ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಹೋಬಳಿ ಪೆರೇಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರವರು ಶಾಲಾ ಮಕ್ಕಳಿಗೆ ಉಚಿತವಾಗಿ ಗಣೇಶ ಹಬ್ಬಕ್ಕೆ ಬಣ್ಣದ ಬಟ್ಟೆಗಳನ್ನು ನೀಡುತ್ತಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಯುವ ಮುಖಂಡ ಎಸ್.ಪಿ. ಶ್ರೀನಿವಾಸ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಪ್ರದೀಪ್ ಈಶ್ವರ್ ರವರು ಚುನಾವಣೆಗೂ ಮುಂಚೆ ಕೊಟ್ಟ ಮಾತಿನಂತೆ ಕ್ಷೇತ್ರದ ಸುಮಾರು 20,000 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಬಣ್ಣದ ಬಟ್ಟೆ ನೀಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಇದರಿಂದ ಬಡ ಮಕ್ಕಳಿಗೆ ಹಬ್ಬದಲ್ಲಿ ಹೊಸ ಬಟ್ಟೆ ಇಲ್ಲ ಎಂಬ ಕೊರಗು ದೂರವಾಗಲಿದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಬಡ ಕುಟುಂಬಕ್ಕೂ ಯಾವುದಾದರೂ ಒಂದು ರೀತಿಯಲ್ಲಿ ಸಹಾಯ ಮಾಡಿ ಆಸರೆ
ಯಾಗಬೇಕೆಂಬುದು ಪ್ರದೀಪ್ ಈಶ್ವರ್ ಅವರ ಕನಸಾಗಿದೆ ಇಡೀ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಉನ್ನತೀಕರಣ ಮಾಡಿ ಅಭಿವೃದ್ಧಿಪಡಿಸಿ ಉತ್ತಮ ಶಿಕ್ಷಣ ಕೊಡಿಸಲು ಶಾಸಕರು ಈ ಶ್ರಮ ಪಡುತ್ತಿದ್ದಾರೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಮಕ್ಕಳು ಅತಿ ಹೆಚ್ಚು ಅಂಕಗಳನ್ನು ಪಡೆದು ಇಡೀ ರಾಜ್ಯಕ್ಕೆ ಚಿಕ್ಕಬಳ್ಳಾಪುರ ಕ್ಷೇತ್ರ ಫಲಿತಾಂಶದಲ್ಲಿ ಉತ್ತಮ
ವಾಗಿರಬೇಕು ಎಂದು ಶಾಸಕರೇ ಖುದ್ದಾಗಿ ಪ್ರತಿ ತಿಂಗಳು ಪ್ರಶ್ನೆ ಪತ್ರಿಕೆ ತಯಾರು ಮಾಡಿಸಿ ಪ್ರತಿ ತಿಂಗಳು ಟೆಸ್ಟ್ ಗಳನ್ನು ಮಾಡಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ತಯಾರು ಮಾಡುತ್ತಿದ್ದಾರೆ. ಈ ಹಿಂದೆ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ನೀಡಿದ್ದಾರೆ. ಈ ಎಲ್ಲಾ ಶೈಕ್ಷಣಿಕ ಪ್ರಗತಿಗೆ ಶಾಸಕರ ಸ್ವಂತ ದುಡಿಮೆಯಿಂದ ದುಡಿದ ಹಣವನ್ನು ವ್ಯಯ ಮಾಡುತ್ತಿರುವುದು ಹೆಮ್ಮೆಯ ವಿಷಯ ಮುಂದಿನ ದಿನಗಳಲ್ಲಿ ಇನ್ನೂ ಹತ್ತಾರು ಶೈಕ್ಷಣಿಕ ಕಾರ್ಯಕ್ರಮಗಳನ್ನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ದಾರಿದೀಪ ಆಗಲಿದ್ದಾರೆ ಎಂದು ಯುವ ಮುಖಂಡ ಎಸ್.ಪಿ.ಶ್ರೀನಿವಾಸ್ ಬಣ್ಣಿಸಿದರು.
ಈ ಸಂದರ್ಭದಲ್ಲಿ ಪೆರೇಸಂದ್ರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟಪತಿ, ಮಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲ್, ಗ್ರಾಮ ಪಂಚಾಯತ್ ಸದಸ್ಯ ನಾರಾಯಣಸ್ವಾಮಿ, ಮುಖಂಡರಾದ ತುಮಕುಂಟೆ ಮಂಜುನಾಥ್, ದೇವರಾಜ್, ಬಾಲು ,ಮಂಜುನಾಥ್, ವೆಂಕಟೇಶಪ್ಪ, ಮುನಿಸ್ವಾಮಿ, ಮುನಿಯಪ್ಪ, ಆನಂದ್ ,ಹರೀಶ್, ನಾರಾಯಣಪ್ಪ ,ರಾಮಚಂದ್ರಪ್ಪ, ನಾರಾಯಣಸ್ವಾಮಿ, ಶಶಿಧರ್, ಗಂಗಾಧರ್ ಮತ್ತು ಇತರರು ಹಾಜರಿದ್ದರು.


