Post navigation ಬಳ್ಳಾರಿ ಸೆ,10ಜನರ ತೆರಿಗೆಯಿಂದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ನಡೆಸಿ- ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ಕಟ್ಟಡ, ಶೌಚಾಲಯ, ಶಿಕ್ಷಕರು ಸೇರಿದಂತೆ ಕರ್ನಾಟಕದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಕುಂದು ಕೊರತೆಗಳನ್ನು ನಿವಾರಿಸಲು ಕರ್ನಾಟಕ ರಾಜ್ಯ ಸರ್ಕಾರವು ಕಾರ್ಪೊರೇಟ್ ಕಂಪನಿಗಳಿಗೆ ಮನವಿ ಮಾಡಿರುವುದು ಮತ್ತು ಕೆಲವರು ಇದಕ್ಕೆ ಪ್ರತಿಕ್ರಿಯಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಬೆಳವಣಿಗೆಯನ್ನು ರಾಜ್ಯದ ಶಿಕ್ಷಣ ಪ್ರೇಮಿ ಜನತೆಯು ಕಳವಳದಿಂದ ಗಮನಿಸುತ್ತಿದ್ದಾರೆ.ಖ್ಯಾತ ಉದ್ಯಮಪತಿಯೊಬ್ಬರ ಮುಂದೆ ಸರ್ಕಾರದ ಉನ್ನತ ಶಿಕ್ಷಣ ಸಚಿವರು ಮಂಡಿಸಿರುವಂತೆ, ಉನ್ನತ ಶಿಕ್ಷಣ ಕ್ಷೇತ್ರಕ್ಕೆ 3,256 ಕೋಟಿ, ಸರ್ಕಾರಿ ಪದವಿ ಕಾಲೇಜುಗಳಿಗೆ 1,997 ಕೋಟಿ, ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಿಗೆ 852 ಕೋಟಿ, ಕೌಶಲಾಭಿವೃದ್ಧಿ ಪ್ರಯೋಗಾಲಯಗಳಿಗೆ 386 ಕೋಟಿ, ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿಗೆ 14 ಕೋಟಿ ಮತ್ತು ಡಾ.ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ಗೆ 6 ಕೋಟಿ ನೆರವಿನ ಬೇಡಿಕೆಯನ್ನು ಇಟ್ಟಿದ್ದಾರೆ.ಒಂದು ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಶಿಕ್ಷಣವನ್ನು ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಜನರಿಂದ ಹೇರಳವಾಗಿ ಸಂಗ್ರಹಿಸಲ್ಪಡುವ ತೆರಿಗೆ ದುಡ್ಡನ್ನು ಆದ್ಯತೆಯ ಮೇರೆಗೆ ಶಿಕ್ಷಣಕ್ಕೆ ವಿನಿಯೋಗಿಸಬೇಕು. ಶಾಲಾ ಕಟ್ಟಡ, ಶಿಕ್ಷಕರು ಸೇರಿದಂತೆ ಇತ್ಯಾದಿ ಮೂಲಸೌಕರ್ಯಗಳ ಪೂರೈಕೆ ಸಂಪೂರ್ಣವಾಗಿ ಸರ್ಕಾರದ ಜವಾಬ್ದಾರಿಯೇ ಆಗಿರಬೇಕು. ಕಾರ್ಪೊರೇಟ್ ಕಂಪನಿಗಳು ಸಹಾಯ ಒದಗಿಸುವರು ಎಂಬ ಪರದೆಯ ಹಿಂದೆ ಸರ್ಕಾರವು ಚಾಕಚಕ್ಯತೆಯಿಂದ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಇರಾದೆ ಇರಬಹುದೇ ಎಂಬುದು ವಿದ್ಯಾರ್ಥಿ ಸಮುದಾಯವನ್ನು ಕಾಡುತ್ತಿರುವ ಪ್ರಶ್ನೆ. ಇಂದು ಖಾಸಗಿ ಕಂಪನಿಗಳು ಹೇರಳವಾಗಿ ಆರ್ಥಿಕ ನೆರವು ನೀಡಬಹುದು. ಆದರೆ ಕ್ರಮೇಣ ಈ ನೆರವಿನ ಹೆಸರಲ್ಲಿ ಅವರ ಹಕ್ಕು ಸ್ಥಾಪನೆಯಾಗಿ, ಸರ್ಕಾರಿ ಶಾಲಾ ಕಾಲೇಜುಗಳು ಖಾಸಗಿಯವರ ಪಾಲಾಗಬಹುದು ಎಂಬುದು ಶಿಕ್ಷಣಪ್ರೇಮಿ ಜನರ ಆತಂಕವಾಗಿದೆ. ಹೊಸಕೋಟೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಸನ್ಮಾನ ಹೊಸಕೋಟೆ : ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಮಾನ್ಯ ಶ್ರೀ ಸತೀಶ್ ಜಾರಕಿಹೊಳಿಯವರು ಪ್ರಗತಿಯಲ್ಲಿರುವ ದಾಬಸ್ ಪೇಟೆ- ಚೆನ್ನೈ ನ್ಯಾಷನಲ್ ಹೈವೇ ಕಾಮಗಾರಿಯನ್ನು ಪರಿಶೀಲಿಸಲು ಹೊಸಕೋಟೆಗೆ ಆಗಮಿಸಿದ ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶರತ್ ಬಚ್ಚೇಗೌಡ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಚಕ್ರವರ್ತಿ, ಆರ್ ಟಿ ಸಿ ಗೋವಿಂದ್, ವಿಜಯ್ ಕುಮಾರ್, ಸಹದೇವ್, ಮಧು ,ಪ್ರಶಾಂತ್,ಪುನೀತ್, ತ್ರಿವೇಣಿ, ವಿಜಯಕುಮಾರ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.