ಧಾರವಾಡ:- ಬೆಳಗಾವಿ ನಗರದ ಮರಾಠಾ ಲೈಟ್ ಇನಫೆಂಟ್ರಿ, ಶಿವಾಜಿ ಸ್ಟೇಡಿಯಂನಲಿ,್ಲ ನವೆಂಬರ 26 ರಂದು ಬೆಳಿಗ್ಗೆ 8-30 ರಿಂದ ಸಂಜೆ 4 ಗಂಟೆವರೆಗೆ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರುಗಳ ಕುಂದು ಕೊರತೆ ನಿವಾರಣಾ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಮಾಜಿ ಸೈನಿಕರ ನಿವೃತ್ತಿ ಪಿಂಚಣಿ, ಕುಟುಂಬ ಪಿಂಚಣಿ, ವೈದ್ಯಕೀಯ ಶಿಬಿರ, ಇಸಿಎಚ್ಎಸ್, ಬ್ಯಾಂಕ್, ಆಧಾರ ಕಾರ್ಡ್, ಕ್ಯಾಂಟಿನ್ ಕಾರ್ಡ್ ಸಂಬಂಧಿಸಿದ ಸಮಸ್ಯೆಗಳ ಕುರಿತು ಪರಿಹಾರ ಕ್ರಮ ಕೈಗೊಳ್ಳಲಾಗುವುದು.
ಶಿಬಿರದಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರುಗಳು ಸದರಿ ಶಿಬಿರದಲ್ಲಿ ಪಾಲ್ಗೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಪಾಲ್ಗೊಳ್ಳುವ ಫಲಾನುಭವಿಗಳು ತಮ್ಮ ಸಮಸ್ಯೆ ಕುರಿತು ಹೆಸರು ನೊಂದಾಯಿಸಿ, ನೋಂದಣಿ ಸಂಖ್ಯೆಯನ್ನು ಪಡೆಯಬೇಕು. ನೊಂದಣಿ ಮಾಡಲು ಬಯಸುವವರು ತಮ್ಮ ಕುಂದು ಕೊರತೆಗಳ ಅರ್ಜಿ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಾಟ್ಸ್ಪ್ ಮೂಲಕ ಮೊಬೈಲ್ ಸಂಖ್ಯೆ 8618368315 ಗೆ ಕಳುಹಿಸಬೇಕು.
ವಾಟ್ಸ್ಪ್ಗೆ ಅಪ್ಲೋಡ್ ಮಾಡಿದ ವಿವರವನ್ನು ಕಾರ್ಯಾಲಯದ ದೂರವಾಣಿ ಸಂಖ್ಯೆ 0836-2440176 ಗೆ ಮುಂಚಿತವಾಗಿ ತಿಳಿಸಬೇಕೆಂದು ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
