ಶಿಡ್ಲಘಟ್ಟ: ತಾಲ್ಲೂಕಿನ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಚ್.ಕ್ರಾಸ್ ಬಳಿ ಇರುವ ಪುರಾಣ ಪ್ರಸಿದ್ಧ ಶ್ರೀ ಸೀತಾ ರಾಮಾಂಜಿನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವನ್ನು ಬುಧವಾರದಂದು ನಡೆಸಲಾಯಿತು. 2.72 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ.
ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಜಾವಿದ್ ನಜೀಮಾ ಖಾನಮ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು. 2.72,340 ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುತ್ತಿದ್ದ ದೇವಾಲಯ ಆವರಣದ ಸುತ್ತಲೂ ಸಿಸಿಟಿವಿ ಹಾಗೂ ವಿಡಿಯೋ ಮಾಡಲಾಗಿತ್ತು.
ಬುಧವಾರ ಬೆಳಗ್ಗೆಯಿಂದ ಆರಂಭವಾದ ಕಾಣಿಕೆ ಎಣಿಕೆ ಸಂಜೆಯವರೆಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿಯವರಿಂದ ನಡೆಯಿತು. ಭಕ್ತರ ವೃನಮನದಲ್ಲಿ ಮನೆ ಮಾಡಿರುವ ಶ್ರೀ ಸೀತಾ ರಾಮಾಂಜಿನೇಯ ಸ್ವಾಮಿಯವರು ತಮ್ಮ ಇಷ್ಟಾರ್ಥ ಈಡೇರಿಸುವಂತೆ ಪ್ರಾರ್ಥಿಸಿ, ಭಕ್ತಿಯಿಂದ ಬೇಡಿಕೊಂಡರೆ ಇಷ್ಟಾರ್ಥ ಈಡೇರುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಅಲ್ಲದೇ ಇತ್ತೀಚಿಗೆ ಶ್ರಾವಣ ಮಾಸದ ದಿನಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಜಾವಿದ್ ನಜೀಮಾ ಖಾನಮ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ, ದೇವಸ್ಥಾನದ ಧರ್ಮದರ್ಶಿಗಳು, ಅರ್ಚಕರು, ತಾಲ್ಲೂಕು ಪಂಚಾಯಿತಿ ಅಧಿಕಾರಿಯವರು ಮತ್ತು ಸಿಬ್ಬಂದಿ ವರ್ಗದವರು ಸಹ ಹಾಜರಿದ್ದರು.


