ಕೋಲಾರ :- ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಉತ್ತಮ ಶಿಕ್ಷಣ ನೀಡುತ್ತಿದ್ದು ಮಕ್ಕಳು ಚೆನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆದರೆ ಅದೇ ನಿಮ್ಮ ತಂದೆ ತಾಯಿಗಳಿಗೆ ನೀವೂ ನೀಡುವ ಕೊಡುಗೆ ಎಂದು ಕೋಲಾರ ರೋಟರಿ ಸೆಂಟ್ರಲ್ ಅಧ್ಯಕ್ಷ ಕೆ.ಎನ್.ಪ್ರಕಾಶ್ ಹೇಳಿದರು.
ನಗರದ ಹೃದಯ ಭಾಗದಲ್ಲಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ (ಜೂನಿಯರ್ ಕಾಲೇಜು) ಮಕ್ಕಳಿಗೆ ಕೋಲಾರ ರೋಟರಿ ಸೆಂಟ್ರಲ್ ವತಿಯಿಂದ ಊಟದ ತಟ್ಟೆ ಹಾಗೂ ಮಾಸ್ಕ್ ವಿತರಿಸಿ ಅವರು ಮಾತನಾಡಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಸ್ಥಾನಕ್ಕೆ ಹೋದ ಮೇಲೆ ಈ ಶಾಲೆಯನ್ನು ಮರೆಯಬಾರದು ಶಾಲೆಯನ್ನು ಅಭಿವೃದ್ದಿ ಪಡಿಸಲು ಶ್ರಮಿಸಬೇಕು ಎಂದರು.
ಶಾಲೆಯ ಎಲ್ಲಾ ಮಕ್ಕಳಿಗೆ ಊಟದ ತಟ್ಟೆಯನ್ನು ವಿತರಿಸುತ್ತಿದ್ದು ಮುಂದಿನ ದಿನಗಳಲ್ಲಿ ರೋಟರಿ ಸೆಂಟ್ರಲ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಇತರೆ ಕಾಮಗಾರಿಗಳನ್ನು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ನಗರದ ರಸ್ತೆಗಳಲ್ಲಿ ಧೂಳು ಹೆಚ್ಚಾಗಿದ್ದು, ಮಕ್ಕಳು ಶಾಲೆಗೆ ಬರುವಾಗ ತಪ್ಪದೆ ಮಾಸ್ಕ್ ಧರಿಸಿಕೊಂಡು ಬನ್ನಿ ಇದರಿಂದ ಸಾಂಕ್ರಮಿಕ ರೋಗಗಳನ್ನು ತಡೆಯಬಹುದು ಎಂದರು. ಹಾಗೂ ತಮ್ಮ ಮನೆಗಳ ಬಳಿ ಗಿಡಗಳನ್ನು ನೆಟ್ಟು ಬೆಳಿಸಿ ಪರಿಸರವನ್ನು ಉಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೋಲಾರ ರೋಟರಿ ಸೆಂಟ್ರಲ್ ಕಾರ್ಯದರ್ಶಿ ಹೆಚ್.ವಿಶ್ವನಾಥಗೌಡ, ಖಜಾಂಚಿ ರಾಜ್ಕುಮಾರ್, ರೊಟೆರಿಯನ್ಗಳಾದ ಚಂಪಕ್ ರಮೇಶ್, ಪತ್ರಕರ್ತ ಚಂದ್ರು, ಆನಂದ್, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ಉಪ ಪ್ರಾಂಶುಪಾಲೆ ರಾಧಮ್ಮ, ಶಿಕ್ಷಕರಾದ ಕೆಂಪೇಗೌಡ, ದ್ವಿತಿಯ ದರ್ಜೆ ಸಹಾಯಕ ಮಂಜುನಾಥ್, ಪ್ರೌಢಶಾಲಾ ಶಿಕ್ಷಕರು, ಶಾಲಾ ಮಕ್ಕಳು ಮತ್ತಿತರರು ಉಪಸ್ಥಿತರಿದ್ದರು.
