ಧಾರವಾಡ:- ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ವ್ಯಕ್ತಿತ್ವವನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ನಗರದ ಜೆ.ಎಸ್.ಎಸ್. ಕಾಲೇಜಿನ ಸನ್ನಿಧಿ ಕಲಾಕ್ಷೇತ್ರದ ಸಭಾಭವನದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಶಿಕ್ಷಕರ ದಿನೋತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಪ್ರತಿಯೊಬ್ಬ ಯಶಸ್ವಿ ಸಾಧಕನ ಹಿಂದೆ ಒಬ್ಬ ಶಿಕ್ಷಕರು ಇರುತ್ತಾರೆ. ಸಮಾಜವನ್ನು ಬದಲಾವಣೆ ಮಾಡಬೇಕಾದರೆ ಶಿಕ್ಷಕರ ಪಾತ್ರ ಬಹು ಮುಖ್ಯ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳು ಚಿಂತನೆಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳೋಣ. ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದರೆ ಸಂವಿಧಾನ ಅತ್ಯವಶ್ಯಕವಾಗಿದೆ ಅದನ್ನು ಅರಿತು ನಾವೆಲ್ಲರೂ ಇಂದು ನಡೆಯಬೇಕಾಗಿದೆ.
ಸಮಾಜದಲ್ಲಿನ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಲು ಮಕ್ಕಳಿಗೆ ತಿಳುವಳಿಕೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರು ನೀಡಬೇಕು. ಶಿಕ್ಷಕ ವೃತ್ತಿಗೆ ಸೇರಿ, ಸೇವೆ ಸಲ್ಲಿಸುತ್ತಿರುವ ನೀವು ಸುದೈವಿಗಳು, ಆದ್ದರಿಂದ ಎಲ್ಲ ಶಿಕ್ಷಕರು ಗುಣಮಟ್ಟದ ಮತ್ತು ನೈತಿಕ ಶಿಕ್ಷಣಕ್ಕೆ ಮತ್ತು ನೂತನ ಕೌಶಲ್ಯಗಳಿಗೆ ಆದ್ಯತೆ ನೀಡಿ ವಿದ್ಯಾರ್ಥಿಗಳಿಗೆ ಕಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಮುರಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಉಪಸ್ಥಿತರಿದ್ದು, ಆಶೀರ್ವಚನ ನೀಡಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಫ್.ಚುಳಕಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಯಟ್ ನಿವೃತ್ತ ಪ್ರಾಚಾರ್ಯ ಎನ್.ಕೆ. ಸಾಹುಕಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಎಸ್.ಎಂ. ಹುಡೆದಮನಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಫ್.ವಿ.ಮಂಜಣ್ಣನವರ, ಪ್ರೌಢ ಶಾಲೆ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಜಿ.ಬಶೆಟ್ಟಿ ಹಾಗೂ ಇಲಾಖೆಯ ವಿಷಯ ಪರಿವೀಕ್ಷಕರು, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯ ಸಹಾಯಕ ಯೋಜನಾ ಉಪ ಸಮನ್ವಯ ಅಧಿಕಾರಿ ಡಾ.ಪ್ರಕಾಶ ಬುತಾಳಿ ನಿರೂಪಿಸಿದರು, ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಜಿ.ಎನ್. ಮಠಪತಿ ವಂದಿಸಿದರು. ಆರ್.ಎನ್.ಶೆಟ್ಟಿ ಪ್ರೌಢ ಶಾಲೆಯ ಸಂಗೀತ ಶಿಕ್ಷಕರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವಿವರ ಹೀಗಿದೆ.
ಪ್ರಾಥಮಿಕ ವಿಭಾಗ- ಧಾರವಾಡ ಶಹರ ಹರಿಜನಕೇರಿಯ ವಿಜಯಾ ಲಾಡ ಎಲ್.ಪಿ.ಎಸ್, ಧಾರವಾಡ ಗ್ರಾಮೀಣ ದೂಪಾರ್ತಿವಾಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿವಾನಂದ ಎಸ್.ಕೆಲಗೇರಿ, ಹುಬ್ಬಳ್ಳಿ ಶಹರ ಹನುಮಂತನಗರ ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಸರೋಜಾ ಪಾಟೀಲ್, ನವಲಗುಂದ ತಾಲೂಕಿನ ಎಲ್.ಪಿ,ಎಸ್ ನಂ.8 ಅಣ್ಣೆಗೇರಿಯ ವಿ.ಎಫ್. ಮಡಿವಾಳರ, ಕಲಘಟಗಿ ತಾಲೂಕಿನ ಕಲಕುಂಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಸಪ್ಪ ಯಲ್ಲಪ್ಪ ಹೊಸಮನಿ, ಹುಬ್ಬಳ್ಳಿ ಗ್ರಾಮೀಣ ವರೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಾರಾಯಣ ರಾಮಕೃಷ್ಣ ಆರೇರ, ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶೋಭಾ ವೀರಭದ್ರಪ್ಪ ಬಡಿಗೇರ ಧಾರವಾಡ ಶಹರ ನವಲೂರ ಛಾವಣಿ ಹೆಚ್.ಪಿ.ಎಸ್ ಸಂತೋಷ ಕರಮಳ್ಳವರ, ಹುಬ್ಬಳ್ಳಿ ಶಹರ ಬಿಡನಾಳದ ಕರ್ನಾಟಕ ಪಬ್ಲಿಕ ಸ್ಕೂಲ್ ಎಸ್.ಎಸ್. ಕುಲಕರ್ಣಿ, ಹುಬ್ಬಳ್ಳಿ ಗ್ರಾಮೀಣ ಶೆರೇವಾಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೋಭಾ ಜೋಸೆಫ್ ಕೊಂಗನವರ, ಕಲಘಟಗಿ ತಾಲೂಕಿನ ಲಿಂಗನಕೊಪ್ಪದ ಎಚ್.ಪಿ.ಎಸ್. ಕೆ.ಡಿ. ಹವಳಿ, ಕುಂದಗೋಳ ತಾಲೂಕಿನ ಹಿರೇನರ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಹಾದೇವಪ್ಪ ಪಿ ಬೆಳಗಲಿ, ನವಲಗುಂದ ತಾಲೂಕಿನ ಹೆಚ್.ಪಿ.ಎಸ್ ಆರೇಕುರಹಟ್ಟಿಯ ವೆಂಕರಡ್ಡಿ ರಾಯರಡ್ಡಿ ವಾಸನದ, ಧಾರವಾಡ ಗ್ರಾಮೀಣ ತಡಕೋಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೋಭಾ ಶಿರಯಣ್ಣವರ
ಪ್ರೌಢಶಾಲಾ ವಿಭಾಗ -ಧಾರವಾಡ ಗ್ರಾಮೀಣ ಯರಿಕೊಪ್ಪ ಸರಕಾರಿ ಪ್ರೌಢ ಶಾಲೆ ಪ್ರವೀಣಾ ಎಸ್.ಧಾರವಾಡ ಶಹರದ ನವಲೂರ ಸರಕಾರಿ ಪ್ರೌಢ ಶಾಲೆಯ ಸುಜಾತಾ ಗಿರಾಗತಿ, ಹುಬ್ಬಳ್ಳಿ ಶಹರ ಆನಂದನಗರದ ಸರಕಾರಿ ಪ್ರೌಢ ಶಾಲೆಯ ಶಾಂತಾ ಉಮತಾರ, ಹುಬ್ಬಳ್ಳಿ ಗ್ರಾಮೀಣ ಕುರಡಿಕೇರಿ , ಸರಕಾರಿ ಪ್ರೌಢ ಶಾಲೆಯ ರಾಜೇಶ್ರೀ ಬಿಡಿ, ಕಲಘಟಗಿ ತಾಲೂಕಿನ ಬಗಡಗೇರಿ ಸರ್ಕಾರಿ ಪ್ರೌಢ ಶಾಲೆಯ ಅಶೋಕ ಎಂ. ಶಿರಗುಪ್ಪಿ, ಕುಂದಗೋಳ ತಾಲೂಕಿನ ಕುಂಕೂರ (ಟಿ.ಜಿ.ಟಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಗದೀಶ ನಾಗಪ್ಪ ಸಲವಣ್ಣವರ ನವಲಗುಂದ ತಾಲೂಕಿನ ಜಿ.ಯು.ಎಚ್.ಎಸ್ ಅಣ್ಣಿಗೇರಿ ಬಿ.ಎಂ ಮುಜಾವರ
ಧಾರವಾಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
