Sep 8, 2023

ಬ್ರ್ಯಾಂಡ್ ಬೆಂಗಳೂರು ಸಮಾವೇಶವನ್ನು ಆಯೋಜಿಸುವ ಸಂಬಂಧ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆ:

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೆ ಸಲ್ಲಿಸಲು ಬ್ರ್ಯಾಂಡ್ ಬೆಂಗಳೂರು ಸಮಾವೇಶ(Conclave) ಸಮಿತಿಯ ಅಧ್ಯಕ್ಷರು ಹಾಗೂ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ರ್ಯಾಂಡ್ ಬೆಂಗಳೂರಿನ ಸಮಾವೇಶವನ್ನು ನಡೆಸುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ರ್ಯಾಂಡ್ ಬೆಂಗಳೂರು ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸರ್ವಪಕ್ಷಗಳ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಲಾಗಿದೆ. ಅಲ್ಲದೆ ವಿವಿಧ ಕ್ಷೇತ್ರಗಳ ಗಣ್ಯರು, ಸ್ಥಳೀಯ ಎನ್.ಜಿ.ಒ/ಆರ್.ಡಬ್ಲ್ಯೂ.ಎ ಗಳ ಜೊತೆ ಸಭೆ ನಡೆಸಿ ಸಲಹೆ/ಅಭಿಪ್ರಾಯಗಳನ್ನು ಪಡೆಯಲಾಗಿದೆ. ಇದಲ್ಲದೆ ಸಾರ್ವಜನಿಕರಿಂದ ವೆಬ್ ಪೋರ್ಟಲ್ ಮೂಲಕ ಬೆಂಗಳೂರಿನ ಅಭಿವೃದ್ಧಿಗಾಗಿ 7 ವಿಷಯಗಳಾದ “ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು” ಕುರಿತು 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯ/ಅನಿಸಿಕೆ/ಸಲಹೆಗಳು ಸ್ವೀಕರಿಸಲಾಗಿದ್ದು, 8ನೇ ವಿಷಯವಾದ “ಶೈಕ್ಷಣಿಕ ಬೆಂಗಳೂರು” ವಿಷಯವಾಗಿ ಸಭೆಯನ್ನು ನಡೆಸಲಾಗಿರುತ್ತದೆ. ಅದರಂತೆ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೆ ಸಲ್ಲಿಸಲು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ 8 ವಿಷಯಗಳ ಕುರಿತಾಗಿ ಸಿದ್ದಪಡಿಸಿರುವ ವರದಿಗಳ ಆಧಾರದ ಮೇಲೆ 8 ಪ್ರöತ್ಯೇಕ ಪ್ರ್ಯಾತ್ಯಕ್ಷಿಕೆಗಳನ್ನು ಸಿದ್ದಪಡಿಸಿಕೊಳ್ಳಬೇಕು ಹಾಗೂ ಎಲ್ಲಾ 8 ವಿಷಯಗಳನ್ನೊಳಗೊಂಡ ಸಂಕ್ಷಿಪ್ತ ಪ್ರಾತ್ಯಕ್ಷಿಕೆಯನ್ನು ಸಿದ್ದಪಡಿಸಿಕೊಳ್ಳಬೇಕು. ಸಾರ್ವಜನಿಕರಿಂದ ಸ್ವೀಕೃತಿಗೊಂಡಿರುವ ಅಭಿಪ್ರಾಯಗಳ ಬಗ್ಗೆ ಹಾಗೂ ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸುವ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಮಾವೇಶ ಸಭೆಯನ್ನು ಏರ್ಪಡಿಸುವ ಸಂಬಂಧ ಅಗತ್ಯವಿರುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಆಡಳಿತ ವಿಭಾಗದ ಉಪ ಆಯುಕ್ತರಿಗೆ ಸೂಚನೆ ನೀಡಲಾಯಿತು.

ಬ್ರ್ಯಾಂಡ್ ಬೆಂಗಳೂರು ಕಲ್ಪನೆಯ ಬಗ್ಗೆ 8 ಸಮಿತಿಗಳು ಸಿದ್ದಪಡಿಸುತ್ತಿರುವ ವರದಿಗಳ ಆಧಾರದ ಮೇಲೆ ಮುಂದಿನ ಕಾರ್ಯಯೋಜನೆಯನ್ನು ಸೂಚಿಸುವಂತೆ ಹಾಗೂ ಅಗತ್ಯ ಆಡಳಿತಾತ್ಮಕ ಸಿದ್ದತೆಗಳ ಬಗ್ಗೆ ಸಲಹೆ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಸಮಾವೇಶದ ಸಮಿತಿಯ ಸದಸ್ಯರಾದ ಡಾ. ತ್ರಿಲೋಕ್ ಚಂದ್ರ, ಡಾ. ಹರೀಶ್ ಕುಮಾರ್, ಆಡಳಿತ ವಿಭಾಗದ ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, 8 ವಿಷಯಗಳ ನೋಡಲ್ ಅಧಿಕಾರಿಗಳು, ಸಮನ್ವಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿರುವ ಕಛೇರಿ ಆದೇಶ ಪ್ರತಿಯನ್ನು ಲಗತ್ತಿಸಿದೆ.

Leave a Reply

Your email address will not be published. Required fields are marked *