Post navigation ಚಿಕ್ಕಬಳ್ಳಾಪುರ: ಭಾರತೀಯ ಜನತಾ ಪಾರ್ಟಿಯುವ ಮೋರ್ಚಾ ಚಿಕ್ಕಬಳ್ಳಾಪುರ ಜಿಲ್ಲೆ ವತಿಯಿಂದ ಲಯನ್ಸ್ ರಕ್ತನಿಧಿ ಯಲಹಂಕ ಇವರ ಸಹಯೋಗದೊಂದಿಗೆ ಇಂದು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ಯೋಧರ ನೆನಪಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ದಿಬ್ಬೂರಹಳ್ಲಿ ರಲ್ಲಿ ರಕ್ತದಾನ ಶಿಬಿರಹಮ್ಮಿಕೊಳ್ಳಲಾಗಿತ್ತು.ಮಾಜಿ ಶಾಸಕರಾದ ರಾಜಣ್ಣ,ಬಿಜೆಪಿ ಮುಖಂಡರಾದ ಸೀಕಲ್ ರಾಮಚಂದ್ರೇಗೌಡ,ಆನಂದ್ ಗೌಡ,ನರ್ಮದಾರೆಡ್ಡಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜೀತ್ ಎಲ್ಲಾ ದಾನಗಳಲ್ಲಿ ಅತಿ ಶ್ರೇಷ್ಠವಾದ ದಾನ ರಕ್ತದಾನ ಹಾಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಿ ಜೀವ ಉಳಿಸುವ ಕೆಲಸಕ್ಕೆ ಮುಂದಾಗಬೇಕು,ನಾವು ನೀಡುವ ರಕ್ತ ಇನ್ನೊಬ್ಬರ ಜೀವ ಉಳಿಸೂ ಮಹಾ ಕಾರ್ಯಕ್ಕೆ ಉಪಯೋಗವಾಗುತ್ತದೆ ಹಾಗಾಗಿ ಎಲ್ಲರೂ ರಕ್ತದಾನ ಮಾಡಬೇಕು ಎಂದ ಅವರು ಸತತವಾಗಿ ಹತ್ತು ವರ್ಷಗಳಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು ಪ್ರತಿ ವರ್ಷ ಹೆಚ್ಚು ಯುನಿಟ್ ರಕ್ತ ಸಂಗ್ರಹ ಮಾಡಲಾಗುತ್ತಿದೆ ರಕ್ತದಾನದಿಂದ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಬರುವುದಿಲ್ಲ ದೇಹಕ್ಕೆ ಹೊಸ ಉತ್ಸಾಹ ಹುಮ್ಮಸ್ಸು ದೊರೆಯುತ್ತದೆ ರಕ್ತಾದಾನ ನಂತರ 24 ಗಂಟೆಯೊಳಗೆ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಇನ್ನು ಸಣ್ಣ ಸಣ್ಣ ಕಾಯಿಲೆಗಳಿಂದ ಮುಕ್ತವಾಗಬಹುದಾಗಿದೆ ಎಂದರು. BAYALU SIMHA News paper. 9845085793