ಧಾರವಾಡ:- ಭಾರತೀಯರಿಗೆ ಸಂವಿಧಾನ ಧರ್ಮಗ್ರಂಥವಾಗಿದ್ದು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಸಂವಿಧಾನದ ಮುಖ್ಯ ಪಾತ್ರ ವಹಿಸಿದ್ದು,ಇಂದಿನ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಡಾ.ಡಿ.ಬಿ.ಕರಡೋಣ ತಿಳಿಸಿದರು .

ಧಾರವಾಡ ಕರ್ನಾಟಕ ಕಲಾ ಕಾಲೇಜಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಪ್ರಥಮ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕರ್ನಾಟಕ ಕಲಾ ಕಾಲೇಜಿನ ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗ ಎನ್.ಎಸ್.ಎಸ್ ಘಟಕಗಳ ಸಹಯೋಗದಲ್ಲಿ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಚನವನ್ನು ಬೋಧಿಸಿ ಮಾತನಾಡಿದ ಅವರು ಪ್ರಸ್ತುತ ಸಂವಿಧಾನದ ಆಶಯಗಳಿಗೆ ಬದ್ದವಾಗಿ ನಡೆದುಕೊಳ್ಳಬೇಕಾಗಿದ್ದು, ಸಂವಿಧಾನದಲ್ಲಿ ಭಾರತದ ಪ್ರತಿಯೋಬ್ಬ ನಾಗರಿಕನ ಹಕ್ಕು ಕರ್ತವ್ಯಗಳನ್ನು ವಿವರವಾಗಿ ಹೇಳಲಾಗಿದೆ, ಸಂವಿಧಾನದ ಇಂದಿನ ಯುವ ಸಮಾಜವು ಸಂವಿಧಾನದ ಅಧ್ಯಯನದ ಜೊತೆಗೆ ಸಂವಿಧಾನ ಪೀಠಿಕೆಯನ್ನು ಅರ್ಥೈಸಿಕೊಳ್ಳಬೇಕು ಎಂದರು.

ಕರ್ನಾಟಕ ವಿಶ್ವವಿದ್ಯಾಲಯ ಎನ್.ಎಸ್.ಎಸ್ ಕೋಶದ ಸಂಯೋಜಕ ಡಾ.ಎಂ.ಬಿ.ದಳಪತಿ ಅವರು ಮಾತನಾಡಿ ಭಾರತ ವೈವಿಧ್ಯಮಯ ಜಾತಿ, ಧರ್ಮ, ಸಂಪ್ರದಾಯ, ಪರಂಪರೆಯನ್ನು ಹೊಂದಿರುವ ರಾಷ್ಟ್ರವಾಗಿದ್ದು, ಎಲ್ಲರ ಆಶಯಗಳನ್ನು ಭಾರತದ ಸಂವಿಧಾನ ಹೊಂದಿದೆ, ಜಗತ್ತಿನಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಗಟ್ಟಿಯಾಗಿಲು ಭಾರತದ ಸಂವಿಧಾನ ಕಾರಣ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ಡಾ.ಡಿ.ಬಿ.ಕರಡೋಣಿ ಸಂವಿಧಾನದ ಪೀಠಿಕೆ ಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಡಾ.ಮುಕುಂದ ಲಮಾಣಿ, ಡಾ.ಮಹದೇವ ಬಿದ್ನಾಳ, ಡಾ.ಪ್ರಭಾಕರ ಕಾಂಬಳೆ ಪ್ರೊ.ಹೊಂಕನ್, ಪ್ರೊ.ರಾಜೇಂದ್ರ ಮಠ, ಪ್ರೊ.ವಿಜಯ ಪೂಜಾರ, ಪ್ರೊ.ರವಿ ಕೇಸರಕರ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *