ದೇವನಹಳ್ಳಿ: ಪಟ್ಟಣದಲ್ಲಿರುವ ಟಿಪ್ಪು ಸುಲ್ತಾನ್ ಪ್ರತಿಮೆಗೆ ರೈತ ನಾಯಕ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಅವರುಗಳು ಪುಷ್ಪ ನಮನ ಸಲ್ಲಿಸಿದರು. ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ 1777 ಎಕರೆ ಕೃಷಿ ಭೂಮಿ ಸ್ವಾಧೀನ ಮಾಡಿ ಕೊಳ್ಳಲು ನೋಟೀಸ್ ಹೊರಡಿಸಿರುವ ಕೆಐಎಡಿಬಿ ಕ್ರಮವನ್ನು ಖಂಡಿಸಿ, ಯಾವುದೇ ಕಾರಣಕ್ಕೂ ನಮ್ಮ ಭೂಮಿ ಬಿಡುವುದಿಲ್ಲ ಎಂಬ ಘೋಷಣೆಯೊಂದಿಗೆ ರೈತರು ಕಳೆದ 520 ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮುಂದಿನ ಹೋರಾಟ ರೂಪುರೇಷೆಗಳ ಬಗ್ಗೆ ಚರ್ಚಿಸಲು ಬುಧವಾರ ದೇವನಹಳ್ಳಿಗೆ ಬಂದಿಳಿದ ರಾಕೇಶ್ ಟಿಕಾಯತ್ ಅವರು ಟಿಪ್ಪು ಸುಲ್ತಾನ್ ಪ್ರತಿಮೆಗೆ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ನಾಯಕರಾದ ಚುಕ್ಕಿ ನಂಜುಂಡಸ್ವಾಮಿ, ಕೆವೈ ಗುರುಶಾಂತ್, ಪ್ರಭಾಬೆಳವಂಗಲ, ದಲಿತ ನಾಯಕರಾದ ಕಾರಹಳ್ಳಿ ಶ್ರೀನಿವಾಸ್, ರೈತ ಮುಖಂಡರಾದ ಜಿಜಿ.ಹಳ್ಳಿ ನಾರಾಯಣಸ್ವಾಮಿ, ಈರಣ್ಣ, ವೆಂಕಟೇಶಪ್ಪ, ತಿಮ್ಮರಾಯಪ್ಪ, ನರಸಪ್ಪ ಸೇರಿದಂತೆ ರೈತ ಸಂಘಟನೆಗಳ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.

