ಹುಬ್ಬಳ್ಳಿ :- ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಿದ್ದು, ಪ್ರತಿಭಟನಾಕಾರರನ್ನು ತಕ್ಷಣವೇ ಕಳುಹಿಸಿ, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದೇವೆ ಎಂದು ಪೊಲೀಸ್ ಆಯುಕ್ತರು ರೇಣುಕಾ ಸುಕುಮಾರ ಹೇಳಿದರು.
ಹುಬ್ಬಳ್ಳಿ ಮಹಾನಗರ ಪಾಲಿಕೆಯ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ನ್ಯಾಯಾಲಯದ ತೀರ್ಪಿನ ಅನ್ವಯ ಮುಂದಿನ ಒಂದು ಗಂಟೆಯಲ್ಲಿ ಪಾಲಿಕೆ ಆಯುಕ್ತರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅಲ್ಲಿಯವರೆಗೆ ಎಲ್ಲರೂ ಶಾಂತಿಯುತರಾಗಿ ಎಂದು ಪ್ರತಿಭಟನಾಕಾರರಿಗೆ ತಿಳಿಸಿದ್ದೇನೆ.
ಧಿಡೀರ ರಸ್ತೆ ತಡೆ ನಡೆಸಿದ್ದರೆ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ . ಕಾನೂನು ಎಲ್ಲರಿಗೂ ಒಂದೇ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಎರಡೂ ದಿನದಿಂದ ಪಾಲಿಕೆ ಕಾರ್ಯ ಕಲಾಪಗಳಿಗೆ ಅಡ್ಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು,ಎರಡೂ ದಿನದಿಂದ ಪಾಲಿಕೆಯಿಂದ ಯಾವುದೇ ದೂರು ಬಂದಿಲ್ಲ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದರು.
