖ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ನಮ್ಮ ಕ್ಷೇತ್ರದ ವ್ಯಾಪ್ತಿಯು ಬೃಹತ್ ಕೈಗಾರಿಕಾ ಪ್ರದೇಶವಾದ್ದರಿಂದ ಈ ಪ್ರದೇಶದಲ್ಲಿ ಕೂಲಿ ಕಾರ್ಮಿಕರು ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದು ಮತ್ತು ಬೃಹತ್ ಕೈಗಾರಿಕಾ ಪ್ರದೇಶವಾದ್ದರಿಂದ ಕೈಗಾರಿಕಾ ಕಂಪನಿಗಳಿಗೂ ಸರಿಯಾದ ರೀತಿಯಲ್ಲಿ ನೀರು ಸರಬರಾಜು ಆಗಬೇಕು ಮತ್ತು ಜನತೆಗೂ ಸಹಕಾಲಕ್ಕೆ ಸರಿಯಾಗಿ ಕುಡಿಯುವ ನೀರನ್ನು ಒದಗಿಸಬೇಕು ಇಲ್ಲವಾದರೆ ಜನರು ಕುಡಿಯುವ ನೀರಿಗಾಗಿ ಪರದಾಡಬೇಕಾಗುತ್ತದೆ ಆದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕು ಎಂದು ಹೇಳಿದರು ಸುದ್ದಿಗಾರರೊಂದಿಗೆ ಶಾಸಕ ಎಸ್ ಮುನಿರಾಜು ಮಾತನಾಡಿದ ಅವರು ಕ್ಷೇತ್ರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿರುವುದು ನಮ್ಮ ಕಣ್ಣ ಮುಂದೆ ಕಾಣುತ್ತಿದೆ ಆದ್ದರಿಂದ ಕ್ಷೇತ್ರದ ಜನತೆ ಗೆ ಎರಡು ದಿನಕೊಮ್ಮೆಯಾದರೂ ನೀರನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು ಹಾಗೆ ನಮ್ಮ ನಾಗರಿಕರೂ ಸಹ ಕುಡಿಯುವ ನೀರಿನ ಬಗ್ಗೆ ಕಾಳಜಿವಹಿಸಿ ನೀರನ್ನು ಸುಖ ಸುಮ್ಮನೆ ವ್ಯಯ ಮಾಡದೆ ಮಿತವಾಗಿ ಬಳಸಿ ನೀರನ್ನು ಉಳಿಸಲು ಸಹಕರಿಸಬೇಕೆಂದು ವಿನಂತಿಸಿಕೊಂಡರು ಕಾವೇರಿ ಐದನೇ ಹಂತದ ಯೋಜನೆಯಡಿ ಸರಿಯಾದ ರೀತಿಯಲ್ಲಿ ಪೂರೈಕೆಯಾದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ಸಾಧ್ಯತೆಗಳು ಇರುತ್ತದೆ ಸಾರ್ವಜನಿಕರು ನಿರ್ಮಿಸುತ್ತಿರುವ ಕಟ್ಟಡಗಳು ಹೆಚ್ಚಿನ ರೀತಿಯಲ್ಲಿ ನಿರ್ಮಾಣವಾಗುತ್ತಿರುವುದರಿಂದ ನೀರಿನ ಸಮಸ್ಯೆ ಹೆಚ್ಚಿನ ರೀತಿಯಲ್ಲಿ ಉಲ್ಬಣವಾಗುತ್ತಿದೆ ಅದರಲ್ಲಿಯೂ ಕಾಲಕ್ಕೆ ಸರಿಯಾಗಿ ಮಳೆ ಇಲ್ಲದೆ ಕಾವೇರಿ ನೀರಿನ ಮಟ್ಟ ಬಹುತೇಕ ಕುಸಿದಿದೆ ಇವೆಲ್ಲದರ ಬಗ್ಗೆ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಸರಿಯಾದ ರೀತಿಯಲ್ಲಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು ಜಲ ಮಂಡಳಿಯ ಪಶ್ಚಿಮ ವಲಯದ ಮುಖ್ಯ ಇಂಜಿನಿಯರ್ ಪರಮೇಶ್ವರಪ್ಪ ಮಾತನಾಡಿ ಇಂದಿನಂತೆಯೇ 730 ಎಂ ಎಲ್ ಡಿ ನೀರು ಪೂರೈಕೆಯಾಗುತ್ತಿದೆ ಸಾರ್ವಜನಿಕ ಬೋರ್ವೆಲ್ ಗಳಲ್ಲಿಯೂ ಸಹ ನೀರಿನ ಮಟ್ಟ ಸಹಜವಾಗಿ ಕುಸಿದು ಹೋಗಿದೆ ಇದರಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಆದ್ದರಿಂದ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ನಾವು ಶಕ್ತಿ ಮೀರಿ ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಂಜುನಾಥ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗರಾಜ್, ಕಾರ್ತಿಕ್, ಮಂಜು ಕೀರ್ತನ್, ಜ್ಯೋತಿ ಸೇರಿದಂತೆ ಎಲ್ಲಾ ಉತ್ತರ ವಲಯ ಅಧಿಕಾರಿಗಳು ಭಾಗವಹಿಸಿದ್ದರು.