ಇಂಜನಹಳ್ಳಿಯಲ್ಲಿ ಸಪ್ಟೆಂಬರ್ ಮಾಹೆಯ ಪೋಶನ್ ಮಾಸಾಚರಣೆ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ ಹೊಸಕೋಟೆ : ಇಂಜನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಜಡಿಗೇನಹಳ್ಳಿ ಸರ್ಕಲ್ ಅಂಗನವಾಡಿ ಕಾರ್ಯಕರ್ತೆಯರು ಸಪ್ಟೆಂಬರ್ ಮಾಹೆಯ ಪೋಶನ್ ಮಾಸಾಚರಣೆ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಮಾಡಲಾಯಿತು. ಪೋಷಣ ಅಭಿಯಾನದ ಸಂಯೋಜಕರಾದಂತಹ ಶ್ರೀಯುತ ಆನಂದ್ ಸರ್ ಅವರು ಮಾತನಾಡಿ ಮಹಿಳೆಯರಲ್ಲಿ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಬೇಕು ಹೆಚ್ಚಿನ ರೀತಿಯಲ್ಲಿ ಸೊಪ್ಪು ತರಕಾರಿಗಳನ್ನು ತಿನ್ನಬೇಕು ಅವುಗಳಲ್ಲಿರುವ ಅಂತಹ ಪೋಷಕಾಂಶಗಳು ನಮ್ಮ ದೇಹಕ್ಕೆ ಆರೋಗ್ಯಕರವಾಗಿರುತ್ತದೆ ಗರ್ಭಿಣಿಯರು ಮತ್ತು ಬಾಣಂತಿಯರು ಮತ್ತು ಮಕ್ಕಳು ಪೌಷ್ಟಿಕಾಂಶ ಇರುವಂತಹ ಆಹಾರ ಪದಾರ್ಥಗಳನ್ನು ತಿನ್ನಬೇಕು ನಮ್ಮಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕರಾದಂತಹ ಶ್ರೀಮತಿ ಕೆಎಂ ಸರೋಜಮ್ಮ, ಸಂಯೋಜಕರು ಶ್ರೀಯುತ ಆನಂದ್,ಆರೋಗ್ಯ ಇಲಾಖೆಯ ಶೀಲಾ ,ಆಶಾಕಿರಣ ಪ್ರಾಜೆಕ್ಟ್ ಸ್ವಾಮಿ ವಿವೇಕಾನಂದ ಯೂಥ್ ಮೊಮೆಂಟ್ ಹೋಪ ಫೌಂಡೇಶನ್ ಜಡಿಗೇನಹಳ್ಳಿ ಸರ್ಕಲ್ಎಲ್ಲಾ ಅಂಗನವಾಡಿ ಶಿಕ್ಷಕಿಯರು ಹಾಗೂ ಗ್ರಾಮದ ಮಹಿಳೆಯರು ಗರ್ಭಿಣಿ ಬಾಣಂತಿಯರು ಹಾಜರಿದ್ದರು.
