ಶುದ್ಧ ಕುಡಿಯುವ ನೀರಿನ ಘಟಕಗಳ ಮಾಲೀಕರು ಎಚ್ಚರಿಕೆ ವಹಿಸಲಿ: ಕೆಜಿಎಫ್: ಮಲೀನಗೊಂಡ ನೀರು ಸೇವಿಸಿದರೆ ಅತಿಸಾರ, ಡೆಂಗ್ಯೂ, ಟೇಪ್ಹಾಯ್ಡ್ ಚಿಕನ್ ಗುನ್ಯಾ, ದಂತಹ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುವುದರಿಂದ. ಕುಡಿಯುವ ನೀರಿನ ಘಟಕಗಳ ಮಾಲೀಕರು ಎಚ್ಚರಿಕೆ ವಹಿಸಬೇಕು ಎಂದು ತಹಶೀಲ್ದಾರ್ ಬಿ.ನಾಗವೇಣಿ ತಿಳಿಸಿದರು. ಕೆಜಿಎಫ್ ತಾಲೂಕ್ ಆಡಳಿತ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅನಧಿಕೃತವಾಗಿ ಕುಡಿಯುವ ನೀರಿನ ಮಾರಾಟ. ಕೆರೆ ಪಕ್ಕದಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳನ್ನು ಕೊರೆಸುವುದು, ಚರಂಡಿಗಳ ಪಕ್ಕದಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಿ ನೀರು ಪೂರೈಕೆ ಮಾಡುವವರ ಮೇಲೆ ಕ್ರಮ ಜರಗಿಸಲಾಗುವುದು ಎಂದರು. ಸಾರ್ವಜನಿಕರಿಗೆ ಕುಡಿಯುವ ನೀರು ಮಾರಾಟ ಮಾಡುವವರು ಆ ನೀರು ಕುಡಿಯಲು ಯೋಗ್ಯ ಇದೆಯೇ ಎಂಬುದನ್ನು ಪರೀಕ್ಷೆ ಮಾಡಿಸಿಕೊಳ್ಳಿ, ಯೋಗ್ಯವಲ್ಲದ ನೀರನ್ನು ಕ್ಲೋರಿ ನೀ ಕರೆಸಿ ಮತ್ತು ಕುಡಿಯಲು ಯೋಗ್ಯವಾಗಿದೆ ಎಂದು ಖಚಿತಪಡಿಸಿಕೊಂಡ ಬಳಿಕವಷ್ಟೇ ಸರೋಜನಿಕರಿಗೆ ಮಾರಾಟ ಮಾಡಬೇಕು . ಒಂದು ವೇಳೆ ಕುಡಿಯುವ ನೀರಿನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರಿದ್ದಲ್ಲಿ ಅಂತಹ ನೀರಿನ ಘಟಕಗಳ ಮಾಲೀಕರ ಮೇಲೆ ಕ್ರಿಮಿನಲ್ ಮೊ ಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ನಗರದಲ್ಲಿ ಕುಡಿಯುವ ನೀರು ಮಾರಾಟ ಮಾಡುವವರು ತಿಂಗಳಗೊಮ್ಮೆ ನೀರಿನ ಪರೀಕ್ಷೆ ಮಾಡಿಸಿಕೊಳ್ಳಿ ಶೇಕಡ 2.3ರಷ್ಟು ಮಾದರಿಗಳಲ್ಲಿ ಎಸ್ ಎಸ್ ಪಿ ಪಿ ಕಂಡು ಬಂದರೆ ಕುಡಿಯಲು ನೀರು ಯೋಗ್ಯವಾಗಿರುವುದಿಲ್ಲ. ಇಂತಹ ನೀರನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಯೋಗ್ಯವಾಗಿರುವುದಿಲ್ಲ ಆದ್ದರಿಂದ ಅಂತಹ ನೀರನ್ನು ಮಾರಾಟ ಮಾಡಬೇಡಿ ಎಂದು ಹೇಳಿದರು. ನಗರದ ಹಲವು ಬಡಾವಣೆಗಳಲ್ಲಿ ಖಾಸಗಿ ವ್ಯಕ್ತಿಗಳು ನಗರಸಭೆ ಅಥವಾ ಜಲ ಮಂಡಳಿಯಿಂದ ಯಾವುದೇ ಪರವಾನಗಿ ಪಡೆಯದೆ ಆರ್ ಓ ಪ್ಲಾಂಟ್ಗಳನ್ನು ಸ್ಥಾಪಿಸಿಕೊಂಡು ಕುಡಿಯುವ ನೀರನ್ನು ಮಾರಾಟ ಮಾಡುತ್ತಿದ್ದು, ಅಂತಹ ಆರ್ ಓ ಘಟಕಗಳ ವಿರುದ್ಧ ಸಂಬಂಧ ಪಟ್ಟ ಇಲಾಖೆಯವರು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸಾರ್ವಜನಿಕರಿಂದ ದೂರುಗಳು ಬಂದಿವೆ ಎಂದರು.

Sep 7, 2023

Leave a Reply

Your email address will not be published. Required fields are marked *