ಕಾರ್ಮಿಕ ಇಲಾಖೆಯಿಂದ ಉಚಿತ ಲ್ಯಾಪಟಾಪ್‌ಗಾಗಿ ಅರ್ಜಿ ಆಹ್ವಾನ

ಬೀದರ, ಸೆಪ್ಟೆಂಬರ 04 (ಕರ್ನಾಟಕ ವಾರ್ತೆ)- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೊಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-2024ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ಹಾಗಾಗಿ ಕಾರ್ಮಿಕ ಆಧಿಕಾರಿ, ಬೀದರ ಉಪ ವಿಭಾಗ ಇವರ ವ್ಯಾಪ್ತಿಯಲ್ಲಿ ನೊಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಆಧಿಕಾರಿ, ಬೀದರ ಉಪವಿಭಾಗ, ಬೀದರ ಇವರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬುಹುದಾಗಿರುತ್ತದೆ. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ರಂದು ಅಂತಿಮ ದಿನವಾಗಿರುತ್ತದೆ. ತದನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಯವರ ಕಛೇರಿ, ಶಿವನಗರ ಉತ್ತರ, ಕೆ.ಜಿ.ಬಿ ಬ್ಯಾಂಕ ಹತ್ತಿರ, ಮುತ್ತುಟ್ ಫೈನನ್ಸ್ ಮೇಲುಗಡೆ ಬೀದರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ : 08482-227187 ಅನ್ನು ಸಂಪರ್ಕಿಸಬಹುದು ಎಂದು ಬೀದರ ಉಪ ವಿಭಾಗದ ಕಾಮಿ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *