ರೇಣುಮಾಕಲಹಳ್ಳಿ ವಸತಿ ಶಾಲೆಗೆ ಸಂದೀಪ್ ರೆಡ್ಡಿ ಯಿಂದ ವಾಟರ್ ಫಿಲ್ಟರ್ ಕೊಡುಗೆ
ಚಿಕ್ಕಬಳ್ಳಾಪುರ: ತಾಲ್ಲೂಕಿನ ರೇಣುಮಾಕಲಹಳ್ಳಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಭೇಟಿ ನೀಡಿದ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ವಿತರಿಸಿದರು.
ಬಳಿಕ ಮಾತನಾಡಿದ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ಅವರು, ಸರ್ಕಾರಿ ಶಾಲೆಗಳು ಮತ್ತು ವಸತಿ ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿದರೆ ಮಕ್ಕಳ ಕಲಿಕೆಗೆ ಪೂರಕವಾಗಲಿದೆ. ಅಲ್ಲದೇ ಮಕ್ಕಳ ಆರೋಗ್ಯವು ಸಹ ಉತ್ತಮವಾಗಿರಲಿದೆ ಎಂದು ಹೇಳಿದರು.
ಕಳೆದ ಕೆಲ ದಿನಗಳ ಹಿಂದೆ ಈ ಶಾಲೆಗೆ ಭೇಟಿ ನೀಡಿದ್ದೆ. ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಇಂದು ಭಗತ್ಸಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಶಾಲೆಗೆ ವಾಟರ್ ಫಿಲ್ಟರ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಚೆನ್ನಾಗಿ ಓದಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಪೋಷಕರಿಗೆ, ವಿದ್ಯೆ ಕಲಿಸಿದ ಶಾಲಾ ಶಿಕ್ಷಕರಿಗೆ ಗೌರವ ತಂದು ಕೊಟ್ಟರೆ ಅದೇ ನೀವು ನಮಗೆ ನೀಡುವ ಕೊಡುಗೆಯಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಳೆದ ಜೂನ್ 25ರಂದು ಮೊರಾರ್ಜಿ ಶಾಲೆಗೆ ಭೇಟಿ ನೀಡಿದ್ದ ಸಂದೀಪ ಬಿ ರೆಡ್ಡಿಯವರು ಶುದ್ಧ ಕುಡಿಯುವ ನೀರಿನ ಘಟಕ ಕೊಡಿಸುವುದಾಗಿ ಹೇಳಿದ್ದರು. ಅದೇ ರೀತಿ ಈಗ ಇಂದು ಆಧುನಿಕ ಗುಣಮಟ್ಟದ ನೀರಿನ ಶುದ್ಧೀಕರಣ ಘಟಕವನ್ನು ಅಳವಡಿಸಿ ಶಾಲೆಯ ಬಳಕೆಗೆ ಕೊಟ್ಟಿದ್ದು, ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಧನ್ಯವಾದಗಳನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂದರ್ಶರೆಡ್ಡಿ, ಮಂಜುನಾಥ್, ಹರೀಶ್, ಇನಮಿಂಚೇನಹಳ್ಳಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.