“ಗಣೇಶ ಚತುರ್ಥಿ” ದಿನದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ:
ದಿನಾಂಕ: 18-09-2023 ಸೋಮವಾರದಂದು ” ಗಣೇಶ ಚತುರ್ಥಿ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಾಂಸ ಮಾರಾಟ ನಿಷೇಧ ಪ್ರತಿ ಲಗತ್ತಿಸಿದೆ
ಬೃಹತ್ ನೀರುಗಾಲುವೆಗಳ ಒತ್ತುವರಿಯನ್ನು ಗುರುತಿಸಲು ಸಾರ್ವಜನಿಕರಿಂದ ಮಾಹಿತಿ ಕೋರಿರುವ ಬಗ್ಗೆ:
ಘನ ಉಚ್ಛ ನ್ಯಾಯಾಲಯವು WP No. 38401/2014 ದಾವೆಯಲ್ಲಿ ರಾಜಕಾಲುವೆಗಳ ಮೇಲೆ ಹೊಸದಾಗಿ ಒತ್ತುವರಿಗಳು ಇದ್ದಲ್ಲಿ ಅಂತಹ ಒತ್ತುವರಿಗಳನ್ನು ತುರ್ತಾಗಿ ಗುರುತಿಸಿ, ಸದರಿ ಒತ್ತುವರಿಗಳನ್ನು ತೆರವುಗೊಳಿಸಲು ಶೀಘ್ರವಾಗಿ ಕ್ರಮ ಕೈಗೊಳ್ಳಲು ಸೂಚಿಸಿರುತ್ತದೆ. ಅದರಂತೆ ಕ್ರಮ ಕೈಗೊಳ್ಳಬೇಕಾಗಿದ್ದು, ಇದು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿದ್ದು, ಘನ ಸರ್ಕಾರದ ಆದೇಶ ಸಂಖ್ಯೆ: ನಅಇ 250 ಎಂಎನ್ವೈ 2018(ಭಾಗ-3), ಬೆಂಗಳೂರು ದಿನಾಂಕ:28.08.2023(1) ರಂತೆ ರಾಜಕಾಲುವೆಗಳ ಮೇಲೆ ಇರುವ ಒತ್ತುವರಿಗಳನ್ನು ಗುರುತಿಸಲು ಬಿಬಿಎಂಪಿ ವತಿಯಿಂದ ಕ್ರಮಕೈಗೊಳ್ಳಲಾಗುತ್ತಿರುತ್ತದೆ.
ಮುಂದುವರಿದು, ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತಗಳ ರಾಜಕಾಲುವೆಗಳಲ್ಲಿ ಒತ್ತುವರಿಗಳನ್ನು/ಅತಿಕ್ರಮಣಗಳನ್ನು ಗುರುತಿಸಲು ಸಾರ್ವಜನಿಕರು ಕೈಜೋಡಿಸಿದಲ್ಲಿ ಹೆಚ್ಚಿನ ಒತ್ತುವರಿಗಳನ್ನು ಗುರುತಿಸುವಲ್ಲಿ ಪಾಲಿಕೆಗೆ ಸಹಕಾರಿಯಾಗುತ್ತದೆ. ಸದರಿ ಒತ್ತುವರಿಗಳನ್ನು ತೆರವುಗೊಳಿಸಿಕೊಂಡು ರಾಜಕಾಲುವೆಗಳನ್ನು ನಿರ್ಮಾಣ ಮಾಡುವುದರಿಂದ ಮಳೆನೀರು ಸರಾಗವಾಗಿ ಹರಿದು ಮಳೆಗಾಲದಲ್ಲಿ ಉಂಟಾಗುವ ಪ್ರವಾಹ ಹಾನಿಯನ್ನು ತಡೆಗಟ್ಟಬಹುದಾಗಿರುತ್ತದೆ. ಆದುದರಿಂದ ಸ್ಥಳೀಯ/ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ರಾಜಕಾಲುವೆಗಳ ಮೇಲೆ ಯಾವುದಾದರೂ ಒತ್ತುವರಿಗಳು ತಮ್ಮ ಗಮನಕ್ಕೆ ಬಂದಿದ್ದರೆ ಅಂತಹ ಒತ್ತುವರಿಗಳ ಮಾಹಿತಿಯನ್ನು ಭಾವಚಿತ್ರದೊಂದಿಗೆ ಆಯಾ ವಿಭಾಗದ ಕಾರ್ಯಪಾಲಕ ಅಭಿಯಂತರರು, ಬೃಹತ್ ನೀರುಗಾಲುವೆ ರವರಿಗೆ ದಿನಾಂಕ: 20-09-2023ರ ಅಪರಾಹ್ನ 2.00 ಗಂಟೆಯ ಒಳಗಾಗಿ ಸಲ್ಲಿಸಲು ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ರವರು ಕೋರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಪ್ರಕಟಣೆಯ ಪ್ರತಿಯನ್ನು ಲಗತ್ತಿಸಲಾಗಿದೆ.