ಚಿಕ್ಕಬಳ್ಳಾಪುರ.ಜು 11- ರಾಜ್ಯದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾಗಿ ಮುಸ್ಲಿಂ ಸಮುದಾಯದವರಿಗೆ 2ಸಾವಿರ ಕೋಟಿ ರೂ ಮೀಸಲಿಟ್ಟಿರುವ ಮುಖ್ಯಮಂತ್ರಿಗಳಿಗೆ ಹಾಗೂ ಸಚಿವ ಸಂಪುಟ ಸಚಿವರಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಬಿ.ಎಸ್.ರಫೀ ಉಲ್ಲಾ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ಈ ಹಿಂದಿನ ಬಿಜೆಪಿ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ನಮ್ಮ ಸಮುದಾಯಕ್ಕೆ ಯಾವುದೇ ರೀತಿಯ ಅನುಕೂಲಗಳನ್ನು ಮಾಡದೆ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಸಹ ನಿಲ್ಲಿಸಲಾಗಿತ್ತು ಇದರಿಂದಾಗಿ ಸಮುದಾಯದ ಅನೇಕ ಬಡ ವಿದ್ಯಾರ್ಥಿಗಳಿಗೆ ತೀರ ತೊಂದರೆ ಉಂಟಾಗಿತ್ತು.ಇವೆಲ್ಲವನ್ನ ಪರಿಗಣಿಸಿರುವ ರಾಜ್ಯದ ಮುಖ್ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಆದೇಶ,10 ಹೊಸ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳು ಆರಂಭ,65 ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಗಳ ಉನ್ನತಿಕರಣ, ಬೆಂಗಳೂರಿನ ಹಜ್ ಭವನದಲ್ಲೇ ಐಎಎಸ್ ಮತ್ತು ಕನ್ನಡ ಕೆಎಎಸ್ ವಸತಿ ಸಹಿತ ತರಬೇತ.. ವಿದೇಶದಲ್ಲಿ ಅಧ್ಯಯನ ಮಾಡಲು ಶೂನ್ಯ ಬಡ್ಡಿಯಲ್ಲಿ ಸಾಲ… ಅಲ್ಪಸಂಖ್ಯಾತರು ನಾಲ್ಕು ಚಕ್ರದ ವಾಹನ ಖರೀದಿಗೆ 3 ಲಕ್ಷಗಳ ನೆರವು… ಜೈನರ ಪುಣ್ಯಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ಮೀಸಲು ರಾಜ್ಯದಲ್ಲಿ 49,000 ವಖ್ಫ್ ಆಸ್ತಿ ಸಂರಕ್ಷಣೆಗೆ 50 ಕೋಟಿ… ಗುರುದ್ವಾರ ಅಭಿವೃದ್ಧಿಗೆ 25 ಕೋಟಿ ಮೀಸಲು… ಕೌಶಲ್ಯಭಿವೃದ್ಧಿ ತರಬೇತಿಗೆ ನಾಲ್ಕು ಕೋಟಿ ಮೀಸಲು…ಅರ್ಧಕ್ಕೆ ನಿಂತ ಶಾದಿ ಮಹಲ್ ಮರು ನಿರ್ಮಾಣಕ್ಕೆ 54 ಕೋಟಿ ರೂ ಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿ ಉದಾರತೆ ಮೆರೆದಿದೆ ಎಂದು ಬಿ.ಎಸ್.ರಫೀ ಉಲ್ಲಾ ಪ್ರಕಟಣೆಯಲ್ಲಿ ವಿವರಿಸಿ ಈ ಹಿಂದಿನ ಬಿಜೆಪಿ ಸರ್ಕಾರ ರದ್ದುಗೊಳಿಸಿದ್ದ 2B ಮೀಸಲಾತಿಯನ್ನು ಪುನಃ ನೀಡಲು ಮನವಿ ಮಾಡಿದ್ದಾರೆ.

Jul 11, 2023 #Muslim. samuday

Leave a Reply

Your email address will not be published. Required fields are marked *